AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ನಗರ ವಿವಿ ಮಹಾ ಯಡವಟ್ಟು; ಆ ಒಂದೇ ಒಂದು ಸಬ್ಜೆಕ್ಟ್​ನಲ್ಲಿ 246 ಕಾಲೇಜುಗಳ ಎಲ್ಲಾ ವಿದ್ಯಾರ್ಥಿಗಳು ಫೇಲ್

ಬಹುತೇಕ ವಿದ್ಯಾರ್ಥಿಗಳು ಎಲ್ಲಾ ವಿಷ್ಯಗಳಲ್ಲೂ ಡಿಸ್ಟಿಕ್ಷನ್ ತೆಗೆದುಕೊಂಡಿದ್ದಾರೆ. ಆದ್ರೆ ADVANCED ACCOUNTING ವಿಷ್ಯಕ್ಕೆ ಮಾತ್ರ ಕಡಿಮೆ ಅಂಕ ನೀಡಿರೋದು ಅನುಮಾನ ಹುಟ್ಟಿಸಿದೆ.

ಬೆಂಗಳೂರು ನಗರ ವಿವಿ ಮಹಾ ಯಡವಟ್ಟು; ಆ ಒಂದೇ ಒಂದು ಸಬ್ಜೆಕ್ಟ್​ನಲ್ಲಿ 246 ಕಾಲೇಜುಗಳ ಎಲ್ಲಾ ವಿದ್ಯಾರ್ಥಿಗಳು ಫೇಲ್
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Jun 29, 2022 | 10:36 PM

Share

ಬೆಂಗಳೂರು: ಮೊನ್ನೆಯಷ್ಟೇ ವಿಟಿಯು(VTU) ಫಲಿತಾಂಶದಲ್ಲಿ ದೊಡ್ಡ ಎಡವಟ್ಟನ್ನ ಮಾಡಿತ್ತು. ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಕುತ್ತು ತರುವ ಫಲಿತಾಂಶ ನೀಡಿತ್ತು. ಈಗ ಬೆಂಗಳೂರು ನಗರ ವಿವಿ(Bengaluru City University) ಇದೇ ರೀತಿಯ ಎಡವಟ್ಟನ್ನ ಮಾಡಿ ಪೇಚಿಗೆ ಸಿಲುಕಿಕೊಂಡಿದೆ. ಬರೋಬ್ಬರಿ 246 ಕಾಲೇಜಿನ ವಿದ್ಯಾರ್ಥಿಗಳು ಸಾಮೂಹಿಕವಾಗಿ ಫೇಲ್ ಆಗಿದ್ದಾರೆ. ಇದಕ್ಕೆಲ್ಲಾ ಕಾರಣ ಬೆಂಗಳೂರು ನಗರ ವಿವಿಯ ಬೇಜವಾಬ್ದಾರಿತನ ಅನ್ನೋ ಆರೋಪ ಕೇಳಿಬಂದಿದೆ.

ಬಿಕಾಂ ವಿದ್ಯಾರ್ಥಿಗಳಿಗೆ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ 5 ನೇ ಸೆಮಿಸ್ಟರ್‌ನ ಎಕ್ಸಾಂ ನಡೆದಿದೆ. ಅಡ್ವಾನ್ಸಡ್ ಅಕೌಂಟಿಂಗ್ ಎಂಬ ವಿಷಯಕ್ಕೆ ಒಟ್ಟು 100 ಅಂಕಗಳಿದ್ದು, 30 ಅಂಕ ಇಂಟರ್ನಲ್ಸ್ , 70 ಅಂಕ ಥಿಯರಿಗೆ ನೀಡಲಾಗಿದೆ. ಆದ್ರೆ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಇಂಟರ್ನಲ್ಸ್‌ನಲ್ಲಿ ಫುಲ್ ಮಾರ್ಕ್ಸ್ ಸಿಕ್ಕಿದ್ರೂ, ಥಿಯರಿಯಲ್ಲಿ ಕಳಪೆ ಅಂಕ ನೀಡಿ ಫೇಲ್ ಮಾಡಲಾಗಿದೆಯಂತೆ. ಬೆಂಗಳೂರು ನಗರ ವಿವಿ ವ್ಯಾಪ್ತಿಗೆ ಒಳಪಡುವ 246ಕಾಲೇಜುಗಳಲ್ಲೂ ಇದೇ ರೀತಿಯ ಫಲಿತಾಂಶ ನೀಡಲಾಗಿದೆ. ಇದು ಮರು ಮೌಲ್ಯಮಾಪನದಿಂದ ದುಡ್ಡು ಮಾಡುವ ತಂತ್ರ ಅನ್ನೋದು ವಿದ್ಯಾರ್ಥಿಗಳ ಆರೋಪವಾಗಿದೆ. ಇದನ್ನೂ ಓದಿ: ಆಲಿಯಾ ಕೋಪಕ್ಕೆ ಪಾಕಿಸ್ತಾನ ನಟಿಯರ ಬೆಂಬಲ; ‘ನಮ್ಮಲ್ಲೊಂದೇ ಹೀಗೆ ಎಂದುಕೊಂಡಿದ್ದೆ’ ಎಂದ ಪಾಕ್ ನಟಿ

ಬಹುತೇಕ ವಿದ್ಯಾರ್ಥಿಗಳು ಎಲ್ಲಾ ವಿಷ್ಯಗಳಲ್ಲೂ ಡಿಸ್ಟಿಕ್ಷನ್ ತೆಗೆದುಕೊಂಡಿದ್ದಾರೆ. ಆದ್ರೆ ADVANCED ACCOUNTING ವಿಷ್ಯಕ್ಕೆ ಮಾತ್ರ ಕಡಿಮೆ ಅಂಕ ನೀಡಿರೋದು ಅನುಮಾನ ಹುಟ್ಟಿಸಿದೆ. ಇನ್ನು ರಿಸಲ್ಟ್ ಬಗ್ಗೆ ಮಾತನಾಡಿದ ಬೆಂಗಳೂರು ನಗರ ವಿವಿ ಮೌಲ್ಯಮಾಪನ ಕುಲಸಚಿವ ಲೋಕೇಶ್, ಯಾವ ವಿದ್ಯಾರ್ಥಿಯನ್ನೂ ಅನಾವಶ್ಯಕವಾಗಿ ಫೇಲ್ ಮಾಡಿಲ್ಲ. ಅವರ ಉತ್ತರಗಳನ್ನ ಪರಿಶೀಲನೆ ಮಾಡಿಯೇ ಫಲಿತಾಂಶ ನೀಡಲಾಗಿದೆ. ದೂರಿನನ್ವಯ ಮತ್ತೊಮ್ಮೆ ಪರಿಶೀಲನೆ ನಡೆಸಲಾಗುತ್ತೆ. ಒಂದು ವೇಳೆ ಎಲ್ಲಾದ್ರೂ ಲೋಪ ಕಂಡು ಬಂದ್ರೆ, ಮೌಲ್ಯಮಾಪನ ನಡೆಸಿದ ಪ್ರಾಧ್ಯಾಪಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸ್ಪಷ್ಟನೆ ನೀಡಿದ್ದಾರೆ.

ಒಟ್ನಲ್ಲಿ ಉತ್ತಮ ಶಿಕ್ಷಣ ನೀಡಬೇಕಿದ್ದ ವಿವಿಗಳು, ಇತ್ತೀಚೆಗೆ ಒಂದರ ಹಿಂದೆ ಒಂದು ವಿವಾದಗಳನ್ನ ಮೈಮೇಲೆ ಎಳೆದುಕೊಳ್ತಿದೆ. ಇನ್ನಾದ್ರೂ ಪ್ರಜ್ಞೆಯಿಂದ ಮೌಲ್ಯಮಾಪನ ನಡೆಸಿ, ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಬೇಕಿದೆ.

ವರದಿ: ಅನಿಲ್ ಕಲ್ಕೆರೆ, ಟಿವಿ9, ಬೆಂಗಳೂರು

Published On - 10:36 pm, Wed, 29 June 22

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?