AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಟ್ಯಾಕ್ಸಿ ಕಂಪನಿ ವಿರುದ್ಧ ದೂರು: ಒಂದು ವಾರ ಗಡುವು ನೀಡಿದ ಖಾಸಗಿ ಸಾರಿಗೆ ಸಂಘಟನೆಗಳು

ಹೈಕೋರ್ಟ್‌ನಿಂದ ಬೈಕ್ ಟ್ಯಾಕ್ಸಿಗಳ ಮೇಲೆ ನಿಷೇಧ ಹೇರಲ್ಪಟ್ಟಿದ್ದರೂ, ಉಬರ್ ಮತ್ತು ರ‍್ಯಾಪಿಡೋ ಕಂಪನಿಗಳು ತಮ್ಮ ಸೇವೆಯನ್ನು ಮುಂದುವರೆಸಿರುವುದಾಗಿ ಖಾಸಗಿ ಸಾರಿಗೆ ಸಂಘಟನೆಗಳು ಆರೋಪಿಸಿವೆ. ಸದ್ಯ ಈ ವಿಚಾರವಾಗಿ ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಿಗೆ ದೂರು ನೀಡಲಾಗಿದ್ದು, ಬೈಕ್ ಟ್ಯಾಕ್ಸಿ ಸೇವೆ ನಿಲ್ಲಿಸಲು ಏಳು ದಿನ ಗಡುವು ನೀಡಲಾಗಿದೆ.

ಬೈಕ್ ಟ್ಯಾಕ್ಸಿ ಕಂಪನಿ ವಿರುದ್ಧ ದೂರು: ಒಂದು ವಾರ ಗಡುವು ನೀಡಿದ ಖಾಸಗಿ ಸಾರಿಗೆ ಸಂಘಟನೆಗಳು
ಪ್ರಾತಿನಿಧಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on: Aug 30, 2025 | 12:52 PM

Share

ಬೆಂಗಳೂರು, ಆಗಸ್ಟ್​ 30: ರಾಜ್ಯದಲ್ಲಿ ಈಗಾಗಲೇ ಬೈಕ್ ಟ್ಯಾಕ್ಸಿ ಸಂಚಾರಕ್ಕೆ (Bike taxi services) ಹೈಕೋರ್ಟ್ ನಿಷೇಧ ಹೇರಿದೆ. ಹೀಗಿದ್ದರೂ ರ‍್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ ಕಂಪನಿಗಳು ಮಾತ್ರ ಇಂದಿಗೂ ತಮ್ಮ ಸೇವೆಯನ್ನು ಮುಂದುವರೆಸಿರುವ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಿಗೆ ಖಾಸಗಿ ಸಾರಿಗೆ ಸಂಘಟನೆಗಳು ದೂರು (complaint) ನೀಡಿದ್ದು, ಬೈಕ್ ಟ್ಯಾಕ್ಸಿ ಸೇವೆ ನಿಲ್ಲಿಸಲು ಒಂದು ವಾರ ಗಡುವು ನೀಡಿದೆ.

ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಿ ಹೈಕೋರ್ಟ್ ಆದೇಶಿಸಿಲ್ಲ ಎಂದು ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ನಿಷೇಧ ವಿಚಾರವಾಗಿ ಉಂಟಾಗಿದ್ದ ಕೆಲ ಗೊಂದಲಗಳಿಗೆ ಇತ್ತೀಚೆಗೆ ಕರ್ನಾಟಕ ಹೈಕೋರ್ಟ್ ತೆರೆ ಎಳೆದಿತ್ತು. ಇದರ ಬೆನ್ನಲ್ಲೇ ಬೈಕ್ ಟ್ಯಾಕ್ಸಿ ಮಾತ್ರ ನಿರಂತರವಾಗಿ ತಮ್ಮ ಸೇವೆಯನ್ನು ಮುಂದುವರೆಸಿರುವುದಾಗಿ ಖಾಸಗಿ ಸಾರಿಗೆ ಸಂಘಟನೆಗಳು ಆರೋಪಿಸಿವೆ.

ಟ್ಯಾಕ್ಸ್ ಕಟ್ಟಲ್ಲ ಎಂದ ಆಟೋ ಚಾಲಕರು

ಬೈಕ್ ಟ್ಯಾಕ್ಸಿ ಸೇವೆ ನಿಲ್ಲಿಸಲು ಖಾಸಗಿ ಸಾರಿಗೆ ಸಂಘಟನೆಗಳು ಸಾರಿಗೆ ಇಲಾಖೆಗೆ ಏಳು ದಿನಗಳ ಕಾಲ ಗಡುವು ನೀಡಿದೆ. ಸಾರಿಗೆ ಇಲಾಖೆ ಬೈಕ್ ಟ್ಯಾಕ್ಸಿ ಕಂಪನಿಗಳ ವಿರುದ್ಧ ಕ್ರಮಕೈಗೊಳ್ಳದಿದ್ದರೆ, ಎಲ್ಲಾ ಆಟೋ, ಬಸ್, ಟ್ಯಾಕ್ಸಿಗಳನ್ನು ವೈಟ್ ಬೋರ್ಡ್ ಮಾಡಿ ಓಡಿಸುತ್ತೇವೆ. ಯಾವುದೇ ಟ್ಯಾಕ್ಸ್ ಕಟ್ಟಲ್ಲ ಎಂದು ಆಟೋ ಚಾಲಕರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಅನುಮತಿ ಇದೆಯಾ? ಗೊಂದಲಗಳಿಗೆ ತೆರೆ ಎಳೆದ ಕರ್ನಾಟಕ ಹೈಕೋರ್ಟ್

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ನಿಷೇಧವಿದ್ದರೂ ಬೈಕ್ ಟ್ಯಾಕ್ಸಿ ಆಪರೇಟರ್​ಗಳ ಕಾರ್ಯಾಚರಣೆ ಆಗ್ತಿದ್ದು ಈ ಬಗ್ಗೆ ಹೈಕೋರ್ಟ್​ಗೆ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಮಾಹಿತಿ ನೀಡಿದ್ದರು. ಈ ವೇಳೆ ಸಿಜೆ ವಿಭು ಬಕ್ರು, ನ್ಯಾ. ಸಿ.ಎಂ. ಜೋಶಿ ಅವರಿದ್ದ ಪೀಠ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಿ ಹೈಕೋರ್ಟ್ ಆದೇಶಿಸಿಲ್ಲ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ಬೆಂಗಳೂರು ಸೇರಿ ಕರ್ನಾಟಕದಲ್ಲಿ ಇಂದಿನಿಂದ ಬೈಕ್ ಟ್ಯಾಕ್ಸಿ ಸೇವೆ ಪುನಾರಂಭ

ಬೈಕ್ ಟ್ಯಾಕ್ಸಿ ಪ್ರಸ್ತಾವನೆ ಬಗ್ಗೆ ಸರ್ಕಾರ ಪರಿಶೀಲಿಸುತ್ತಿರುವ ಹಿನ್ನೆಲೆ ಬೈಕ್ ಟ್ಯಾಕ್ಸಿ ಮಾಲೀಕರು, ಚಾಲಕರ ಮೇಲೆ ಕ್ರಮ ಬೇಡವೆಂದು ಹೇಳಿದ್ದೆವು. ಬೈಕ್ ಟ್ಯಾಕ್ಸಿ ಅಗ್ರಿಗೇಟರ್ ಕಂಪನಿಗಳ ಬಗ್ಗೆ ನಾವು ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಬಳಿಕ ಬೈಕ್ ಟ್ಯಾಕ್ಸಿ ಬಗ್ಗೆ ನಿಲುವು ತಿಳಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದ್ದು, 4 ವಾರಗಳ ಕಾಲಾವಕಾಶ ನೀಡಿ ಸೆ.22ಕ್ಕೆ ವಿಚಾರಣೆ ನಿಗದಿಪಡಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?