AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ತಿಂಗಳಿಗೆ 1.5 ಲಕ್ಷ ರೂ. ಸಂಬಳ, ಉಳಿಯೋದು 20 ಸಾವಿರ ಮಾತ್ರ! ಟೆಕ್ಕಿ ಸಂಬಂಧಿಯ ಪೋಸ್ಟ್ ವೈರಲ್

ಬೆಂಗಳೂರಿನಲ್ಲಿ ಜೀವನ ವೆಚ್ಚ ಗಣನೀಯವಾಗಿ ಹೆಚ್ಚಾಗಿದ್ದು, ವೈರಲ್ ಪೋಸ್ಟ್‌ ಒಂದು ಈಗ ಚರ್ಚೆಗೆ ಗ್ರಾಸವಾಗಿದೆ. ತಿಂಗಳಿಗೆ 1.5 ಲಕ್ಷ ರೂ. ಸಂಬಳ ಗಳಿಸುವ ಟೆಕ್ಕಿಯೊಬ್ಬರಿಗೆ ಕೇವಲ 15-20 ಸಾವಿರ ರೂ. ಮಾತ್ರ ಉಳಿಯುತ್ತಿದೆ ಎಂದು ಅವರ ಸೋದರ ಸಂಬಂಧಿ ಮಾಡಿರುವ ಎಕ್ಸ್​ ಸಂದೇಶ ವೈರಲ್ ಆಗಿದೆ. ಬಾಡಿಗೆ, ಆಹಾರ, ಸಾರಿಗೆ, ಮನರಂಜನೆ ಇತ್ಯಾದಿ ಖರ್ಚುಗಳಿಂದ ಉಳಿತಾಯ ಕಷ್ಟವಾಗಿದೆ. ಇದು ಬೆಂಗಳೂರಿನ ಮಹಾನಗರ ಜೀವನದ ಕಠಿಣ ವಾಸ್ತವ ಚಿತ್ರಣವನ್ನು ತೋರಿಸುತ್ತದೆ ಎಂದು ಅವರು ಬರೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ತಿಂಗಳಿಗೆ 1.5 ಲಕ್ಷ ರೂ. ಸಂಬಳ, ಉಳಿಯೋದು 20 ಸಾವಿರ ಮಾತ್ರ! ಟೆಕ್ಕಿ ಸಂಬಂಧಿಯ ಪೋಸ್ಟ್ ವೈರಲ್
ಸಾಂದರ್ಭಿಕ ಚಿತ್ರImage Credit source: TV9 Network
ಗಣಪತಿ ಶರ್ಮಾ
|

Updated on: Mar 15, 2026 | 1:05 PM

Share

ಬೆಂಗಳೂರು, ಮಾರ್ಚ್ 15: ಬೆಂಗಳೂರಿನಲ್ಲಿ (Bangalore) ಜೀವನ ನಿರ್ವಹಣೆ ವೆಚ್ಚ ಎಷ್ಟರ ಮಟ್ಟಿಗೆ ಹೆಚ್ಚಾಗಿದೆ ಎಂಬುದನ್ನು ತೋರಿಸುವ ಒಂದು ಸಾಮಾಜಿಕ ಮಾಧ್ಯಮ ಪೋಸ್ಟ್ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ತಿಂಗಳಿಗೆ 1.5 ಲಕ್ಷ ರೂ. ಸಂಬಳ ಪಡೆದರೂ ತಿಂಗಳ ಕೊನೆಯಲ್ಲಿ ಕೇವಲ 15 ರಿಂದ 20 ಸಾವಿರ ರೂ. ಮಾತ್ರ ಉಳಿಯುತ್ತದೆ ಎಂಬ ಟೆಕ್ಕಿಯೊಬ್ಬರ ಅನುಭವವನ್ನು ಅವರ ಸೋದರ ಸಂಬಂಧಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದು ನೆಟ್ಟಿಗರ ಗಮನ ಸೆಳೆದಿದೆ.

@AlfinCodes ಎಂಬ ಎಕ್ಸ್​ ಖಾತೆಯಲ್ಲಿ ವ್ಯಕ್ತಿಯೊಬ್ಬರು ಸೋದರಸಂಬಂಧಿಯ ಅನುಭವವನ್ನು ವಿವರಿಸಿದ್ದಾರೆ. ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿರುವ ಆತ ಸಾಫ್ಟ್‌ವೇರ್ ಡೆವಲಪರ್ ಆಗಿ ಉತ್ತಮ ಅವಕಾಶ ದೊರೆತು ತಿಂಗಳಿಗೆ 1.5 ಲಕ್ಷ ಸಂಬಳದ ಕೆಲಸಕ್ಕೆ ಬೆಂಗಳೂರಿಗೆ ತೆರಳಿದ್ದಾನೆ. ಆರಂಭದಲ್ಲಿ ಕುಟುಂಬದವರು ದೊಡ್ಡ ನಗರ, ದೊಡ್ಡ ಸಂಬಳ ಎಂಬ ನಿರೀಕ್ಷೆಯೊಂದಿಗೆ ಅವನು ಯಶಸ್ಸು ಸಾಧಿಸಿದ್ದಾನೆ ಎಂದು ಭಾವಿಸಿದ್ದರು. ಆದರೆ, ಬೆಂಗಳೂರಿನ ನೈಜ ಪರಿಸ್ಥಿತಿ ಬೇಗನೆ ಗೊತ್ತಾಯಿತು ಎಂದು ಪೋಸ್ಟ್‌ನಲ್ಲಿ ವಿವರಿಸಲಾಗಿದೆ.

ಕಚೇರಿಯ ಸಮೀಪದ ಸಣ್ಣ ಅಪಾರ್ಟ್‌ಮೆಂಟ್‌ನ ಬಾಡಿಗೆಗೆ ತಿಂಗಳಿಗೆ ಸುಮಾರು 36 ಸಾವಿರ ರೂ. ಖರ್ಚಾಗುತ್ತಿತ್ತು. ಆಹಾರ ಮತ್ತು ದಿನಸಿ ವೆಚ್ಚಗಳಿಗೆ 13 ಸಾವಿರದಿಂದ 15 ಸಾವಿರ ರೂ.ವರೆಗೆ ಹೋಗುತ್ತಿತ್ತು. ನಗರದಲ್ಲಿನ ಭಾರೀ ಟ್ರಾಫಿಕ್ ಕಾರಣದಿಂದ ಕ್ಯಾಬ್ ಮತ್ತು ಆಟೋ ಪ್ರಯಾಣಕ್ಕೆ ತಿಂಗಳಿಗೆ 6 ಸಾವಿರದಿಂದ 8 ಸಾವಿರ ರೂ.ವರೆಗೆ ಖರ್ಚಾಗುತ್ತಿತ್ತು.

ಇದಕ್ಕೂ ಮೇಲಾಗಿ ಸ್ವಿಗ್ಗಿ ಆರ್ಡರ್, ಕಾಫಿ ಹಾಗೂ ವಾರಾಂತ್ಯದ ಖರ್ಚುಗಳಿಗೆ ಸುಮಾರು 10 ಸಾವಿರದಿಂದ 12 ಸಾವಿರ ರೂ.ವರೆಗೆ ವೆಚ್ಚವಾಗುತ್ತಿತ್ತು. ಇದಲ್ಲದೆ ಚಂದಾದಾರಿಕೆಗಳು, ವೈದ್ಯಕೀಯ ವೆಚ್ಚಗಳು, ಅನಿರೀಕ್ಷಿತ ಬಿಲ್‌ಗಳು ಹಾಗೂ ಮನೆಗೆ ಹಣ ಕಳುಹಿಸುವುದು ಸೇರಿದಂತೆ ಹಲವಾರು ಖರ್ಚುಗಳು ಕೂಡ ಸೇರಿಕೊಳ್ಳುತ್ತವೆ ಎಂದು ಎಕ್ಸ್​ ಪೋಸ್ಟ್‌ನಲ್ಲಿ ಹೇಳಲಾಗಿದೆ. ಈ ಎಲ್ಲ ಖರ್ಚುಗಳ ಬಳಿಕ ತಿಂಗಳ ಕೊನೆಯಲ್ಲಿ ಆತನ ಬಳಿ ಉಳಿಯುತ್ತಿದ್ದದ್ದು ಕೇವಲ 15 ಸಾವಿರದಿಂದ 20 ಸಾವಿರ ರೂ. ಮಾತ್ರ ಎಂದು ಪೋಸ್ಟ್​​ನಲ್ಲಿ ಉಲ್ಲೇಖಿಸಲಾಗಿದೆ.

ವೈರಲ್ ಆಗಿರುವ ಎಕ್ಸ್ ಪೋಸ್ಟ್

ಈ ಅನುಭವದಿಂದ ದೊಡ್ಡ ನಗರಗಳಲ್ಲಿ ಸಂಬಳದ ಅರ್ಥವೇ ಬೇರೆ ಎಂದು ಅವನಿಗೆ ತಿಳಿಯಿತು ಎಂದು ಎಕ್ಸ್ ಪೋಸ್ಟ್​ನಲ್ಲಿ ಉಲ್ಲೇಖಿಸಲಾಗಿದೆ. ನಮ್ಮ ಊರಿನಲ್ಲಿ 1 ಲಕ್ಷ ರೂ.ಗಿಂತ ಹೆಚ್ಚು ಸಂಬಳ ಎಂದರೆ ತುಂಬಾ ದೊಡ್ಡದಾಗಿ ಕಾಣುತ್ತದೆ. ಆದರೆ ಬೆಂಗಳೂರಿನಂತಹ ನಗರದಲ್ಲಿ ಅದು ನೀವು ಜೀವನವನ್ನು ಆರಂಭಿಸುತ್ತಿದ್ದೀರಿ ಅಷ್ಟೇ ಎಂದರ್ಥ. ದೊಡ್ಡ ಸಂಬಳ, ಆದರೆ ಸಣ್ಣ ಉಳಿತಾಯ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅನೇಕರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಕೆಲವರು ಬೆಂಗಳೂರಿನಲ್ಲಿ ಜೀವನ ವೆಚ್ಚ ನಿಜವಾಗಿಯೂ ದುಬಾರಿ ಎಂದು ಒಪ್ಪಿಕೊಂಡರೆ, ಇನ್ನೂ ಕೆಲವರು ಮೆಟ್ರೋ ಮಾರ್ಗದ ಬಳಿ ಅಥವಾ ಕಚೇರಿಯಿಂದ ಸ್ವಲ್ಪ ದೂರದ ಪ್ರದೇಶಗಳಲ್ಲಿ ಮನೆ ತೆಗೆದುಕೊಂಡರೆ ಬಾಡಿಗೆ ವೆಚ್ಚವನ್ನು ಕಡಿಮೆ ಮಾಡಬಹುದು ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಜಿಮ್‌ಗೆ ಲವ್ ಇರುವವರು ಹೋಗಬಾರದು, ಇದು ಸಿಂಗಲ್ಸ್‌ಗೆ ಮಾತ್ರ : ಬ್ರೋ ಕೋಡ್’ ಸಂಸ್ಕೃತಿ ವೈರಲ್

ಒಟ್ಟಿನಲ್ಲಿ, ದೊಡ್ಡ ಸಂಬಳ ಇದ್ದರೂ ಬೆಂಗಳೂರಿನಂಥ ಮಹಾನಗರಗಳಲ್ಲಿ ಜೀವನ ವೆಚ್ಚ ಹೆಚ್ಚಿರುವುದರಿಂದ ಉಳಿತಾಯ ಕಡಿಮೆಯಾಗುತ್ತದೆ ಎಂಬ ವಿಚಾರ ಮತ್ತೆ ಚರ್ಚೆಗೆ ಬಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ