AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವರಮಹಾಲಕ್ಷ್ಮಿ ಹಬ್ಬದಂದು ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಪೂಜೆ ಮಾಡಿದ ಜನ!

ಬೆಂಗಳೂರಿನ ಕಳಪೆ ರಸ್ತೆಗಳ ವಿರುದ್ಧ ಪ್ರತಿಭಟಿಸಲು ವಿನೂತನವಾದ ಕ್ರಮವನ್ನು ಆಯ್ಕೆ ಮಾಡಿಕೊಂಡ ನಿವಾಸಿಗಳು ರಸ್ತೆಯ ಗುಂಡಿಗಳಿಗೆ ಪೂಜೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಜಯನಗರದ ನಿವಾಸಿಗಳು ವರಮಹಾಲಕ್ಷ್ಮಿ ವ್ರತದ ನಿಮಿತ್ತ ವಿಶೇಷವಾಗಿ ರಸ್ತೆ ಗುಂಡಿಗೆ ಪೂಜೆ ಸಲ್ಲಿಸಿದ್ದಾರೆ.

ಸುಷ್ಮಾ ಚಕ್ರೆ
|

Updated on:Aug 17, 2024 | 8:28 PM

Share

ಬೆಂಗಳೂರು: ಬೆಂಗಳೂರಿನ ಕಳಪೆ ರಸ್ತೆಗಳಿಂದ ಜನರು ಬೇಸತ್ತಿದ್ದಾರೆ. ಇದರ ವಿರುದ್ಧ ಪ್ರತಿಭಟಿಸಲು ವಿನೂತನ ಮಾರ್ಗ ಕಂಡುಕೊಂಡ ಜಯನಗರದ ದಂಪತಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ರಸ್ತೆ ಗುಂಡಿಗಳಿಗೆ ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ರಸ್ತೆಯ ಹೊಂಡಗಳಿಂದ ಹಲವಾರು ಅಪಘಾತಗಳು ಉಂಟಾಗಿ, ಜೀವಗಳನ್ನು ಬಲಿತೆಗೆದುಕೊಳ್ಳುತ್ತಿವೆ. ಈ ಬಗ್ಗೆ ದೂರುಗಳ ಹೊರತಾಗಿಯೂ, ಅನೇಕ ನಗರಗಳಲ್ಲಿ ರಸ್ತೆ ಪರಿಸ್ಥಿತಿಗಳು ಹದಗೆಡುವುದರೊಂದಿಗೆ ಸಮಸ್ಯೆ ಮುಂದುವರಿದಿದೆ.

ಬೈಕ್ ಸವಾರರು ಮತ್ತು ವಾಹನಗಳು ಗಂಭೀರ ಅಪಘಾತಗಳನ್ನು ಎದುರಿಸುತ್ತಿರುವ ವೀಡಿಯೊಗಳು ಮತ್ತು ಸಿಸಿಟಿವಿ ದೃಶ್ಯಗಳು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಆದರೆ, ಹಲವು ಪ್ರದೇಶಗಳಲ್ಲಿ ಸ್ಥಳೀಯರು ಪದೇ ಪದೇ ಮನವಿ ಮಾಡಿದರೂ ರಸ್ತೆ ಸ್ಥಿತಿ ಬದಲಾಗಿಲ್ಲ. ಹೀಗಾಗಿ, ರಸ್ತೆಯ ಹೊಂಡಗಳಿಗೆ ಹೂವು ಹಾಕಿ, ಆರತಿ ಮಾಡಿ ಪೂಜೆ ಮಾಡುವ ಮೂಲಕ ಜಯನಗರದ ದಂಪತಿ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: Crime News: 13 ವರ್ಷದ ಮಗಳ ಮೇಲೆ ಅಪ್ಪನಿಂದ ಅತ್ಯಾಚಾರ; ಉತ್ತರ ಪ್ರದೇಶದಲ್ಲೊಂದು ಶಾಕಿಂಗ್ ಘಟನೆ

ನೀರು ತುಂಬಿದ ಬೆಂಗಳೂರಿನ ದೊಡ್ಡ ಗುಂಡಿಯ ಸುತ್ತ ಮಹಿಳೆ ಮತ್ತು ಪುರುಷ ಧಾರ್ಮಿಕ ಕ್ರಿಯೆಯನ್ನು ನಡೆಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಅವರು ಆ ಗುಂಡಿಗೆ ಹೂವಿನ ದಳಗಳು, ಅರಿಶಿನ ಪುಡಿ ಮತ್ತು ಕುಂಕುಮವನ್ನು ಹಾಕಿ ಪೂಜೆ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:25 pm, Sat, 17 August 24

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​