AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10.45 ಗಂಟೆಯಲ್ಲಿ ಶ್ರೀಲಂಕಾದಿಂದ ಭಾರತಕ್ಕೆ ಈಜಿದ ಜೋಡಿ: ಐತಿಹಾಸಿಕ ಸಾಧನೆ ಮಾಡಿದ ಬೆಂಗಳೂರಿನ ದಂಪತಿ

ಬೆಂಗಳೂರಿನ ಡ್ಯಾನಿಶ್ ಅಬ್ದಿ ಮತ್ತು ವೃಶಾಲಿ ಪ್ರಸಾದ್ ದಂಪತಿ ಶ್ರೀಲಂಕಾದಿಂದ ಭಾರತಕ್ಕೆ ಪಾಲ್ಕ್ ಜಲಸಂಧಿ ಮೂಲಕ ಈಜಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. 32 ಕಿ.ಮೀ. ದೂರವನ್ನು 10 ಗಂಟೆ 45 ನಿಮಿಷಗಳಲ್ಲಿ ಕ್ರಮಿಸಿ, ಈ ಮಾರ್ಗದಲ್ಲಿ ಓಪನ್ ವಾಟರ್ ಈಜು ಪೂರ್ಣಗೊಳಿಸಿದ ಮೊದಲ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರ ಈ ಸಾಧನೆ ಭಾರಿ ಮೆಚ್ಚುಗೆಗೆ ವ್ಯಕ್ತವಾಗಿದ್ದು, ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

10.45 ಗಂಟೆಯಲ್ಲಿ ಶ್ರೀಲಂಕಾದಿಂದ ಭಾರತಕ್ಕೆ ಈಜಿದ ಜೋಡಿ: ಐತಿಹಾಸಿಕ ಸಾಧನೆ ಮಾಡಿದ ಬೆಂಗಳೂರಿನ ದಂಪತಿ
10.45 ಗಂಟೆಯಲ್ಲಿ ಶ್ರೀಲಂಕಾದಿಂದ ಭಾರತಕ್ಕೆ ಈಜಿದ ಜೋಡಿ
ಪ್ರಸನ್ನ ಹೆಗಡೆ
|

Updated on: May 12, 2026 | 3:54 PM

Share

ಬೆಂಗಳೂರು, ಮೇ 12: ಶ್ರೀಲಂಕಾದಿಂದ ಭಾರತಕ್ಕೆ ಐತಿಹಾಸಿಕ ರಾಮಸೇತು ಮಾರ್ಗದ ಮೂಲಕ ಈಜಿ ಬೆಂಗಳೂರಿನ (Bengaluru) ದಂಪತಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಆ ಮೂಲಕ ಡ್ಯಾನಿಶ್ ಅಬ್ದಿ ಮತ್ತು ವೃಶಾಲಿ ಪ್ರಸಾದ್ ಈ ಮಾರ್ಗದ ಮೂಲಕ ಓಪನ್ ವಾಟರ್ ಈಜು ಪೂರ್ಣಗೊಳಿಸಿದ ಮೊದಲ ಜೋಡಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಮೇ 7ರಂದು ಶ್ರೀಲಂಕಾದ ತಲೈಮನ್ನಾರ್‌ನಿಂದ ಬೆಳಗ್ಗೆ ಸುಮಾರು 4.30ಕ್ಕೆ ಈಜು ಆರಂಭಿಸಿದ್ದ ದಂಪತಿ, ತಮಿಳುನಾಡಿನ ಧನುಷ್ಕೋಡಿಗೆ ಮಧ್ಯಾಹ್ನ ಸುಮಾರು 3.15ಕ್ಕೆ ತಲುಪಿದ್ದಾರೆ. ಪಾಲ್ಕ್ ಜಲಸಂಧಿಯಲ್ಲಿ ಸುಮಾರು 32 ಕಿಲೋಮೀಟರ್ ದೂರವನ್ನು ಈ ಸಮಯದಲ್ಲಿ ಅವರು ಈಜಿದ್ದಾರೆ. ಈ ಸವಾಲಿನ ಈಜು ಪೂರ್ಣಗೊಳಿಸಲು ಅವರಿಗೆ 10 ಗಂಟೆ 45 ನಿಮಿಷಗಳು ತಗುಲಿವೆ.

ಮುಖ್ಯಾಂಶಗಳು

  • ಶ್ರೀಲಂಕಾದಿಂದ ಭಾರತಕ್ಕೆ ಒಟ್ಟಾಗಿ ಈಜಿದ ದಂಪತಿ
  • ಬೆಂಗಳೂರಿನ ದಂಪತಿಯಿಂದ ಐತಿಹಾಸಿಕ ಸಾಧನೆ
  • 10 ಗಂಟೆ 45 ನಿಮಿಷದಲ್ಲಿ 32 ಕಿ.ಮೀ. ಈಜಿದ ಜೋಡಿ

ಇದನ್ನೂ ಓದಿ: 30 ಕಿಮೀ ಸಮುದ್ರ ಈಜಿ ದಾಖಲೆ ಬರೆದ ಚಿನ್ನದ ನಾಡಿನ ಬಾಲಕಿ

ಸೋಶಿಯಲ್​ ಮೀಡಿಯಾ ಪೋಸ್ಟ್​​ ಮೂಲಕ ಸಂತಸ

ಸಾಹಸ ಯಶಸ್ವಿಯಾದ ಬಳಿಕ ಇನ್‌ಸ್ಟಾಗ್ರಾಂನಲ್ಲಿ ಈ ಬಗ್ಗೆ ದಂಪತಿ ಸಂತಸ ಹಂಚಿಕೊಂಡಿದ್ದು, ನಾವು ಸಾಧಿಸಿದ್ದೇವೆ! ಶ್ರೀಲಂಕಾದಿಂದ ಭಾರತಕ್ಕೆ. 10 ಗಂಟೆ 45 ನಿಮಿಷದ ನೀರಿನ ಹಾದು ಅತ್ಯಂತ ಕಠಿಣವಾಗಿತ್ತು. ಈಗ 12 ಗಂಟೆಗಳ ಅಲಾರ್ಮ್ ಇಲ್ಲದ ನಿದ್ರೆ ಬೇಕಾಗಿದೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ನಂತರ ಮತ್ತೊಂದು ಪೋಸ್ಟ್‌ನಲ್ಲಿ, ಕೇವಲ ನಾಲ್ಕು ವರ್ಷಗಳ ಹಿಂದೆ ಈಜು ಕಲಿಯಲು ಆರಂಭಿಸಿದ್ದೇವೆ. ಇಷ್ಟು ದೂರ ಬಂದಿದ್ದೇವೆ ಎಂಬುದನ್ನು ಇನ್ನೂ ನಂಬಲಾಗುತ್ತಿಲ್ಲ. ಈ ಸಾಹಸದಲ್ಲಿ ಒಬ್ಬರ ಜೊತೆಗೊಬ್ಬರು ಇದ್ದದ್ದು ನಮಗೆ ಮಾನಸಿಕ ಹಾಗೂ ಭಾವನಾತ್ಮಕ ಶಕ್ತಿಯಾಯಿತು. ನಮ್ಮ ಕೋಚ್‌ಗಳಾದ ಸತೀಶ್ ಮತ್ತು ಯಾಕೂಬ್ ಅವರು ನೀಡಿದ ತರಬೇತಿಯೇ ಈ ದೊಡ್ಡ ಸವಾಲನ್ನು ಎದುರಿಸಲು ಸಹಾಯ ಮಾಡಿತು ಎಂದು ತಿಳಿಸಿದ್ದಾರೆ. ಈಜಿನ ವೇಳೆ ಭಾರತೀಯ ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ, ವೈದ್ಯಕೀಯ ತಂಡ ಹಾಗೂ ಸಹಾಯಕ ದೋಣಿಗಳು ಸಂಪೂರ್ಣ ಸುರಕ್ಷತಾ ವ್ಯವಸ್ಥೆ ಒದಗಿಸಿದ್ದವು.

ದಂಪತಿಯ ಸಾಧನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ನಿಮ್ಮ ಸಾಧನೆ ಅನೇಕರಿಗೆ ಪ್ರೇರಣೆಯಾಗಿದೆ, ಎಂದು ಒಬ್ಬರು ಕಾಮೆಂಟ್ ಮಾಡಿದ್ದರೆ, ಮತ್ತೊಬ್ಬರು ಅಸಾಧ್ಯವೆನ್ನುವುದೇ ಇಲ್ಲ ಎಂಬುದನ್ನು ನೀವು ಸಾಬೀತುಪಡಿಸಿದ್ದೀರಿ ಎಂದು ಹೇಳುವ ಮೂಲಕ ದಂಪತಿಯನ್ನು ಅಭಿನಂದಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು