AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಹೆಚ್ಚುತ್ತಿದೆ ಬಾಂಬ್ ಬೆದರಿಕೆ: ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ಗೆ ಹುಸಿ ಬಾಂಬ್ ಬೆದರಿಕೆ

ರಾಜ್ಯದಲ್ಲಿ ಬಾಂಬ್ ಬೆದರಿಕೆಗಳು ಹೆಚ್ಚುತ್ತಿದ್ದು, ಕಲಬುರಗಿ ಹಾಗೂ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ಗಳಿಗೆ ಇತ್ತೀಚೆಗೆ ಹುಸಿ ಬಾಂಬ್ ಇ-ಮೇಲ್ ಬೆದರಿಕೆ ಬಂದಿದೆ. ಬೆಂಗಳೂರಿನಲ್ಲಿ ತಮಿಳು ಭಾಷೆಯ ಇ-ಮೇಲ್ ಬಂದ ನಂತರ ಪೊಲೀಸರು ತೀವ್ರ ಶೋಧ ನಡೆಸಿದರು. ಯಾವುದೇ ಸ್ಫೋಟಕಗಳು ಪತ್ತೆಯಾಗದ ಕಾರಣ ಇದು ಹುಸಿ ಬೆದರಿಕೆ ಎಂದು ದೃಢಪಟ್ಟಿದೆ. ಅಪರಾಧಿಗಳನ್ನು ಪತ್ತೆಹಚ್ಚಲು ಸೈಬರ್ ಕ್ರೈಂ ವಿಭಾಗದ ನೆರವು ಪಡೆಯಲಾಗುತ್ತಿದೆ.

ರಾಜ್ಯದಲ್ಲಿ ಹೆಚ್ಚುತ್ತಿದೆ ಬಾಂಬ್ ಬೆದರಿಕೆ: ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ಗೆ ಹುಸಿ ಬಾಂಬ್ ಬೆದರಿಕೆ
ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Mar 03, 2026 | 7:05 PM

Share

ಬೆಂಗಳೂರು, ಮಾ.3: ರಾಜ್ಯದಲ್ಲಿ ಬಾಂಬ್ ಬೆದರಿಕೆಗಳು ಹೆಚ್ಚುತ್ತಿದೆ. ಇತ್ತೀಚಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ, ಶಾಲೆ, ಇದೀಗ ಕೋರ್ಟ್​​​ಗೂ ಬೆದರಿಕೆ ಬರುತ್ತಿದೆ. ಇಂದು ಮಧ್ಯಾಹ್ನ ಕಲಬುರ್ಗಿಯ ಜಿಲ್ಲಾ ಕೋರ್ಟ್​​ಗೆ ಬೆದರಿಕೆ ಬಂದಿತ್ತು. ಇದೀಗ ರಾಜಧಾನಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣವನ್ನು ಸ್ಫೋಟಿಸುವುದಾಗಿ ಅಪರಿಚಿತರು ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ಮತ್ತು ಭದ್ರತಾ ಪಡೆಗಳು ಇಡೀ ಕೋರ್ಟ್ ಆವರಣವನ್ನು ಜಾಲಾಡಿದ್ದು, ಅಂತಿಮವಾಗಿ ಇದೊಂದು ‘ಹುಸಿ ಬಾಂಬ್ ಬೆದರಿಕೆ’ (Hoax Call) ಎಂದು ದೃಢಪಟ್ಟಿದೆ. ಇಂದು (ಮಾರ್ಚ್ 3, 2026) ಬೆಳಿಗ್ಗೆ ಕೋರ್ಟ್‌ನ ಅಧಿಕೃತ ಇ-ಮೇಲ್ ವಿಳಾಸಕ್ಕೆ ಸಂದೇಶ ಬಂದಿತ್ತು. ಇನ್ನು ಈ ಬೆದರಿಕೆ ಇ-ಮೇಲ್ ತಮಿಳು ಭಾಷೆಯಲ್ಲಿದೆ.

ಸುದ್ದಿ ತಿಳಿಯುತ್ತಿದ್ದಂತೆ ಹಲಸೂರು ಗೇಟ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಬಾಂಬ್ ನಿಷ್ಕ್ರಿಯ ದಳ (BDS) ಮತ್ತು ಶ್ವಾನದಳದೊಂದಿಗೆ ಕೋರ್ಟ್‌ನ ಪ್ರತಿ ಕೊಠಡಿ, ಕಾರಿಡಾರ್ ಮತ್ತು ಪಾರ್ಕಿಂಗ್ ಪ್ರದೇಶಗಳಲ್ಲಿ ತೀವ್ರ ಶೋಧ ನಡೆಸಲಾಯಿತು.

ಇದನ್ನೂ ಓದಿ: ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಓಡಿದ ವಕೀಲರು

ಸುದೀರ್ಘ ಪರಿಶೀಲನೆಯ ನಂತರ ಯಾವುದೇ ಅನುಮಾನಾಸ್ಪದ ವಸ್ತುಗಳು ಅಥವಾ ಸ್ಫೋಟಕಗಳು ಪತ್ತೆಯಾಗಿಲ್ಲ. ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಲು ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇ-ಮೇಲ್ ಕಳುಹಿಸಿದ ಕಿಡಿಗೇಡಿಗಳ ಪತ್ತೆಗಾಗಿ ಸೈಬರ್ ಕ್ರೈಂ ವಿಭಾಗದ ನೆರವು ಪಡೆಯಲಾಗುತ್ತಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್