AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಗೋವಿಂದರಾಜನಗರ ಉಪ ವಿಭಾಗದ ಇಬ್ಬರು ಅಧಿಕಾರಿಗಳಿಗೆ ತಲಾ 4 ವರ್ಷ ಜೈಲು

2017ರಲ್ಲಿ ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದ ಬಿಬಿಎಂಪಿ ಗೋವಿಂದರಾಜನಗರದ ಉಪ ವಿಭಾಗದ ಇಬ್ಬರು ಅಧಿಕಾರಿಗಳಿಗೆ ಕೋರ್ಟ್ ತಲಾ 4 ವರ್ಷ ಜೈಲು ವಿಧಿಸಿದೆ.

ಬಿಬಿಎಂಪಿ ಗೋವಿಂದರಾಜನಗರ ಉಪ ವಿಭಾಗದ ಇಬ್ಬರು ಅಧಿಕಾರಿಗಳಿಗೆ ತಲಾ 4 ವರ್ಷ ಜೈಲು
ಬಿಬಿಎಂಪಿಯ ಇಬ್ಬರು ಅಧಿಕಾರಿಗಳಿಗೆ 4 ವರ್ಷ ಜೈಲು
TV9 Web
| Edited By: |

Updated on:Jan 05, 2023 | 2:47 PM

Share

ಬೆಂಗಳೂರು: ಬಿಬಿಎಂಪಿ(BBMP) ಗೋವಿಂದರಾಜನಗರ ಉಪ ವಿಭಾಗದ ಇಬ್ಬರು ಅಧಿಕಾರಿಗಳು ತಲಾ ನಾಲ್ಕು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಕಾಮಗಾರಿ ಬಿಲ್‌ಗೆ ಅನುಮೋದನೆ ನೀಡಲು ಲಂಚಕ್ಕೆ (Bribe) ಬೇಡಿಕೆ ಇಟ್ಟಿದ್ದ ಬಿಬಿಎಂಪಿಯ ಗೋವಿಂದರಾಜನಗರದ ಉಪ ವಿಭಾಗದ ಎಇಇ ಶ್ರೀನಿವಾಸ್ ಹಾಗೂ ವರ್ಕ್ ಇನ್ಸ್ ಪೆಕ್ಟರ್ ವೈ.ವಿ.ಸೋಮಶೇಖರಯ್ಯಗೂ 4 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಸಿಸಿಹೆಚ್ 24 ರ ವಿಶೇಷ ಕೋರ್ಟ್ ಇಂದು(ಜನವರಿ 05) ಆದೇಶ ಹೊರಡಿಸಿದೆ.

2017ರಲ್ಲಿ ಬಿಬಿಎಂಪಿ ಗೋವಿಂದರಾಜನಗರದ ಉಪ ವಿಭಾಗದ ವರ್ಕ್ ಇನ್ಸ್​ಪೆಕ್ಟರ್ ವೈ.ವಿ.ಸೋಮಶೇಖರಯ್ಯ ಹಾಗೂ ಎಇಇ ಶ್ರೀನಿವಾಸ್ ಅವರು ಕಾಮಗಾರಿ ಬಿಲ್ ಅನುಮೋದಿಸಲು 30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು, 15 ಸಾವಿರ ಹಣ ಪಡೆದು ಬಾಕಿ ಹಣ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದರು.

ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 7, 12ರಡಿ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ 4 ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾ.ಕೆ.ಲಕ್ಷ್ಮೀನಾರಾಯಣ ಭಟ್ ತೀರ್ಪು ನೀಡಿದ್ದಾರೆ.

Published On - 2:47 pm, Thu, 5 January 23

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ