AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನ 10ನೇ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ: ತನಿಖೆ ವೇಳೆ ಹೊಸ ಅಂಶ ಬಯಲು

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನ 10ನೇ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಕೇಸ್​ ಸಂಬಂಧ ಪೊಲೀಸರು ವಿದ್ಯಾರ್ಥಿಯ ಕ್ಲಾಸ್ ಟೀಚರ್, ಅಪಾರ್ಟ್ಮೆಂಟ್ ನ ಭದ್ರತಾ ಸಿಬ್ಬಂದಿಯ ವಿಚಾರಣೆ ನಡೆಸಿದ್ದಾರೆ.

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನ 10ನೇ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ: ತನಿಖೆ ವೇಳೆ ಹೊಸ ಅಂಶ ಬಯಲು
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಮೋಹಿನ್‌
TV9 Web
| Updated By: ಆಯೇಷಾ ಬಾನು|

Updated on:Nov 09, 2022 | 10:19 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ (ನ.8) ಭೀಕರ, ಎದೆ ಜಲ್ ಅನ್ನಿಸುವ ಘಟನೆಯೊಂದು ನಡೆದಿದೆ. ಬೆಂಗಳೂರಿನ ನಾಗವಾರ ಬಳಿಯ ಖಾಸಗಿ ಅಪಾರ್ಟ್‌ಮೆಂಟ್‌ನ 10ನೇ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿ ಮೋಹಿನ್‌ ಪ್ರಾಣಬಿಟ್ಟಿದ್ದ. ಘಟನೆಯ ವಿಡಿಯೋ ನೋಡಿದ ಜನ ಬೆಚ್ಚಿಬಿದ್ದಿದ್ದರು. ಸದ್ಯ ಈಗ ಈ ಪ್ರಕರಣ ಸಂಬಂಧ ಪೊಲೀಸರು ವಿದ್ಯಾರ್ಥಿಯ ಕ್ಲಾಸ್ ಟೀಚರ್, ಅಪಾರ್ಟ್ಮೆಂಟ್ ನ ಭದ್ರತಾ ಸಿಬ್ಬಂದಿಯ ವಿಚಾರಣೆ ನಡೆಸಿದ್ದಾರೆ.

ಘಟನೆಯ ಬಗ್ಗೆ ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ. ವಿಚಾರಣೆ ವೇಳೆ ಕೆಲ ಮಾಹಿತಿ ಬಹಿರಂಗವಾಗಿದೆ. ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಮೋಹಿನ್‌ ಅಪಾರ್ಟ್‌ಮೆಂಟ್‌ನ 10ನೇ ಮಹಡಿ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಖಾಸಗಿ ಶಾಲೆಯ ಸಿಬ್ಬಂದಿ ಮೋಹಿನ್​ನನ್ನ ಬೈದಿದ್ದರು. ಹೀಗಾಗಿ ಇದೇ ಕಾರಣಕ್ಕೆ ಮೋಹಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ಸ್ಥಳೀಯರು ಆರೋಪಿಸಿದ್ದರು. ಆದ್ರೆ ತನಿಖೆ ನಡೆಸಿದ ಪೊಲೀಸರು ಈ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.

ಶಿಕ್ಷಕಿ ವಿದ್ಯಾರ್ಥಿಯನ್ನ ಶಾಲೆಯಿಂದ ಹೊರಗೆ ಕಳುಹಿಸಿರಲಿಲ್ಲ. ಕೊಠಡಿಯ ಮುಂಭಾಗ ನಿಲ್ಲಿಸಿದ್ದರು. ಸ್ವಲ್ಪ ಹೊತ್ತಿನ ಬಳಿಕ ಕೊಠಡಿಯ ಹೊರಗೆ ಬಂದು ನೋಡಿದಾಗ ವಿದ್ಯಾರ್ಥಿ ಇರಲಿಲ್ಲ. ಆಗ ಶಾಲೆಯ ಶಿಕ್ಷಕರು ಇಡೀ ಶಾಲೆಯಲ್ಲಿ ಹುಡುಕಾಡಿದ್ದಾರೆ. ವಿದ್ಯಾರ್ಥಿ ಕಾಣದಿದ್ದಾಗ ತಕ್ಷಣವೇ ಅವರ ಪೋಷಕರಿಗೆ ಮಾಹಿತಿ ನೀಡಿದ್ದಾರೆ ಎಂದು ತನಿಖೆ ವೇಳೆ ತಿಳಿದು ಬಂದಿದೆ.

ಇದನ್ನೂ ಓದಿ: ಬಂಗಾರಪೇಟೆ: ನೇಣುಬಿಗಿದುಕೊಂಡು ನವ ವಿವಾಹಿತೆ ಆತ್ಮಹತ್ಯೆಗೆ ಶರಣು

ಇನ್ನು ಮೃತ ವಿದ್ಯಾರ್ಥಿ ಮೋಹಿನ್‌, ಇಂಗ್ಲಿಷ್ ಕ್ಲಾಸ್ ಟೆಸ್ಟ್ ವೇಳೆ ನಕಲು ಮಾಡುತ್ತಿದ್ದ. ಅಪಾರ್ಟ್ಮೆಂಟ್ ಗೆ ಹೋಗುವಾಗ ಅದೇ ಅಪಾರ್ಟ್ಮೆಂಟ್ ವಿದ್ಯಾರ್ಥಿಯ ಜೊತೆಗೆ ಒಳ ಹೋಗಿದ್ದ. ಆದ್ರೆ ಆ ಅಪಾರ್ಟ್ಮೆಂಟ್​ನ ವಿದ್ಯಾರ್ಥಿಗೂ ಮೋಹಿನ್ ಪರಿಚಯವಿರಲಿಲ್ಲ. ಇನ್ನೊಬ್ಬ ವಿದ್ಯಾರ್ಥಿಯೊಂದಿಗೆ ಈತ ಅಪಾರ್ಟ್ಮೆಂಟ್ ಗೆ ಹೋಗಿದ್ದರಿಂದ ಸೆಕ್ಯೂರಿಟಿ ಗೂ ಡೌಟ್ ಬರಲಿಲ್ಲ. ಮೋಹಿನ್ ಸಮವಸ್ತ್ರ ಧರಿಸಿದ್ದರಿಂದ ಸೆಕ್ಯೂರಿಟಿಗೆ ಕನ್ಫೂಸ್ ಆಗಿತ್ತೆಂದು ಸೆಕ್ಯೂರಿಟಿ ತನಿಖೆ ವೇಳೆ ಮಾಹಿತಿ ನೀಡಿದ್ದಾರೆ.

ಇಂದು ವಿದ್ಯಾರ್ಥಿಯ ಮೃತದೇಹ ಮರಣೋತ್ತರ ಪರೀಕ್ಷೆ

ಇಂದು ಅಂಬೇಡ್ಕರ್ ಆಸ್ಪತ್ರೆಯಲ್ಲಿ ವಿದ್ಯಾರ್ಥಿಯ ಮೃತದೇಹ ಮರಣೋತ್ತರ ಪರೀಕ್ಷೆ ನಡೆಯಲಿದ್ದು ನಂತರ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗುತ್ತೆ. ವಿದ್ಯಾರ್ಥಿ ಮೋಹಿನ್ ಆತ್ಮಹತ್ಯೆ ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್ 306ರ(ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೋಷಕರು ನೀಡಿರುವ ದೂರಿನ್ವಯ ಸಂಪಿಗೆಹಳ್ಳಿ ಪೊಲೀಸರು ಟೀಚರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಾಥಮಿಕವಾಗಿ ಶಾಲೆಯ ಶಿಕ್ಷಕರನ್ನ ವಿಚಾರಣೆ ನಡೆಸಲಾಗಿದೆ.

Published On - 10:04 am, Wed, 9 November 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?