AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Girl Missing: ಬೆಂಗಳೂರಿನಲ್ಲೊಂದು ವಿಚಿತ್ರ ಪ್ರಕರಣ; ಮಾಟ ಮಂತ್ರದ ಪ್ರಭಾವಕ್ಕೆ ಸಿಲುಕಿ 2 ತಿಂಗಳಿಂದ ಯುವತಿ ನಾಪತ್ತೆ!

Crime News in Bangalore: ಶಾಮನಿಸಂ (ಆತ್ಮಗಳೊಂದಿಗೆ ಮಾತನಾಡುವುದು) ಎನ್ನುವುದು ಪುರಾತನ ಹೀಲಿಂಗ್ ವಿಧಾನವಾಗಿದ್ದು, ಅದರ ಅಭ್ಯಾಸ ಮಾಡುವವರು ಅರೆಪ್ರಜ್ಞಾವಸ್ಥ ಸ್ಥಿತಿಯಲ್ಲಿ ಆತ್ಮಗಳೊಂದಿಗೆ ಮಾತುಕತೆ ನಡೆಸುತ್ತಾರೆ. ಬೆಂಗಳೂರಿನ ಯುವತಿ ಕೂಡ ಇದರತ್ತ ಪ್ರಭಾವಿತಳಾಗಿದ್ದಳು.

Girl Missing: ಬೆಂಗಳೂರಿನಲ್ಲೊಂದು ವಿಚಿತ್ರ ಪ್ರಕರಣ; ಮಾಟ ಮಂತ್ರದ ಪ್ರಭಾವಕ್ಕೆ ಸಿಲುಕಿ 2 ತಿಂಗಳಿಂದ ಯುವತಿ ನಾಪತ್ತೆ!
ನಾಪತ್ತೆಯಾಗಿರುವ ಬೆಂಗಳೂರಿನ ಯುವತಿ ಅನುಷ್ಕಾ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 31, 2021 | 7:21 AM

ಬೆಂಗಳೂರು: ಬೆಂಗಳೂರೆಂಬ ಮಹಾನಗರದಲ್ಲಿ ಕೊಲೆ, ಸುಲಿಗೆ, ಆತ್ಮಹತ್ಯೆ, ನಾಪತ್ತೆ, ಅತ್ಯಾಚಾರ, ಅಪಘಾತ ಇಂತಹ ಘಟನೆಗಳೆಲ್ಲ ದಿನವೂ ನಡೆಯುತ್ತಿರುತ್ತದೆ. ಈ ಅಪರಾಧ ಜಗತ್ತಿನ ಮಧ್ಯೆಯೇ ಜನರು ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎನ್ನುವಂತೆ ಆರಾಮಾಗಿ ಬದುಕುತ್ತಿರುತ್ತಾರೆ. ಆದರೆ, ಬೆಂಗಳೂರಿನ 17 ವರ್ಷದ ಅನುಷ್ಕಾ ಎಂಬ ಯುವತಿಯ ನಾಪತ್ತೆ ಪ್ರಕರಣ ಇಡೀ ರಾಜ್ಯವನ್ನೇ ಆತಂಕಕ್ಕೀಡು ಮಾಡಿದೆ. 17 ವರ್ಷದ ಅನುಷ್ಕಾ ಎಂಬ ಯುವತಿ 2 ತಿಂಗಳ ಹಿಂದೆ ಬೆಂಗಳೂರಿನ ಮನೆಯಿಂದ ನಾಪತ್ತೆಯಾಗಿದ್ದಾರೆ. ತಮ್ಮ ಮಗಳ ನಾಪತ್ತೆಯ ಹಿಂದೆ ಮಾಟ-ಮಂತ್ರ (ವಾಮಾಚಾರ)ದ ಕೈವಾಡವಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಶಾಮನಿಸಂ (ಆತ್ಮಗಳೊಂದಿಗೆ ಮಾತನಾಡುವುದು) ಎನ್ನುವುದು ಧಾರ್ಮಿಕ ಆಚರಣೆಯಾಗಿದ್ದು, ಅದರ ಅಭ್ಯಾಸ ಮಾಡುವವರು ಅರೆಪ್ರಜ್ಞಾವಸ್ಥ ಸ್ಥಿತಿಯಲ್ಲಿ ಆತ್ಮಗಳೊಂದಿಗೆ ಮಾತುಕತೆ ನಡೆಸುತ್ತಾರೆ ಎಂಬ ನಂಬಿಕೆಯ ಮೇಲೆ ಆಧಾರಿತವಾಗಿದೆ. ಇದು ಪುರಾತನ ಹೀಲಿಂಗ್ ವಿಧಾನ ಎನ್ನಲಾಗಿದೆ. ಅನುಷ್ಕಾ ನಾಪತ್ತೆಯಾಗಿ ಸುಮಾರು ಎರಡು ತಿಂಗಳಾಗಿದೆ. ಆಕೆ ಅಕ್ಟೋಬರ್ 31ರಂದು ಎರಡು ಜೊತೆ ಬಟ್ಟೆ ಮತ್ತು 2,500 ರೂ. ನಗದು ಸಮೇತ ತನ್ನ ಮನೆಯಿಂದ ಹೊರಟಿದ್ದಳು. ಅಭ್ಯಾಸದ ಬಗ್ಗೆ ಆನ್‌ಲೈನ್ ಓದುವ ಮೂಲಕ ಅವಳು ಶಾಮನಿಸಂಗೆ ಆಕರ್ಷಿತಳಾಗಿದ್ದಳು ಎಂದು ಆಕೆಯ ಪೋಷಕರು ಹೇಳಿದ್ದಾರೆ.

ಕೆಲವರಿಗೆ, ಮಾಟ-ಮಂತ್ರ (ಶಾಮನಿಸಂ) ಎಂಬುದು ಆತ್ಮಗಳ ಪ್ರಪಂಚದ ಮೂಲಕ ಆಧ್ಯಾತ್ಮಿಕ ಮತ್ತು ದೈಹಿಕ ಸಮಸ್ಯೆಗಳನ್ನು ಗುಣಪಡಿಸುವ ಪ್ರಾಚೀನ ಅಭ್ಯಾಸವಾಗಿದೆ. ಅನುಷ್ಕಾ 12ನೇ ತರಗತಿಯಲ್ಲಿ ಉತ್ತೀರ್ಣರಾದ ನಂತರ ಶಾಮನಿಸಂನತ್ತ ಆಕರ್ಷಿತರಾದರು. ಆಕೆಯ ಪೋಷಕರು ಆಧ್ಯಾತ್ಮಿಕ ಜೀವನ ತರಬೇತುದಾರರಾಗಿದ್ದು, ಸೈಕೆಡೆಲಿಕ್ ಶಿಕ್ಷಣತಜ್ಞರಿಂದ ಪ್ರಭಾವಿತಳಾಗಿದ್ದರು. ಆ ಯುವತಿ ಶಾಮನಿಸಂ ಅನ್ನು ಅಭ್ಯಾಸ ಮಾಡುವ ಬಯಕೆಯ ಬಗ್ಗೆ ತನ್ನ ತಂದೆ-ತಾಯಿಯ ಜೊತೆ ಮಾತನಾಡಿದ್ದಳು.

ನಮ್ಮ ಮಗಳಿಗೆ ಮನೆ ತೊರೆಯುವ ನಿರ್ಧಾರ ತೆಗೆದುಕೊಳ್ಳುವಂತೆ ಯಾರೋ ಪ್ರಭಾವ ಮಾಡಿದ್ದಾರೆ ಎಂದು ಆಕೆಯ ತಂದೆ ಅಭಿಷೇಕ್ ಹೇಳಿದ್ದಾರೆ. ಆಕೆ ಅಪ್ರಾಪ್ತಳಾಗಿದ್ದು, ಅವಳು ತನ್ನ ಸ್ವಂತ ನಿರ್ಣಯದ ನಿರ್ಧಾರವನ್ನು ತೆಗೆದುಕೊಳ್ಳುವ ಸ್ಥಿತಿಯಲ್ಲಿಲ್ಲದಿರಬಹುದು. ಅವಳನ್ನು ಯಾರೋ ಪ್ರಭಾವಿಸಿದ್ದಾರೆ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಅನುಷ್ಕಾ ಅವರ ನಡವಳಿಕೆಯಲ್ಲಿ ಕೆಲವು ಬದಲಾವಣೆಗಳನ್ನು ಗಮನಿಸಿದ್ದ ಅವರು ಆಕೆಯಲ್ಲಾದ ಬದಲಾವಣೆಯನ್ನು ನಾವು ಆಕೆಯ ವಯಸ್ಸಿನಿಂದಾದ ಬದಲಾವಣೆ ಇರಬಹುದು ಎಂದುಕೊಂಡಿದ್ದೆವು. ಆಕೆ ಯಾರೊಂದಿಗೂ ಬೆರೆಯುತ್ತಿರಲಿಲ್ಲ, ಒಬ್ಬಳೇ ಇರಲು ಇಷ್ಟಪಡುತ್ತಿದ್ದಳು. ಆಕೆಯನ್ನು ಕೌನ್ಸಿಲಿಂಗ್​ಗೂ ಕರೆದುಕೊಂಡು ಹೋಗಿದ್ದೆವು. ಅದಾದ ಬಳಿಕ ಆಕೆ ನಮ್ಮೊಂದಿಗೆ ಮಾತನಾಡುವುದನ್ನೇ ನಿಲ್ಲಿಸಿದ್ದಳು. ಸದಾ ಆನ್​ಲೈನ್​ನಲ್ಲಿ ಮಾಟ-ಮಂತ್ರದ ಬಗ್ಗೆ ವಿಡಿಯೋ ನೋಡುತ್ತಿದ್ದಳು. ಗೂಗಲ್​ನಲ್ಲಿ ಅದೇ ವಿಚಾರವಾಗಿ ಏನೇನೋ ಓದುತ್ತಿದ್ದಳು. ಇದೆಲ್ಲ ಆದ ಬಳಿಕ ನಾವೂ ಆಕೆಯನ್ನು ಆಕೆಯಷ್ಟಕ್ಕೆ ಬಿಟ್ಟಿದ್ದೆವು. ಆದರೆ, ಅಕ್ಟೋಬರ್ 31ರಂದು ಅನುಷ್ಕಾ ನಮ್ಮ ಮನೆಯಿಂದ ಹೋದವಳು ವಾಪಾಸ್ ಬರಲೇ ಇಲ್ಲ. ಹೋಗುವಾಗ ಹಣ ಹಾಗೂ ಬಟ್ಟೆಯನ್ನು ತೆಗೆದುಕೊಂಡು ಹೋಗಿದ್ದಾಳೆ ಎಂದು ಅನುಷ್ಕಾಳ ಪೋಷಕರು ತಿಳಿಸಿದ್ದಾರೆ.

ಈ ಘಟನೆಯ ಬಗ್ಗೆ ಪೊಲೀಸರು ಕೂಡ ತಲೆಕೆಡಿಸಿಕೊಂಡಿದ್ದು, ಪೊಲೀಸರು ಹಲವು ಸ್ಥಳಗಳ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಆಕೆಯ ಚಲನವಲನವನ್ನು ಸಿಸಿಟಿವಿ ಕ್ಯಾಮೆರಾ ಮೂಲಕ ವಿಶ್ಲೇಷಿಸಿದ್ದೇವೆ ಎಂದು ಬೆಂಗಳೂರು ಉತ್ತರದ ಉಪ ಪೊಲೀಸ್ ಆಯುಕ್ತ ವಿನಾಯಕ ಪಾಟೀಲ್ ಹೇಳಿದ್ದಾರೆ. ಸುಮಾರು ಎರಡು ತಿಂಗಳಿನಿಂದ ತಮ್ಮ ಮಗಳ ಸುಳಿವಿಗಾಗಿ ಕಾಯುತ್ತಿದ್ದ ಅನುಷ್ಕಾ ಪೋಷಕರು ಇದೀಗ ಪೊಲೀಸರೊಂದಿಗೆ ಕೆಲಸ ಮಾಡುವುದರ ಜೊತೆಗೆ ಸಾರ್ವಜನಿಕರ ಮೊರೆ ಹೋಗಿದ್ದಾರೆ. ಅವರು ತಮ್ಮ ಮಗಳನ್ನು ಹುಡುಕಲು ಸಹಾಯ ಮಾಡುವಂತೆ ಟ್ವಿಟರ್‌ನಲ್ಲಿ ಮನವಿ ಮಾಡುವ ಮೂಲಕ ಸಾರ್ವಜನಿಕರಿಂದ ಸಹಾಯವನ್ನು ಕೋರಿದ್ದಾರೆ.

ಇದನ್ನೂ ಓದಿ: Crime News: ಮನೆ ಮುಂದೆಯೇ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

Crime News: ಕೇವಲ 400 ರೂ.ಗಾಗಿ ಪ್ರೇಯಸಿಯ ಮೂಗನ್ನೇ ಕತ್ತರಿಸಿದ ಮಹರಾಯ!

Published On - 8:02 pm, Thu, 30 December 21

‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್