AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪೊಲೀಸರೆಂದು ಹೇಳಿಕೊಂಡು 6 ಲಕ್ಷ ನಗದು, ಚಿನ್ನದ ಬಿಸ್ಕತ್​​ ದರೋಡೆ ಮಾಡಿದ ಗ್ಯಾಂಗ್

ಬ್ಯಾಗ್ ಪರಿಶೀಲಿಸಬೇಕು ನಾವು ಪೊಲೀಸ್ ಎಂದು ಸುರೇಂದ್ರರನ್ನು ಬಸ್ ನಿಂದ ಇಳಿಸಿದ್ದಾರೆ. ಬಳಿಕ ಬಿಳಿಕಾರ್ ನಲ್ಲಿ ಕೊಂಚ ದೂರ ಕರೆದೊಯ್ದು ಬ್ಯಾಗ್ ನಲ್ಲಿದ್ದ ಚಿನ್ನದ ಬಿಸ್ಕೆಟ್ ಹಾಗೂ 6 ಲಕ್ಷ ನಗದು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಬೆಂಗಳೂರು: ಪೊಲೀಸರೆಂದು ಹೇಳಿಕೊಂಡು 6 ಲಕ್ಷ ನಗದು, ಚಿನ್ನದ ಬಿಸ್ಕತ್​​ ದರೋಡೆ ಮಾಡಿದ ಗ್ಯಾಂಗ್
ಚಿನ್ನ (ಸಾಂದರ್ಭಿಕ ಚಿತ್ರ)
TV9 Web
| Edited By: ಆಯೇಷಾ ಬಾನು|

Updated on:Feb 10, 2023 | 7:26 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಿನಿಮೀಯ ಸ್ಟೈಲ್​ನಲ್ಲಿ ಪೊಲೀಸರು ಎಂದು ಹೇಳಿಕೊಂಡು ಫೀಲ್ಡ್​ಗೆ ಇಳಿದ ಖದೀಮರು ಚಿನ್ನದ ವ್ಯಾಪಾರಿಯಿಂದ 6 ಲಕ್ಷ ನಗದು, ಚಿನ್ನದ ಬಿಸ್ಕತ್​​ ದರೋಡೆ ಮಾಡಿರುವ ಘಟನೆ ನಡೆದಿದೆ. ನಕಲಿ ಪೊಲೀಸರ ಚಲಾಕಿತನ ಕಂಡು ಅಸಲಿ ಪೊಲೀಸರೇ ಶಾಕ್ ಆಗಿದ್ದಾರೆ.

ಇದೇ ಫೆಬ್ರವರಿ ತಿಂಗಳ 7ರಂದು ಪೊಲೀಸರ ವೇಶದಲ್ಲಿ ಬಂದ ಮೂವರು ಖದೀಮರು ತಮಿಳುನಾಡು ಮೂಲದ ಚಿನ್ನದ ವ್ಯಾಪಾರಿ ಉಪೇಂದ್ರನಾಥ್ ಎಂಬುವವರ ಬಳಿ ಕೆಲಸಕ್ಕಿದ್ದ ಸುರೇಂದ್ರ ಎಂಬುವವರ ಬಳಿ ಇದ್ದ ಹಣ, ಚಿನ್ನ ಕಿತ್ತುಕೊಂಡು ಪರಾರಿಯಾಗಿದ್ದಾರೆ. ನಾವು ಪೊಲೀಸರು ಎಂದು ಸುರೇಂದ್ರರಿಗೆ ಪರಿಚಯ ಮಾಡಿಕೊಂಡು ಅವರ ಬಳಿ ಇದ್ದ ಹಣ, ಚಿನ್ನವನ್ನು ಎಗರಿಸಿದ್ದಾರೆ.

ಚಿನ್ನ ಹಾಗೂ ನಗದು ತೆಗೆದುಕೊಂಡು ಸುರೇಂದ್ರ ಮಾಲೀಕನ ಸೂಚನೆ ಮೇರೆಗೆ ಶಿವಮೊಗ್ಗಕ್ಕೆ ತೆರಳಿದ್ದರು. ಬಳಿಕ ಆಭರಣ ನೀಡಿ ಚಿನ್ನದ ಬಿಸ್ಕತ್ ಪಡೆದು ಬೆಂಗಳೂರಿಗೆ ಬಂದಿದ್ದರು. ನಂತರ ಸ್ಯಾಟಲೈಟ್​​ ನಿಲ್ದಾಣದಲ್ಲಿ ತಮಿಳುನಾಡು ಬಸ್​​ಗೆ ಕಾದು ಕುಳಿತಿದ್ದರು. ಈ ವೇಳೆ ಪೊಲೀಸರು ಎಂದೇಳಿಕೊಂಡು ಬಂದವರು ಬ್ಯಾಗ್ ಪರಿಶೀಲಿಸಬೇಕು ನಾವು ಪೊಲೀಸ್ ಎಂದು ಸುರೇಂದ್ರರನ್ನು ಬಸ್ ನಿಂದ ಇಳಿಸಿದ್ದಾರೆ. ಬಳಿಕ ಬಿಳಿಕಾರ್ ನಲ್ಲಿ ಕೊಂಚ ದೂರ ಕರೆದೊಯ್ದು ಬ್ಯಾಗ್ ನಲ್ಲಿದ್ದ ಚಿನ್ನದ ಬಿಸ್ಕೆಟ್ ಹಾಗೂ 6 ಲಕ್ಷ ನಗದು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಚಿನ್ನದ ಬಿಸ್ಕತ್​, 6 ಲಕ್ಷ ನಗದು ಕಿತ್ತುಕೊಂಡು ಮೂವರು ಪರಾರಿಯಾಗಿದ್ದಾರೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Online Fraud: ಗಂಡನ ಮಾತು ಕೇಳದೆ ಆನ್​​ಲೈನ್ ಆ್ಯಪ್​ನಲ್ಲಿ ಲಕ್ಷಗಟ್ಟಲೇ ಹಣ ಹೂಡಿ ಮೋಸ ಹೋಗಿರುವ ಮಹಿಳಾ ಟೆಕ್ಕಿ, ಕಾಣೆಯಾಗಿದ್ದಾರೆ!

ಮೆಡಿಕಲ್ ಶಾಪ್​​ನಲ್ಲಿ 3.7 ಲಕ್ಷ ಹಣ ಕದ್ದು ಪರಾರಿ

ಕಲಬುರಗಿ: ಚಿಂಚೋಳಿ ಪಟ್ಟಣದ ಮೆಡಿಕಲ್ ಶಾಪ್​​ನಲ್ಲಿ 3.7 ಲಕ್ಷ ಹಣ ಕದ್ದು ಖದೀಮರು ಪರಾರಿಯಾಗಿದ್ದಾರೆ. ಮೆಡಿಕಲ್ ಶಾಪ್​ನಲ್ಲಿ ಹಣ ಕದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೇ ಪೆಬ್ರವರಿ 9 ರಂದು ನಸುಕಿನ ಜಾವ ನಾಲ್ಕು ಗಂಟೆ ಸಮಯದಲ್ಲಿ ಮೆಡಿಕಲ್ ಶಾಪ್ ಶೆಟರ್ ಮುರಿದು ಒಳ ನುಗ್ಗಿ ಕಳ್ಳತನ ಮಾಡಲಾಗಿದೆ. ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:26 am, Fri, 10 February 23

Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ