AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರುಳಿನಲ್ಲಿ ಕೊಕೇನ್ ಬಚ್ಚಿಟ್ಟು ಸಾಗಿಸುತ್ತಿದ್ದ ಆಫ್ರಿಕನ್ ಮಹಿಳೆ ಬೆಂಗಳೂರು ಏರ್ಪೋರ್ಟ್​ನಲ್ಲಿ ಅರೆಸ್ಟ್

ಮಹಿಳೆ ಕ್ಯಾಪ್ಸೂಲ್‌ಗಳನ್ನು ನುಂಗಿದ ನಂತರ ವೆಸ್ಟ್ ಆಫ್ರಿಕಾದ ಗಿನಿಯಾದಲ್ಲಿ ವಿಮಾನವನ್ನು ಹತ್ತಿದ್ದರು. ಮತ್ತು ಜನವರಿ 14 ರಂದು ಎಮಿರೇಟ್ಸ್ ವಿಮಾನದಲ್ಲಿ ದುಬೈ ಮೂಲಕ ಬೆಂಗಳೂರಿಗೆ ಬಂದಿಳಿದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕರುಳಿನಲ್ಲಿ ಕೊಕೇನ್ ಬಚ್ಚಿಟ್ಟು ಸಾಗಿಸುತ್ತಿದ್ದ ಆಫ್ರಿಕನ್ ಮಹಿಳೆ ಬೆಂಗಳೂರು ಏರ್ಪೋರ್ಟ್​ನಲ್ಲಿ ಅರೆಸ್ಟ್
ಕೊಕೇನ್
TV9 Web
| Edited By: |

Updated on:Jan 31, 2023 | 11:46 AM

Share

ಬೆಂಗಳೂರು: ಸುಮಾರು 7 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಹೊಂದಿರುವ 58 ಕ್ಯಾಪ್ಸುಲ್‌ಗಳನ್ನು ತನ್ನ ಕರುಳಿನಲ್ಲಿ ಬಚ್ಚಿಟ್ಟು ಸಾಗಿಸಲು ಯತ್ನಿಸಿದ್ದ ಮಹಿಳೆಯೊಬ್ಬರು ಬೆಂಗಳೂರು ಏರ್ಪೋರ್ಟ್​ನಲ್ಲಿ ಸಿಕ್ಕಿಬಿದ್ದಿದ್ದಾರೆ. ಸಿಯೆರಾ ಲಿಯೋನ್‌ ಎಂಬ 40 ವರ್ಷದ ಮಹಿಳೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ಮಹಿಳೆ ಪಶ್ಚಿಮ ಆಫ್ರಿಕಾದ ಸಿಯೆರಾ ಲಿಯೋನ್ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆ ಕ್ಯಾಪ್ಸೂಲ್‌ಗಳನ್ನು ನುಂಗಿದ ನಂತರ ವೆಸ್ಟ್ ಆಫ್ರಿಕಾದ ಗಿನಿಯಾದಲ್ಲಿ ವಿಮಾನವನ್ನು ಹತ್ತಿದ್ದರು. ಮತ್ತು ಜನವರಿ 14 ರಂದು ಎಮಿರೇಟ್ಸ್ ವಿಮಾನದಲ್ಲಿ ದುಬೈ ಮೂಲಕ ಬೆಂಗಳೂರಿಗೆ ಬಂದಿಳಿದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮೂಲಗಳ ಪ್ರಕಾರ, ಅಧಿಕಾರಿಗಳು ಮಹಿಳೆಯ ಕೆಲವು ಅಸಾಮಾನ್ಯ ವರ್ತನೆಯನ್ನು ಗಮನಿಸಿದ್ದು ಅನುಮಾನ ಬಂದಿದೆ. ಹೀಗಾಗಿ ಮಹಿಳಾ ಅಧಿಕಾರಿಗಳ ಸಹಾಯದಿಂದ ಮಹಿಳೆಯನ್ನು ಸ್ಕ್ಯಾನ್ ಮತ್ತು ರೇಡಿಯಾಲಜಿ ಕಾರ್ಯವಿಧಾನಗಳಿಗೆ ಒಳಪಡಿಸಲಾಗಿದೆ. ಈ ವೇಳೆ ಮಹಿಳೆಯು ತನ್ನ ಕರುಳಿನಲ್ಲಿ ಕ್ಯಾಪ್ಸುಲ್​ಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ನಂತರ ಆಕೆಯನ್ನು ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ.

ಇದನ್ನೂ ಓದಿ: Assembly Polls: ಎಲ್ಲ ಪಕ್ಷಗಳ ಯಾತ್ರೆಯಂತೆ ಗಾಲಿ ಜನಾರ್ಧನ ರೆಡ್ಡಿಯವರ ಕಲ್ಯಾಣ ಯಾತ್ರೆ ಆರಂಭ

ನಂತರ ಆಕೆಯ ಕಿಬ್ಬೊಟ್ಟೆಯಲ್ಲಿ ಕೊಕೇನ್ ಇರುವ 58 ಕ್ಯಾಪ್ಸುಲ್‌ಗಳು ಇರುವುದು ಸಾಬೀತಾಗಿದ್ದು ವಿಚಾರಣೆಯ ವೇಳೆ, ಮಹಿಳೆ ಜನವರಿ 13 ರಂದು ಗಿನಿಯಾದ ಕೊನಾಕ್ರಿ ಗ್ಬೆಸ್ಸಿಯಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನದಲ್ಲಿ 686 ಗ್ರಾಂ ಕೊಕೇನ್ ಅನ್ನು ಸಾಗಿಸಿದ್ದಾಗಿ ಒಪ್ಪಿಕೊಂಡಿದ್ದಾಳೆ. ನಂತರ ಪೊಲೀಸರು ವೈದ್ಯಕೀಯ ಸಹಾಯದಿಂದ ಆಕೆಯ ದೇಹದಿಂದ ಎಲ್ಲಾ ಕ್ಯಾಪ್ಸುಲ್‌ಗಳನ್ನು ಹೊರತೆಗೆದಿದ್ದಾರೆ. ಆದರೆ, ಕಸ್ಟಮ್ಸ್ ಅಧಿಕಾರಿಗಳು ಮಹಿಳೆಯ ದೇಹದಿಂದ ತೆಗೆದ ಡ್ರಗ್ಸ್ ಅನ್ನು ಯಾರಿಗೆ ಹಸ್ತಾಂತರಿಸಿದ್ದಾರೆ. ಹಾಗೂ ಆ ಮಹಿಳೆಯನ್ನು ಯಾರು ವಶಕ್ಕೆ ಪಡೆದಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:46 am, Tue, 31 January 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ