AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಹುಷಾರ್​​!: ನಗರದಲ್ಲಿ ಶುರುವಾಗಿದೆ ವಾಂತಿ ಗ್ಯಾಂಗ್​​, ಮುಸುಕುಧಾರಿ ಕಳ್ಳರ ಹಾವಳಿ

ಬೆಂಗಳೂರಿನಲ್ಲಿ ಬಸ್ ಪ್ರಯಾಣಿಕರನ್ನು ಯಾಮಾರಿಸಿ ಕಳ್ಳತನ ಮಾಡುವ 'ವಾಂತಿ ಗ್ಯಾಂಗ್' ಹಾಗೂ ಲೇಔಟ್‌ಗಳಲ್ಲಿ ಬೆಡ್‌ಶೀಟ್ ಹೊದ್ದು ದರೋಡೆಗೆ ಸಂಚು ರೂಪಿಸುವ ಮುಸುಕುಧಾರಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಈ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಏನಿದು ವಾಂತಿ ಗ್ಯಾಂಗ್​​? ಮುಸುಕುಧಾರಿಗಳ ಕಳ್ಳತನದ ಸಂಚು ಹೇಗಿರುತ್ತೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಬೆಂಗಳೂರಿಗರೇ ಹುಷಾರ್​​!: ನಗರದಲ್ಲಿ ಶುರುವಾಗಿದೆ ವಾಂತಿ ಗ್ಯಾಂಗ್​​, ಮುಸುಕುಧಾರಿ ಕಳ್ಳರ ಹಾವಳಿ
ಬಂಧಿತ ಆರೋಪಿಗಳುImage Credit source: Tv9 Kannada
ಪ್ರಸನ್ನ ಹೆಗಡೆ
|

Updated on:Jul 24, 2026 | 4:04 PM

Share

ಮುಖ್ಯಾಂಶಗಳು

  • ಬೆಂಗಳೂರಿನ ನಿವಾಸಿಗಳೇ ಹುಷಾರ್​​... ಹುಷಾರ್​​!
  • ನಗರದಲ್ಲಿ ಶುರುವಾಗಿದೆ ವಾಂತಿ ಗ್ಯಾಂಗ್​​ನ ಹಾವಳಿ
  • ಮನೆಗಳನ್ನೇ ಟಾರ್ಗೆಟ್​​ ಮಾಡ್ತಿರುವ ಮುಸುಕುಧಾರಿಗಳು

ಬೆಂಗಳೂರು, ಜುಲೈ 24: ಸಿಲಿಕಾನ್​​​ ಸಿಟಿ ಬೆಂಗಳೂರಲ್ಲಿ (Bengaluru) ಜನರನ್ನು ಯಾಮಾರಿಸಿ ಕಳ್ಳತನ ಮಾಡೋಕೆ ಖದೀಮರು ನಾನಾ ಮಾರ್ಗಗಳನ್ನು ಹುಡುಕುತ್ತಿದ್ದು, ಬಸ್​​ ಪ್ರಯಾಣಿಕರನ್ನು ಗುರಿಯಾಗಿಸಿ ಕೈಚಳಕ ತೋರುವ ಕೇಸ್​​ಗಳು ಹೆಚ್ಚಿವೆ. ಅದರ ಜೊತೆ ಜೊತೆಗೆ ಮನೆ ಕಳ್ಳತನ ಪ್ರಕರಣಗಳೂ ವರದಿಯಾಗುತ್ತಿವೆ. ವಾಂತಿ ಗ್ಯಾಂಗ್​​, ಮುಸುಕುಧಾರಿ ಕಳ್ಳರ ಹಾವಳಿಗೆ ಸಾರ್ವಜನಿಕರು ಹೈರಾಣಾಗಿದ್ದು, ಈ ಬಗ್ಗೆ ಅದಾಗಲೇ ಅಲರ್ಟ್​​ ಆಗಿರುವ ಪೊಲೀಸರು ಕೆಲ ಆರೋಪಿಗಳನ್ನೂ ಬಂಧಿಸಿದ್ದಾರೆ.

ಏನಿದು ವಾಂತಿ ಗ್ಯಾಂಗ್​​?

ಬಿಎಂಟಿಸಿ ಬಸ್​​ ಪ್ರಯಾಣಿಕರನ್ನೇ ಟಾರ್ಗೆಟ್​​ ಮಾಡಿ ಕಳ್ಳತನ ನಡೆಸುವ ಗ್ಯಾಂಗ್​​ ಇದಾಗಿದೆ. ವಿಂಡೋ ಸೀಟ್ ಪ್ರಯಾಣಿಕರನ್ನ ಟಾರ್ಗೆಟ್ ಮಾಡುವ ಆರೋಪಿಗಳು, ವಾಂತಿ ಬರುತ್ತಿದ್ದೆ ಸೀಟ್ ಬಿಡಿ ಎಂದು ಮನವಿ ಮಾಡುತ್ತಾರೆ. ಸೀಟ್​​ ಬಿಟ್ಟುಕೊಡುವ ವೇಳೆ ತಂಡದ ಸದಸ್ಯರು ರಶ್​​ ಇರುವಂತೆ ವರ್ತಿಸಿ ಮೈ ಮೇಲೆ ಬೀಳುತ್ತಾರೆ. ಈ ವೇಳೆ ಪ್ರಯಾಣಿಕರ ಜೇಬಿನಲ್ಲಿರುವ ಪರ್ಸ್​​, ಮೊಬೈಲ್​​ ಫೋನ್​​ಗಳನ್ನು ಎಗರಿಸಲಾಗುತ್ತೆ. ಬಳಿಕ ಅನುಮಾನವೇ ಬಾರದಂತೆ ಆರೋಪಿಗಳು ಅಲ್ಲಿ ಎಸ್ಕೇಪ್​​ ಆಗುತ್ತಾರೆ.

ಇದನ್ನೂ ಓದಿ: ಚಿಕನ್, ಮಟನ್ ತ್ಯಾಜ್ಯ ವಿಲೇವಾರಿಗೆ ಹೊಸ ರೂಲ್ಸ್​​, ಶುಲ್ಕವೂ ನಿಗದಿ

ಇನ್ನು ಈ ವಾಂತಿ ಗ್ಯಾಂಗ್ ಕೈಚಳಕದ ಬಗ್ಗೆ ನಗರದ ಕೇಂದ್ರ ವಿಭಾಗ ಸೇರಿ ಎರಡು ವಿಭಾಗದಲ್ಲಿ ಕೇಸ್ ದಾಖಲಾಗಿದ್ದು, ಪ್ರಕರಣಗಳ ಸಂಬಂಧ ತಲೆಮರೆಸಿಕೊಂಡಿದ್ದ ಆರೋಪಿಗಳ ಪೈಕಿ ಇಬ್ಬರನ್ನು ಕೇಂದ್ರ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಮುಬಾರಕ್ ಪಾಶಾ ಮತ್ತು ಅನ್ವರ್ ಪಾಶಾ ಬಂಧಿತರಾಗಿದ್ದಾರೆ. ಆರೋಪಿಗಳ ವಿರುದ್ಧ ನಗರದ ಹಲವು ಕಡೆ ಇಂತಹ ದೂರುಗಳು ದಾಖಲಾಗಿರೋದು ಗೊತ್ತಾಗಿದ್ದು, ಸದ್ಯ ಎಲ್ಲ ಪ್ರಕರಣಗಳನ್ನ ವಿಧಾನಸೌಧ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ ತನಿಖೆ ನಡೆಸಲಾಗುತ್ತಿದೆ. ಎಸ್ಕೇಪ್​​ ಆಗಿರುವ ಉಳಿದ ಮೂವರು ಪ್ರಮುಖ ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ.

ಮುಸುಕುಧಾರಿ ಕಳ್ಳರ ಓಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಮತ್ತೊಂದೆಡೆ ಮೈ ಮೇಲೆ ಬೆಡ್‌ಶೀಟ್ ಮತ್ತು ಟವೆಲ್ ಹೊದ್ದು ಬಂದ ಖದೀಮರು ಬೇಗೂರು ಕೊಪ್ಪ, ಮೈಲಸಂದ್ರದಲ್ಲಿ ಮಧ್ಯರಾತ್ರಿ ಕೈಚಳಕ ತೋರಿರುವ ಘಟನೆ ನಡೆದಿದೆ. ‘ಗ್ರೀನ್ ವ್ಯಾಲಿ ಲೇಔಟ್’ ಮನೆಗಳನ್ನ ಟಾರ್ಗೆಟ್ ಮಾಡಿದ್ದ ತಂಡದ ಒಟ್ಟು 8 ಮಂದಿಯ ಓಡಾಟದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ವಿಕಾಸ್​​, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:32 pm, Fri, 24 July 26

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ