AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime: ಬೆಂಗಳೂರಿನಲ್ಲಿ ಹೆಂಡತಿ ಮೇಲೆ ಕುದಿಯುವ ಎಣ್ಣೆ ಸುರಿದು ಗಂಡನಿಂದ ಕೊಲೆ ಯತ್ನ; ಅಡ್ಡ ಬಂದ ಮಗಳ ಮೇಲೂ ಹಲ್ಲೆ

ಸಮಯಕ್ಕೆ ಸರಿಯಾಗಿ ಅಕ್ಕಪಕ್ಕದವರು ಅಲ್ಲಿಗೆ ಬಂದಿದ್ದರಿಂದ ತಾಯಿ-ಮಗಳಿಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವೇಳೆ ಬಿಸಿ ಎಣ್ಣೆ ಎರಚಿದ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾನೆ.

Bengaluru Crime: ಬೆಂಗಳೂರಿನಲ್ಲಿ ಹೆಂಡತಿ ಮೇಲೆ ಕುದಿಯುವ ಎಣ್ಣೆ ಸುರಿದು ಗಂಡನಿಂದ ಕೊಲೆ ಯತ್ನ; ಅಡ್ಡ ಬಂದ ಮಗಳ ಮೇಲೂ ಹಲ್ಲೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Feb 02, 2022 | 3:06 PM

Share

ಬೆಂಗಳೂರು: ತನ್ನ ಹೆಂಡತಿಯ ಮೈ ಮೇಲೆ ಗಂಡನೋರ್ವ ಕುದಿಯುವ ಎಣ್ಣೆಯನ್ನು ಸೋಕಿದ ಘಟನೆ ಬೆಂಗಳೂರಿನ (Bangalore) ಆಡುಗೋಡಿ ಸಮೀಪದ ಎಲ್​ಆರ್​ ನಗರದಲ್ಲಿ ನಡೆದಿದೆ. ಈ ವೇಳೆ ತನ್ನ ತಾಯಿಯನ್ನು ಅಪ್ಪನಿಂದ ಕಾಪಾಡಲು ಬಂದ ಮಗಳ ಮೇಲೂ ಆ ವ್ಯಕ್ತಿ ಬಿಸಿ ಎಣ್ಣೆ (Hot Oil) ಎರಚಿದ್ದಾನೆ. ಬೆಂಗಳೂರಿನ 38 ವರ್ಷದ ಮಹಿಳೆಯ ಮೇಲೆ ದೌರ್ಜನ್ಯ ನಡೆಸಿದ ಆಕೆಯ ಗಂಡ ಬಳಿಕ ಬಿಸಿ ಎಣ್ಣೆ ಸುರಿದು ಚಿತ್ರಹಿಂಸೆ ನೀಡಿದ್ದಾನೆ. ಆ ವೇಳೆ ಆತನ 13 ವರ್ಷದ ಮಗಳು ಅಲ್ಲಿಗೆ ಬಂದಿದ್ದು, ತನ್ನ ತಾಯಿಯನ್ನು ಕಾಪಾಡಲು ಪ್ರಯತ್ನಿಸಿದ್ದಾಳೆ. ಆಗ ಮಗಳ ಮೇಲೂ ಆತ ಎಣ್ಣೆಯನ್ನು ಸುರಿದಿದ್ದಾನೆ.

ಈ ವೇಳೆ ತಾಯಿ-ಮಗಳಿಬ್ಬರೂ ಸಹಾಯಕ್ಕಾಗಿ ಜೋರಾಗಿ ಕಿರುಚಾಡಿದ್ದು, ಅಕ್ಕಪಕ್ಕದ ಮನೆಯವರು ಬಂದು ಅವರಿಬ್ಬರನ್ನೂ ಕಾಪಾಡಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಬಿಸಿ ಎಣ್ಣೆ ಎರಚಿದ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾನೆ. ಸಮಯಕ್ಕೆ ಸರಿಯಾಗಿ ಅಕ್ಕಪಕ್ಕದವರು ಅಲ್ಲಿಗೆ ಬಂದಿದ್ದರಿಂದ ತಾಯಿ-ಮಗಳಿಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜ. 31ರ ಮುಂಜಾನೆ ಈ ಘಟನೆ ನಡೆದಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.

ಹೆಂಡತಿ ಮತ್ತು ಮಗಳಿಬ್ಬರಿಗೂ ಎಣ್ಣೆ ಎರಚಿದ ವ್ಯಕ್ತಿಯನ್ನು ಥಾಮಸ್ ಎಂದು ಗುರುತಿಸಲಾಗಿದೆ. ಅಡುಗೆಮನೆಯಲ್ಲಿ ನೀರು ಬಿಸಿ ಮಾಡಿಕೊಳ್ಳುತ್ತೇನೆ ಎಂದು ಹೇಳಿ ಒಳಗೆ ಹೋದ ಥಾಮಸ್ ನೀರಿನ ಬದಲು ಎಣ್ಣೆಯನ್ನು ಬಿಸಿ ಮಾಡಿದ್ದಾನೆ. ಬಳಿಕ ಹೊರಗೆ ಕುಳಿತಿದ್ದ ತನ್ನ ಹೆಂಡತಿಯ ತಲೆಗೆ ಕೋಲಿನಿಂದ ಹೊಡೆದಿದ್ದಾನೆ. ಇದರಿಂದ ಆಕೆ ಪ್ರಜ್ಞಾಹೀನಳಾಗಿ ಬಿದ್ದಿದ್ದಾಳೆ. ನಂತರ ಮತ್ತೆ ಅಡುಗೆಮನೆಗೆ ಹೋದ ಆತ ಆಕೆಯ ಮೈಮೇಲೆ ಬಿಸಿ ಎಣ್ಣೆಯನ್ನು ಹಾಕಿದ್ದಾನೆ. ಹೆಂಡತಿಯನ್ನು ಕೊಲೆ ಮಾಡಲೆಂದೇ ಆತ ಈ ರೀತಿ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ಆದರೆ, ಅಪ್ಪ-ಅಮ್ಮನ ಗಲಾಟೆಯ ವೇಳೆ ರೂಮಿನಲ್ಲಿ ಮಲಗಿದ್ದ 13 ವರ್ಷದ ಮಗಳಿಗೆ ಎಚ್ಚರವಾಗಿ ಹೊರಗೆ ಬಂದಿದ್ದಾಳೆ. ಅಮ್ಮನಿಗೆ ಅಪ್ಪ ಹೊಡೆಯುತ್ತಿರುವುದನ್ನು ನೋಡಿ ಆಕೆ ಅಡ್ಡ ಬಂದಿದ್ದಾಳೆ. ಆಗ ಥಾಮಸ್ ತನ್ನ ಮಗಳ ಕೈಮೇಲೂ ಬಿಸಿ ಎಣ್ಣೆ ಸುರಿದು ಸುಟ್ಟಿದ್ದಾನೆ. ಇದೀಗ ಪೊಲೀಸರು ಥಾಮಸ್​ನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಯಾವ ಕಾರಣದಿಂದ ಆತ ತನ್ನ ಹೆಂಡತಿಯನ್ನು ಕೊಲ್ಲಲು ಪ್ರಯತ್ನಿಸಿದ್ದ ಎಂಬುದು ಇನ್ನೂ ತಿಳಿದಿಲ್ಲ.

ಇದನ್ನೂ ಓದಿ: Crime News: ಬ್ಲಾಕ್ ಮ್ಯಾಜಿಕ್ ಶಂಕೆ; ವೃದ್ಧ ದಂಪತಿಯನ್ನು ಕೊಂದು, ಗುಡಿಸಲಲ್ಲಿ ಸುಟ್ಟು ಹಾಕಿದ ಯುವಕ

Murder: ಸ್ನಾನಕ್ಕೆ ಹೋದ ಗಂಡನಿಗೆ ಟವೆಲ್ ಕೊಡಲು ತಡವಾಗಿದ್ದಕ್ಕೆ ಹೆಂಡತಿಯ ಬರ್ಬರ ಹತ್ಯೆ

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ