AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime: ಬೆಂಗಳೂರಿನಲ್ಲಿ ಹೆಂಡತಿ ಮೇಲೆ ಕುದಿಯುವ ಎಣ್ಣೆ ಸುರಿದು ಗಂಡನಿಂದ ಕೊಲೆ ಯತ್ನ; ಅಡ್ಡ ಬಂದ ಮಗಳ ಮೇಲೂ ಹಲ್ಲೆ

ಸಮಯಕ್ಕೆ ಸರಿಯಾಗಿ ಅಕ್ಕಪಕ್ಕದವರು ಅಲ್ಲಿಗೆ ಬಂದಿದ್ದರಿಂದ ತಾಯಿ-ಮಗಳಿಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವೇಳೆ ಬಿಸಿ ಎಣ್ಣೆ ಎರಚಿದ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾನೆ.

Bengaluru Crime: ಬೆಂಗಳೂರಿನಲ್ಲಿ ಹೆಂಡತಿ ಮೇಲೆ ಕುದಿಯುವ ಎಣ್ಣೆ ಸುರಿದು ಗಂಡನಿಂದ ಕೊಲೆ ಯತ್ನ; ಅಡ್ಡ ಬಂದ ಮಗಳ ಮೇಲೂ ಹಲ್ಲೆ
ಸಾಂಕೇತಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 02, 2022 | 3:06 PM

ಬೆಂಗಳೂರು: ತನ್ನ ಹೆಂಡತಿಯ ಮೈ ಮೇಲೆ ಗಂಡನೋರ್ವ ಕುದಿಯುವ ಎಣ್ಣೆಯನ್ನು ಸೋಕಿದ ಘಟನೆ ಬೆಂಗಳೂರಿನ (Bangalore) ಆಡುಗೋಡಿ ಸಮೀಪದ ಎಲ್​ಆರ್​ ನಗರದಲ್ಲಿ ನಡೆದಿದೆ. ಈ ವೇಳೆ ತನ್ನ ತಾಯಿಯನ್ನು ಅಪ್ಪನಿಂದ ಕಾಪಾಡಲು ಬಂದ ಮಗಳ ಮೇಲೂ ಆ ವ್ಯಕ್ತಿ ಬಿಸಿ ಎಣ್ಣೆ (Hot Oil) ಎರಚಿದ್ದಾನೆ. ಬೆಂಗಳೂರಿನ 38 ವರ್ಷದ ಮಹಿಳೆಯ ಮೇಲೆ ದೌರ್ಜನ್ಯ ನಡೆಸಿದ ಆಕೆಯ ಗಂಡ ಬಳಿಕ ಬಿಸಿ ಎಣ್ಣೆ ಸುರಿದು ಚಿತ್ರಹಿಂಸೆ ನೀಡಿದ್ದಾನೆ. ಆ ವೇಳೆ ಆತನ 13 ವರ್ಷದ ಮಗಳು ಅಲ್ಲಿಗೆ ಬಂದಿದ್ದು, ತನ್ನ ತಾಯಿಯನ್ನು ಕಾಪಾಡಲು ಪ್ರಯತ್ನಿಸಿದ್ದಾಳೆ. ಆಗ ಮಗಳ ಮೇಲೂ ಆತ ಎಣ್ಣೆಯನ್ನು ಸುರಿದಿದ್ದಾನೆ.

ಈ ವೇಳೆ ತಾಯಿ-ಮಗಳಿಬ್ಬರೂ ಸಹಾಯಕ್ಕಾಗಿ ಜೋರಾಗಿ ಕಿರುಚಾಡಿದ್ದು, ಅಕ್ಕಪಕ್ಕದ ಮನೆಯವರು ಬಂದು ಅವರಿಬ್ಬರನ್ನೂ ಕಾಪಾಡಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಬಿಸಿ ಎಣ್ಣೆ ಎರಚಿದ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾನೆ. ಸಮಯಕ್ಕೆ ಸರಿಯಾಗಿ ಅಕ್ಕಪಕ್ಕದವರು ಅಲ್ಲಿಗೆ ಬಂದಿದ್ದರಿಂದ ತಾಯಿ-ಮಗಳಿಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜ. 31ರ ಮುಂಜಾನೆ ಈ ಘಟನೆ ನಡೆದಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.

ಹೆಂಡತಿ ಮತ್ತು ಮಗಳಿಬ್ಬರಿಗೂ ಎಣ್ಣೆ ಎರಚಿದ ವ್ಯಕ್ತಿಯನ್ನು ಥಾಮಸ್ ಎಂದು ಗುರುತಿಸಲಾಗಿದೆ. ಅಡುಗೆಮನೆಯಲ್ಲಿ ನೀರು ಬಿಸಿ ಮಾಡಿಕೊಳ್ಳುತ್ತೇನೆ ಎಂದು ಹೇಳಿ ಒಳಗೆ ಹೋದ ಥಾಮಸ್ ನೀರಿನ ಬದಲು ಎಣ್ಣೆಯನ್ನು ಬಿಸಿ ಮಾಡಿದ್ದಾನೆ. ಬಳಿಕ ಹೊರಗೆ ಕುಳಿತಿದ್ದ ತನ್ನ ಹೆಂಡತಿಯ ತಲೆಗೆ ಕೋಲಿನಿಂದ ಹೊಡೆದಿದ್ದಾನೆ. ಇದರಿಂದ ಆಕೆ ಪ್ರಜ್ಞಾಹೀನಳಾಗಿ ಬಿದ್ದಿದ್ದಾಳೆ. ನಂತರ ಮತ್ತೆ ಅಡುಗೆಮನೆಗೆ ಹೋದ ಆತ ಆಕೆಯ ಮೈಮೇಲೆ ಬಿಸಿ ಎಣ್ಣೆಯನ್ನು ಹಾಕಿದ್ದಾನೆ. ಹೆಂಡತಿಯನ್ನು ಕೊಲೆ ಮಾಡಲೆಂದೇ ಆತ ಈ ರೀತಿ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ಆದರೆ, ಅಪ್ಪ-ಅಮ್ಮನ ಗಲಾಟೆಯ ವೇಳೆ ರೂಮಿನಲ್ಲಿ ಮಲಗಿದ್ದ 13 ವರ್ಷದ ಮಗಳಿಗೆ ಎಚ್ಚರವಾಗಿ ಹೊರಗೆ ಬಂದಿದ್ದಾಳೆ. ಅಮ್ಮನಿಗೆ ಅಪ್ಪ ಹೊಡೆಯುತ್ತಿರುವುದನ್ನು ನೋಡಿ ಆಕೆ ಅಡ್ಡ ಬಂದಿದ್ದಾಳೆ. ಆಗ ಥಾಮಸ್ ತನ್ನ ಮಗಳ ಕೈಮೇಲೂ ಬಿಸಿ ಎಣ್ಣೆ ಸುರಿದು ಸುಟ್ಟಿದ್ದಾನೆ. ಇದೀಗ ಪೊಲೀಸರು ಥಾಮಸ್​ನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಯಾವ ಕಾರಣದಿಂದ ಆತ ತನ್ನ ಹೆಂಡತಿಯನ್ನು ಕೊಲ್ಲಲು ಪ್ರಯತ್ನಿಸಿದ್ದ ಎಂಬುದು ಇನ್ನೂ ತಿಳಿದಿಲ್ಲ.

ಇದನ್ನೂ ಓದಿ: Crime News: ಬ್ಲಾಕ್ ಮ್ಯಾಜಿಕ್ ಶಂಕೆ; ವೃದ್ಧ ದಂಪತಿಯನ್ನು ಕೊಂದು, ಗುಡಿಸಲಲ್ಲಿ ಸುಟ್ಟು ಹಾಕಿದ ಯುವಕ

Murder: ಸ್ನಾನಕ್ಕೆ ಹೋದ ಗಂಡನಿಗೆ ಟವೆಲ್ ಕೊಡಲು ತಡವಾಗಿದ್ದಕ್ಕೆ ಹೆಂಡತಿಯ ಬರ್ಬರ ಹತ್ಯೆ

ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್