AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime: ಬೆಂಗಳೂರಿನಲ್ಲಿ ಹೆಂಡತಿ ಮೇಲೆ ಕುದಿಯುವ ಎಣ್ಣೆ ಸುರಿದು ಗಂಡನಿಂದ ಕೊಲೆ ಯತ್ನ; ಅಡ್ಡ ಬಂದ ಮಗಳ ಮೇಲೂ ಹಲ್ಲೆ

ಸಮಯಕ್ಕೆ ಸರಿಯಾಗಿ ಅಕ್ಕಪಕ್ಕದವರು ಅಲ್ಲಿಗೆ ಬಂದಿದ್ದರಿಂದ ತಾಯಿ-ಮಗಳಿಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವೇಳೆ ಬಿಸಿ ಎಣ್ಣೆ ಎರಚಿದ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾನೆ.

Bengaluru Crime: ಬೆಂಗಳೂರಿನಲ್ಲಿ ಹೆಂಡತಿ ಮೇಲೆ ಕುದಿಯುವ ಎಣ್ಣೆ ಸುರಿದು ಗಂಡನಿಂದ ಕೊಲೆ ಯತ್ನ; ಅಡ್ಡ ಬಂದ ಮಗಳ ಮೇಲೂ ಹಲ್ಲೆ
ಸಾಂಕೇತಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Feb 02, 2022 | 3:06 PM

Share

ಬೆಂಗಳೂರು: ತನ್ನ ಹೆಂಡತಿಯ ಮೈ ಮೇಲೆ ಗಂಡನೋರ್ವ ಕುದಿಯುವ ಎಣ್ಣೆಯನ್ನು ಸೋಕಿದ ಘಟನೆ ಬೆಂಗಳೂರಿನ (Bangalore) ಆಡುಗೋಡಿ ಸಮೀಪದ ಎಲ್​ಆರ್​ ನಗರದಲ್ಲಿ ನಡೆದಿದೆ. ಈ ವೇಳೆ ತನ್ನ ತಾಯಿಯನ್ನು ಅಪ್ಪನಿಂದ ಕಾಪಾಡಲು ಬಂದ ಮಗಳ ಮೇಲೂ ಆ ವ್ಯಕ್ತಿ ಬಿಸಿ ಎಣ್ಣೆ (Hot Oil) ಎರಚಿದ್ದಾನೆ. ಬೆಂಗಳೂರಿನ 38 ವರ್ಷದ ಮಹಿಳೆಯ ಮೇಲೆ ದೌರ್ಜನ್ಯ ನಡೆಸಿದ ಆಕೆಯ ಗಂಡ ಬಳಿಕ ಬಿಸಿ ಎಣ್ಣೆ ಸುರಿದು ಚಿತ್ರಹಿಂಸೆ ನೀಡಿದ್ದಾನೆ. ಆ ವೇಳೆ ಆತನ 13 ವರ್ಷದ ಮಗಳು ಅಲ್ಲಿಗೆ ಬಂದಿದ್ದು, ತನ್ನ ತಾಯಿಯನ್ನು ಕಾಪಾಡಲು ಪ್ರಯತ್ನಿಸಿದ್ದಾಳೆ. ಆಗ ಮಗಳ ಮೇಲೂ ಆತ ಎಣ್ಣೆಯನ್ನು ಸುರಿದಿದ್ದಾನೆ.

ಈ ವೇಳೆ ತಾಯಿ-ಮಗಳಿಬ್ಬರೂ ಸಹಾಯಕ್ಕಾಗಿ ಜೋರಾಗಿ ಕಿರುಚಾಡಿದ್ದು, ಅಕ್ಕಪಕ್ಕದ ಮನೆಯವರು ಬಂದು ಅವರಿಬ್ಬರನ್ನೂ ಕಾಪಾಡಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಬಿಸಿ ಎಣ್ಣೆ ಎರಚಿದ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾನೆ. ಸಮಯಕ್ಕೆ ಸರಿಯಾಗಿ ಅಕ್ಕಪಕ್ಕದವರು ಅಲ್ಲಿಗೆ ಬಂದಿದ್ದರಿಂದ ತಾಯಿ-ಮಗಳಿಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜ. 31ರ ಮುಂಜಾನೆ ಈ ಘಟನೆ ನಡೆದಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.

ಹೆಂಡತಿ ಮತ್ತು ಮಗಳಿಬ್ಬರಿಗೂ ಎಣ್ಣೆ ಎರಚಿದ ವ್ಯಕ್ತಿಯನ್ನು ಥಾಮಸ್ ಎಂದು ಗುರುತಿಸಲಾಗಿದೆ. ಅಡುಗೆಮನೆಯಲ್ಲಿ ನೀರು ಬಿಸಿ ಮಾಡಿಕೊಳ್ಳುತ್ತೇನೆ ಎಂದು ಹೇಳಿ ಒಳಗೆ ಹೋದ ಥಾಮಸ್ ನೀರಿನ ಬದಲು ಎಣ್ಣೆಯನ್ನು ಬಿಸಿ ಮಾಡಿದ್ದಾನೆ. ಬಳಿಕ ಹೊರಗೆ ಕುಳಿತಿದ್ದ ತನ್ನ ಹೆಂಡತಿಯ ತಲೆಗೆ ಕೋಲಿನಿಂದ ಹೊಡೆದಿದ್ದಾನೆ. ಇದರಿಂದ ಆಕೆ ಪ್ರಜ್ಞಾಹೀನಳಾಗಿ ಬಿದ್ದಿದ್ದಾಳೆ. ನಂತರ ಮತ್ತೆ ಅಡುಗೆಮನೆಗೆ ಹೋದ ಆತ ಆಕೆಯ ಮೈಮೇಲೆ ಬಿಸಿ ಎಣ್ಣೆಯನ್ನು ಹಾಕಿದ್ದಾನೆ. ಹೆಂಡತಿಯನ್ನು ಕೊಲೆ ಮಾಡಲೆಂದೇ ಆತ ಈ ರೀತಿ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ಆದರೆ, ಅಪ್ಪ-ಅಮ್ಮನ ಗಲಾಟೆಯ ವೇಳೆ ರೂಮಿನಲ್ಲಿ ಮಲಗಿದ್ದ 13 ವರ್ಷದ ಮಗಳಿಗೆ ಎಚ್ಚರವಾಗಿ ಹೊರಗೆ ಬಂದಿದ್ದಾಳೆ. ಅಮ್ಮನಿಗೆ ಅಪ್ಪ ಹೊಡೆಯುತ್ತಿರುವುದನ್ನು ನೋಡಿ ಆಕೆ ಅಡ್ಡ ಬಂದಿದ್ದಾಳೆ. ಆಗ ಥಾಮಸ್ ತನ್ನ ಮಗಳ ಕೈಮೇಲೂ ಬಿಸಿ ಎಣ್ಣೆ ಸುರಿದು ಸುಟ್ಟಿದ್ದಾನೆ. ಇದೀಗ ಪೊಲೀಸರು ಥಾಮಸ್​ನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಯಾವ ಕಾರಣದಿಂದ ಆತ ತನ್ನ ಹೆಂಡತಿಯನ್ನು ಕೊಲ್ಲಲು ಪ್ರಯತ್ನಿಸಿದ್ದ ಎಂಬುದು ಇನ್ನೂ ತಿಳಿದಿಲ್ಲ.

ಇದನ್ನೂ ಓದಿ: Crime News: ಬ್ಲಾಕ್ ಮ್ಯಾಜಿಕ್ ಶಂಕೆ; ವೃದ್ಧ ದಂಪತಿಯನ್ನು ಕೊಂದು, ಗುಡಿಸಲಲ್ಲಿ ಸುಟ್ಟು ಹಾಕಿದ ಯುವಕ

Murder: ಸ್ನಾನಕ್ಕೆ ಹೋದ ಗಂಡನಿಗೆ ಟವೆಲ್ ಕೊಡಲು ತಡವಾಗಿದ್ದಕ್ಕೆ ಹೆಂಡತಿಯ ಬರ್ಬರ ಹತ್ಯೆ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?