AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುಡುಬುಡುಕೆ ಸ್ವಾಮೀಜಿ ವೇಷದಲ್ಲಿ ಬಂದು ಚಿನ್ನಾಭರಣ ದೋಚಿದ ಆಸಾಮಿ!

ಬೆಂಗಳೂರಿನ ಹೆಗ್ಗಡದೇವನಪುರದಲ್ಲಿ ಬುಡುಬುಡುಕೆ ಸ್ವಾಮೀಜಿ ವೇಷದಲ್ಲಿ ಬಂದ ಕಳ್ಳನೊಬ್ಬ, ಗರ್ಭಿಣಿಗೆ ಸಾವಿನ ಕಂಟಕದ ಹೆದರಿಕೆಯೊಡ್ಡಿ ಪೂಜೆಯ ನೆಪದಲ್ಲಿ 1.2 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದಾನೆ. ದೋಷ ನಿವಾರಣೆಯ ನೆಪದಲ್ಲಿ ಕುಡಿಕೆಯಲ್ಲಿ ಚಿನ್ನ ಇಡಿಸಿ, ದಂಪತಿಯನ್ನು ನಂಬಿಸಿ ವಂಚಿಸಿದ ಈ ಖದೀಮನ ಪತ್ತೆಗೆ ಮಾದನಾಯಕನಹಳ್ಳಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಬುಡುಬುಡುಕೆ ಸ್ವಾಮೀಜಿ ವೇಷದಲ್ಲಿ ಬಂದು ಚಿನ್ನಾಭರಣ ದೋಚಿದ ಆಸಾಮಿ!
ಬುಡುಬುಡುಕೆ ಸ್ವಾಮೀಜಿ ವೇಷದಲ್ಲಿ ಬಂದು ಚಿನ್ನಾಭರಣ ದೋಚಿದ ಆಸಾಮಿ!
ಭಾವನಾ ಹೆಗಡೆ
|

Updated on: Jul 20, 2026 | 2:31 PM

Share

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಗರ್ಭಿಣಿಗೆ ಸಾವು ಸಂಭವಿಸುತ್ತದೆ ಎಂದು ಹೆದರಿಸಿ ಚಿನ್ನ ದೋಚಲಾಗಿದೆ.
  • ಬುಡುಬುಡುಕೆ ಸ್ವಾಮೀಜಿ ವೇಷದಲ್ಲಿ ಬಂದ ಕಳ್ಳನಿಂದ ಲಕ್ಷಾಂತರ ರೂಪಾಯಿ ವಂಚನೆ.
  • ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ಪ್ರಗತಿಯಲ್ಲಿದೆ.

ನೆಲಮಂಗಲ, ಜುಲೈ 20: ನಿಮ್ಮ ಮನೆ ಬಾಗಿಲಿಗೆ ಬರುವ ಅಪರಿಚಿತ ಜ್ಯೋತಿಷಿಗಳು ಅಥವಾ ಸ್ವಾಮೀಜಿಗಳ ಬಗ್ಗೆ ತೀವ್ರ ಜಾಗರೂಕರಾಗಿರಬೇಕು. ಬುಡುಬುಡುಕೆ ಸ್ವಾಮೀಜಿ ವೇಷದಲ್ಲಿ ಬಂದು, ಮನೆಯಲ್ಲಿ ಸಾವಿನ ಕಂಟಕವಿದೆ ಎಂದು ಹೆದರಿಸಿ, ಪೂಜೆಯ ನೆಪದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚುವ ಶಾಕಿಂಗ್ ಘಟನೆಯೊಂದು ಬೆಂಗಳೂರು ಉತ್ತರ ತಾಲೂಕಿನ ಹೆಗ್ಗಡದೇವನಪುರದಲ್ಲಿ ಬೆಳಕಿಗೆ ಬಂದಿದೆ.

ನಡೆದಿದ್ದೇನು?

ಹೆಗ್ಗಡದೇವನಪುರದ ನಿವಾಸಿ ಮೋಹನ್ ಹಾಗೂ ಅವರ ಪತ್ನಿ ಉಷಾ ಅವರ ಮನೆಗೆ ಬುಡುಬುಡುಕೆ ಸ್ವಾಮೀಜಿ ವೇಷ ಧರಿಸಿದ್ದ ಕಳ್ಳನೊಬ್ಬ ಬಂದಿದ್ದ. ಮೋಹನ್ ಅವರ ಪತ್ನಿ ಉಷಾ ಪ್ರಸ್ತುತ 8 ತಿಂಗಳ ಗರ್ಭಿಣಿಯಾಗಿದ್ದು, ಇದನ್ನೇ ಬಂಡವಾಳ ಮಾಡಿಕೊಂಡ ಖದೀಮ, ನಿಮ್ಮ ಮನೆಗೆ ದೊಡ್ಡ ದೋಷವಿದೆ, ಶೀಘ್ರದಲ್ಲೇ ಯಾರೋ ಸಾಯುತ್ತಾರೆ ಎಂದು ದಂಪತಿಯನ್ನು ಹೆದರಿಸಿದ್ದಾನೆ. ಇದರಿಂದ ಆತಂಕಗೊಂಡ ದಂಪತಿ ಪರಿಹಾರ ಕೇಳಿದಾಗ, ನನಗೆ ಯಾವುದೇ ಹಣ ಬೇಡ, ಉಚಿತವಾಗಿಯೇ ಪೂಜೆ ಮಾಡಿಕೊಡುತ್ತೇನೆ ಎಂದು ನಂಬಿಸಿ ಮನೆ ಒಳಗೆ ಪ್ರವೇಶಿಸಿದ್ದಾನೆ.

ಕ್ಷಣಾರ್ಧದಲ್ಲಿ ಚಿನ್ನಾಭರಣ ಮಾಯ

ಮನೆಯೊಳಗೆ ಬರುತ್ತಿದ್ದಂತೆ ಪೂಜೆಯ ನಾಟಕವಾಡಿದ ಕಳ್ಳ ಸ್ವಾಮಿ, ತಾನು ತಂದಿದ್ದ ಮಣ್ಣಿನ ಕುಡಿಕೆಯನ್ನು ಮುಂದಿಟ್ಟಿದ್ದಾನೆ. ಈ ಕುಡಿಕೆಯಲ್ಲಿ ನಿಮ್ಮಲ್ಲಿರುವ ಚಿನ್ನಾಭರಣಗಳನ್ನು ಹಾಕಿ ಪೂಜೆ ಮಾಡಿದರೆ ಮನೆಯ ದೋಷ ನಿವಾರಣೆಯಾಗುವುದಲ್ಲದೆ, ಚಿನ್ನ ಇನ್ನೂ ಹೆಚ್ಚಾಗುತ್ತದೆ ಎಂದು ಪುಸಲಾಯಿಸಿದ್ದಾನೆ. ಇದನ್ನು ನಿಜವೆಂದು ನಂಬಿದ ದಂಪತಿ, ತಮ್ಮ ಬಳಿಯಿದ್ದ ಕಿವಿ ಓಲೆ, ಮಾಟಿ ಹಾಗೂ ಉಂಗುರವನ್ನು ಬಿಚ್ಚಿ ಕುಡಿಕೆಯಲ್ಲಿ ಹಾಕಿದ್ದಾರೆ.

ಬಳಿಕ ದಂಪತಿಗೆ ನೀರು ತರುವಂತೆ ನೆಪ ಹೇಳಿ ಒಳಗಡೆ ಕಳುಹಿಸಿದ ಖದೀಮ, ಕ್ಷಣಾರ್ಧದಲ್ಲಿ ಚಿನ್ನವಿದ್ದ ಕುಡಿಕೆಯನ್ನು ಬದಲಾಯಿಸಿ ತನ್ನ ಬಳಿಯಿದ್ದ ಬೇರೊಂದು ನಕಲಿ ಕುಡಿಕೆಯನ್ನು ಅಲ್ಲಿಟ್ಟಿದ್ದಾನೆ. ನಂತರ ದಂಪತಿಯ ಕೈಗೆ ಒಂದು ವಸ್ತುವನ್ನು ನೀಡಿ, ಇದನ್ನು ಯಾರಿಗೂ ತಿಳಿಯದಂತೆ ತಕ್ಷಣ ಹೋಗಿ ಕೆರೆಗೆ ಬಿಟ್ಟು ಬನ್ನಿ ಎಂದು ಕಳುಹಿಸಿದ್ದಾನೆ. ದಂಪತಿ ಕೆರೆಯತ್ತ ಹೋಗುತ್ತಿದ್ದಂತೆ, ಇತ್ತ ಕಳ್ಳಸ್ವಾಮಿ ಸುಮಾರು 1 ಲಕ್ಷದ 20 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣದೊಂದಿಗೆ ಎಸ್ಕೇಪ್ ಆಗಿದ್ದಾನೆ.

ಮಾದನಾಯಕನಹಳ್ಳಿ ಠಾಣೆಯಲ್ಲಿ ದೂರು

ಕೆರೆಗೆ ವಸ್ತು ಬಿಟ್ಟು ಮನೆಗೆ ಮರಳಿದ ದಂಪತಿ, ಸ್ವಾಮೀಜಿ ಕಾಣದೆ ಇದ್ದಾಗ ಅನುಮಾನಗೊಂಡು ಪೂಜೆಯ ಕುಡಿಕೆಯನ್ನು ಪರಿಶೀಲಿಸಿದ್ದಾರೆ. ಆಗ ಅದರಲ್ಲಿ ಚಿನ್ನದ ಬದಲಿಗೆ ಕಲ್ಲು-ಮಣ್ಣು ಇರುವುದನ್ನು ಕಂಡು ತಾವೇ ಮೋಸ ಹೋಗಿರುವುದು ಬೆಳಕಿಗೆ ಬಂದಿದೆ. ಈ ವಂಚನೆಗೆ ಸಂಬಂಧಿಸಿದಂತೆ ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳ ಸ್ವಾಮಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ವರದಿ: ಮಂಜುನಾಥ, ಟಿವಿ9 ನೆಲಮಂಗಲ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಸತ್ ಮುಂಗಾರು ಅಧಿವೇಶನ: ಉಭಯ ಸದನಗಳಲ್ಲಿ ಭಾರಿ ಹೈಡ್ರಾಮಾ
ಸಂಸತ್ ಮುಂಗಾರು ಅಧಿವೇಶನ: ಉಭಯ ಸದನಗಳಲ್ಲಿ ಭಾರಿ ಹೈಡ್ರಾಮಾ
ಯಲಬುರ್ಗಾ: ರೈತರ ಮೇಲೆ ಪಿಎಸ್​ಐ ಗುರುರಾಜ್​ ದೌರ್ಜನ್ಯ ಆರೋಪ, ವಿಡಿಯೋ ವೈರಲ್
ಯಲಬುರ್ಗಾ: ರೈತರ ಮೇಲೆ ಪಿಎಸ್​ಐ ಗುರುರಾಜ್​ ದೌರ್ಜನ್ಯ ಆರೋಪ, ವಿಡಿಯೋ ವೈರಲ್
ತಾಯಿ ಪಾರ್ಥಿವ ಶರೀರದ ಎದುರು ಶ್ಲೋಕ ಪಠಿಸುತ್ತಲೇ ಪುತ್ರಿ ಅನಸೂಯಾ ಭಾವುಕ
ತಾಯಿ ಪಾರ್ಥಿವ ಶರೀರದ ಎದುರು ಶ್ಲೋಕ ಪಠಿಸುತ್ತಲೇ ಪುತ್ರಿ ಅನಸೂಯಾ ಭಾವುಕ
ಯುವ ಜನತೆಗೆ ಸಿಎಂ ಡಿ.ಕೆ.ಶಿವಕುಮಾರ್ ಬಂಪರ್ ಕೊಡುಗೆ
ಯುವ ಜನತೆಗೆ ಸಿಎಂ ಡಿ.ಕೆ.ಶಿವಕುಮಾರ್ ಬಂಪರ್ ಕೊಡುಗೆ
ಯುವಶಕ್ತಿ, ಬಾಹ್ಯಾಕಾಶ ಸಾಧನೆ, ದೇಶದ ಆರ್ಥಿಕ ಪ್ರಗತಿ ಶ್ಲಾಘಿಸಿದ ಪ್ರಧಾನಿ
ಯುವಶಕ್ತಿ, ಬಾಹ್ಯಾಕಾಶ ಸಾಧನೆ, ದೇಶದ ಆರ್ಥಿಕ ಪ್ರಗತಿ ಶ್ಲಾಘಿಸಿದ ಪ್ರಧಾನಿ
ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ
ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ
82 ಸಾವಿರ ಜನರ ಮಧ್ಯೆ ಕುಳಿತು ಫಿಫಾ ವರ್ಲ್ಡ್​​​ಕಪ್ ಫೈನಲ್ ವೀಕ್ಷಿಸಿದ ಮೋಹನ
82 ಸಾವಿರ ಜನರ ಮಧ್ಯೆ ಕುಳಿತು ಫಿಫಾ ವರ್ಲ್ಡ್​​​ಕಪ್ ಫೈನಲ್ ವೀಕ್ಷಿಸಿದ ಮೋಹನ
ರೇವಣ್ಣ ಮನೆ ಬಳಿ ಮಳೆಯ ಮಧ್ಯೆಯೂ ಚೆನ್ನಮ್ಮ ಅಂತಿಮ ದರ್ಶನಕ್ಕೆ ಬಂದ ಜನ!
ರೇವಣ್ಣ ಮನೆ ಬಳಿ ಮಳೆಯ ಮಧ್ಯೆಯೂ ಚೆನ್ನಮ್ಮ ಅಂತಿಮ ದರ್ಶನಕ್ಕೆ ಬಂದ ಜನ!
ಇಂದು ಮಧ್ಯಾಹ್ನ ಚೆನ್ನಮ್ಮ ಅಂತ್ಯಕ್ರಿಯೆ: ಪ್ರಮುಖ ಬಿಜೆಪಿ ನಾಯಕರು ಭಾಗಿ
ಇಂದು ಮಧ್ಯಾಹ್ನ ಚೆನ್ನಮ್ಮ ಅಂತ್ಯಕ್ರಿಯೆ: ಪ್ರಮುಖ ಬಿಜೆಪಿ ನಾಯಕರು ಭಾಗಿ
ಇಂದು ಸ್ಕಂದ ಷಷ್ಠಿ: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಸ್ಕಂದ ಷಷ್ಠಿ: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ