AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಪೊಲೀಸ್ ಮಾಹಿತಿದಾರರಿಂದಲೇ ವಿದ್ಯಾರ್ಥಿಯಿಂದ ಒಂದೂವರೆ ಲಕ್ಷ ರೂ. ಹಣ ಸುಲಿಗೆ; ಮೂವರು ಅರೆಸ್ಟ್

ಪೊಲೀಸರು ಎಂದು ಹೇಳಿಕೊಂಡು ವಿದ್ಯಾರ್ಥಿಯನ್ನು ಕಾರಿನಲ್ಲಿ ಹತ್ತಿಸಿಕೊಂಡು ಹಣ ಡ್ರಾ ಮಾಡಿಸಿಕೊಂಡು ವಂಚಿಸಿದ್ದಾರೆ. ಅಲ್ಲದೆ ಈ ವಿಚಾರ ಬಾಯ್ಬಿಟ್ಟರೆ ಕೊಲೆ ಮಾಡೋದಾಗಿ ವಿದ್ಯಾರ್ಥಿಗೆ ಬೆದರಿಸಿದ್ದಾರೆ.

Bengaluru News: ಪೊಲೀಸ್ ಮಾಹಿತಿದಾರರಿಂದಲೇ ವಿದ್ಯಾರ್ಥಿಯಿಂದ ಒಂದೂವರೆ ಲಕ್ಷ ರೂ. ಹಣ ಸುಲಿಗೆ; ಮೂವರು ಅರೆಸ್ಟ್
ಲೋಕೇಶ್, ಅರುಣ್, ರಾಕೇಶ್ ಬಂಧಿತ ಆರೋಪಿಗಳು
Jagadisha B
| Edited By: |

Updated on:Jul 24, 2023 | 2:12 PM

Share

ಬೆಂಗಳೂರು, ಜುಲೈ 24: ನಗರದಲ್ಲಿ ಪೊಲೀಸ್ ಮಾಹಿತಿದಾರರಿಂದಲೇ( Police Informers) ಹಣ ಸುಲಿಗೆ ಮಾಡಲಾಗುತ್ತಿದೆ. ಸಾಕಷ್ಟು ಪ್ರಕರಣಗಳಲ್ಲಿ ಪೊಲೀಸರಿಗೆ ಮಾಹಿತಿ ನೀಡ್ತಿದ್ದ ಆರೋಪಿಗಳೇ ಪೊಲೀಸರ ರೀತಿಯಲ್ಲಿ ವಿದ್ಯಾರ್ಥಿಯನ್ನು ಬೆದರಿಸಿ 1 ಲಕ್ಷ 70 ಸಾವಿರ ರೂಪಾಯಿ ಸುಲಿಗೆ ಮಾಡಿದ್ದಾರೆ. ಪೊಲೀಸರು ಎಂದು ಹೇಳಿಕೊಂಡು ವಿದ್ಯಾರ್ಥಿಯನ್ನು ಕಾರಿನಲ್ಲಿ ಹತ್ತಿಸಿಕೊಂಡು ಹಣ ಡ್ರಾ ಮಾಡಿಸಿಕೊಂಡು ವಂಚಿಸಿದ್ದಾರೆ. ಅಲ್ಲದೆ ಈ ವಿಚಾರ ಬಾಯ್ಬಿಟ್ಟರೆ ಕೊಲೆ ಮಾಡೋದಾಗಿ ವಿದ್ಯಾರ್ಥಿಗೆ ಬೆದರಿಸಿದ್ದಾರೆ.

ಸದ್ಯ ಬೆಂಗಳೂರಿನ ಸದಾಶಿವನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ತನಿಖೆ ವೇಳೆ 15ಕ್ಕೂ ಹೆಚ್ಚು ಸುಲಿಗೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಈ ಬಗ್ಗೆ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಮಾಹಿತಿ ನೀಡಿದ್ದು, ಮೂರು ಜನ ವ್ಯಕ್ತಿಗಳು ವಿದ್ಯಾರ್ಥಿಯೊಬ್ಬನ ಟಾರ್ಗೆಟ್ ಮಾಡಿದ್ದಾರೆ. ಆತನ ಹಾಸ್ಟಲ್​ನಿಂದ ಹೊರಗೆ ಕರೆಸಿ ಆತನನ್ನು ಕರೆದೊಯ್ದಿದ್ದಾರೆ. ಗಾಂಜಾ ಕೇಸ್ ನಲ್ಲಿ ನಿನ್ನ ಹೆಸರು ಸಹ ಬಂದಿದೆ ಎಂದು ಬೆದರಿಸಿದ್ದಾರೆ. ಮೆಡಿಕಲ್ ಟೆಸ್ಟ್ ಮಾಡಿಸುವುದಾಗಿ ಹೇಳಿ ಬೆದರಿಸಿ ಒಂದೂವರೆ ಲಕ್ಷ ಹಣ ಪಡೆದಿದ್ದಾರೆ. ಆತ ದುಬೈನಲ್ಲೂ ಓದಿ ಈಗ ಬೆಂಗಳೂರಿನಲ್ಲಿ ಓದುತಿದ್ದ ವಿದ್ಯಾರ್ಥಿ. ಸತತ ಮೂರು ಗಂಟೆಗಳ ಕಾಲ ಸುತ್ತಾಡಿಸಿ ಹಣ ಪಡೆದು ಬಿಟ್ಟು ಕಳುಹಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಿ ಎಲ್ಲಾ ಆರೋಪಿಗಳ ಬಂಧನ ಮಾಡಲಾಗಿದೆ. ತನಿಖೆ ವೇಳೆ ಯಶವಂತಪುರದಲ್ಲಿ ದಾಖಲಾದ ಮತ್ತೊಂದು ಪ್ರಕರಣ ಪತ್ತೆಯಾಗಿದೆ.

ಇದನ್ನೂ ಓದಿ: Canara Bank ATM ನಲ್ಲಿ ಲಕ್ಷಾಂತರ ಹಣ ಎಗರಿಸಿದ ಖರ್ತನಾಕ್ ಖದೀಮರು

ಅದರಲ್ಲೂ ಸಹ ವ್ಯಕ್ತಿಯೋರ್ವನಿಗೆ ಇದೇ ಮಾದರಿ ವಂಚನೆ ಮಾಡಿರುವುದು ಪತ್ತೆಯಾಗಿದೆ. ಅಲ್ಲೂ ಸಹ ಪೊಲೀಸರೆಂದು ಹೇಳಿಕೊಂಡು ಸುಲಿಗೆ ಮಾಡಿದ್ದಾರೆ. ಸಣ್ಣಪುಟ್ಟ ವ್ಯವಹಾರ ಮಾಡಿಕೊಂಡಿರುವ ಆರೋಪಿಗಳು. ಪೊಲೀಸ್ ಮಾಹಿತಿದಾರರು ಎಂದು ಹೇಳಿಕೊಂಡು ಸಾರ್ವಜನಿಕರಿಗೆ ಇದೇ ಸುಳ್ಳು ಮಾಹಿತಿ ನೀಡಿ ಬೆದರಿಕೆ ಹಾಕಿ ಸುಲಿಗೆ ಮಾಡಿದ್ದಾರೆ. ರಾಕೇಶ್, ಅರುಣ್, ಲೋಕೇಶ್ ಬಂಧಿತ ಆರೋಪಿಗಳು. ಹಲವು ತಿಂಗಳಿಂದ ಕೃತ್ಯ ನಡೆಸಿರುವ ಶಂಕೆ ಇದ್ದು ಮೇಲ್ನೋಟಕ್ಕೆ ಎರಡು ಕೃತ್ಯಗಳ ಬಗ್ಗೆ ಮಾಹಿತಿ ಸಿಕ್ಕಿದೆ. ಗಾಂಜಾ ಪ್ರಕರಣಗಳ ಬಗ್ಗೆ ಮಾಹಿತಿ ಹೊಂದಿರುತಿದ್ದ ಆರೋಪಿಗಳು, ಇದೇ ಮಾಹಿತಿ ಪೊಲೀಸರಿಗೆ ನೀಡಿ ಇನ್ಫಾರ್ಮರ್​ಗಳಾಗಿದ್ದರು. ಬಳಿಕ ಹಣ ಮಾಡಲು ಪೊಲೀಸರ ರೀತಿ ಎಂಟ್ರಿ ಕೊಟ್ಟು ಸುಲಿಗೆಗೆ ಇಳಿದಿದ್ದಾರೆ. ನಾವೇ ಪೊಲೀಸರು ಎಂದು ಹೇಳಿಕೊಂಡು ವಂಚನೆ ಮಾಡಿದ್ದಾರೆ. ತನಿಖೆ ವೇಳೆ 25ಕ್ಕೂ ಅಧಿಕ ಕೃತ್ಯ ಎಸಗಿರೊದಾಗಿ ಮಾಹಿತಿ ಸಿಕ್ಕಿದೆ ಎಂದು ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದರು.

ತನಿಖೆ ವೇಳೆ ಮತ್ತಷ್ಟು ಮಂದಿ ಆರೋಪಿಗಳ ಬಗ್ಗೆ ದೂರು ನೀಡುವ ಸಾಧ್ಯತೆ ಇದ್ದು ಪೊಲೀಸರೆಂದು ಹೆದರಿ ಹಲವು ಮಂದಿ ಠಾಣೆಗೆ ಬಂದಿಲ್ಲ. ಹಣ ಕಳೆದುಕೊಂಡವರ ವಿಕ್ನೇಸ್ ಹಿಡಿದುಕೊಂಡು ಕೃತ್ಯ ಮಾಡಿದ್ದಾರೆ. ತನಿಖೆ ವೇಳೆ ಎರಡು ತಿಂಗಳಲ್ಲಿ 10 ಲಕ್ಷಕ್ಕೂ ಅಧಿಕ ಹಣ ಮಾಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಸದ್ಯ ಆರೋಪಿಗಳ ಬಂಧನದಿಂದ ಠಾಣೆಗೆ ಮತ್ತಷ್ಟು ದೂರು ದಾಖಲಾಗೊ ಸಾಧ್ಯತೆ ಇದೆ ಎಂದರು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:04 pm, Mon, 24 July 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ