AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಷಾರಾಮಿ ಕಾರು-ಬೈಕುಗಳ ಕಳ್ಳತನ: ಬೇರೆ ರಾಜ್ಯಗಳಲ್ಲಿ ಮಾರಾಟ ಮಾಡ್ತಿದ್ದ ಆರೋಪಿಗಳು ಬೆಂಗಳೂರಿನಲ್ಲಿ ಅರೆಸ್ಟ್

ಬೆಂಗಳೂರಿನಲ್ಲಿ ಬೈಕ್‌ಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ಉದಯ್ ಕುಮಾರ್(19), ಅಸ್ಲಂ ಸೊಲೇಜಾ(37) ಬಂಧಿತರು. ಆರೋಪಿಗಳಿಂದ 30.45 ಲಕ್ಷ ರೂಪಾಯಿ ಮೌಲ್ಯದ 40 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.

ಐಷಾರಾಮಿ ಕಾರು-ಬೈಕುಗಳ ಕಳ್ಳತನ: ಬೇರೆ ರಾಜ್ಯಗಳಲ್ಲಿ ಮಾರಾಟ ಮಾಡ್ತಿದ್ದ ಆರೋಪಿಗಳು ಬೆಂಗಳೂರಿನಲ್ಲಿ ಅರೆಸ್ಟ್
ಐಷಾರಾಮಿ ಕಾರು-ಬೈಕುಗಳ ಕಳ್ಳತನ: ಬೇರೆ ರಾಜ್ಯಗಳಲ್ಲಿ ಮಾರಾಟ ಮಾಡ್ತಿದ್ದ ಆರೋಪಿಗಳು ಬೆಂಗಳೂರಿನಲ್ಲಿ ಅರೆಸ್ಟ್
TV9 Web
| Edited By: |

Updated on: Mar 07, 2022 | 4:49 PM

Share

ಬೆಂಗಳೂರು: ಐಷಾರಾಮಿ ಕಾರುಗಳನ್ನು ಕದ್ದು ಬೇರೆ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೇಗೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಗೂ ಬಂಧಿತರಿಂದ 1 ಕೋಟಿ 55 ಲಕ್ಷ ರೂ. ಮೌಲ್ಯದ 6 ಇನೋವಾ ಕಾರು, 1 ಟೊಯೋಟಾ ಇಟಿಯೋಸ್ ಕಾರು ಜಪ್ತಿ ಮಾಡಲಾಗಿದೆ. ಆರೋಪಿಗಳು ಆಕ್ಸಿಡೆಂಟ್ ಆದ ವಾಹನಗಳ ಚಾರ್ಸಿ ನಂಬರ್, ವಾಹನದ ನಂಬರ್ ಕದ್ದ ಕಾರಿಗೆ ಬದಲಿಸಿ ಮಾರಾಟ ಮಾಡುತ್ತಿದ್ದರು. ತಮಿಳುನಾಡು ಮತ್ತು ಬೇರೆ ಬೇರೆ ರಾಜ್ಯದ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು. ಸದ್ಯ ಬೇಗೂರು ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ಬೈಕ್ ಕಳ್ಳರು ಅರೆಸ್ಟ್ ಇನ್ನು ಮತ್ತೊಂದೆಡೆ ಬೆಂಗಳೂರಿನಲ್ಲಿ ಬೈಕ್‌ಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ಉದಯ್ ಕುಮಾರ್(19), ಅಸ್ಲಂ ಸೊಲೇಜಾ(37) ಬಂಧಿತರು. ಆರೋಪಿಗಳಿಂದ 30.45 ಲಕ್ಷ ರೂಪಾಯಿ ಮೌಲ್ಯದ 40 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಬೆಂಗಳೂರು, ಕೋಲಾರ ಸೇರಿದಂತೆ ಹೊರವಲಯದ ವ್ಯಾಪ್ತಿಯಲ್ಲಿ ಕಳ್ಳತನ ಮಾಡ್ತಿದ್ದ ಆರೋಪಿಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಬೇಡಿಕೆ ಇರುವ ಡಿಯೋ ಬೈಕ್ಗಳನ್ನೇ ಕದ್ದು ಆರೋಪಿಗಳು ಮಾರಾಟ ಮಾಡುತ್ತಿದ್ದರು.

8 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ ಬೆಂಗಳೂರಿನಲ್ಲಿ 8 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಲಾಗಿದೆ. ಹುಳಿಮಾವು ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳ ಸೆರೆ ಹಿಡಿದಿದ್ದಾರೆ. ಬಂಧಿತರಿಂದ 12 ಕೆಜಿ 940 ಗ್ರಾಂ ಹ್ಯಾಶಿಸ್ ಆಯಿಲ್, 26 ಕೆಜಿ 250 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ವಿಕ್ರಂ ಅಲಿಯಾಸ್ ವಿಕ್ಕಿ(23), ಸಿಗಿಲ್ ವರ್ಗಿಸ್(23), ವಿಷ್ಣುಪ್ರಿಯಾ(22)ಳನ್ನು ಬಂಧಿತ ಆರೋಪಿಗಳು. ಕೇರಳದ ವರ್ಗಿಸ್, ತಮಿಳುನಾಡು ಮೂಲದ ವಿಷ್ಣುಪ್ರಿಯಾ ಎಂಬ ಆರೋಪಿಗಳು ವಿಕ್ರಂ ಮೂಲಕ ಮಾದಕ ವಸ್ತು ಮಾರಾಟ ಮಾಡಿಸುತ್ತಿದ್ದರು. ಸಿಗಿಲ್ ವರ್ಗಿಸ್ ಮತ್ತು ವಿಷ್ಣುಪ್ರಿಯಾ ಪ್ರೇಮಿಗಳು. ಇವರು ಕೊತ್ತನೂರಲ್ಲಿ ಮನೆ ಮಾಡಿಕೊಂಡು ವಾಸವಿದ್ದು ಈಗ ಅದೇ ಮನೆಯಲ್ಲಿಯೇ ಕೋಟಿ ಕೋಟಿ ಮೌಲ್ಯದ ಮಾದಕ ವಸ್ತು ಪತ್ತೆಯಾಗಿದೆ.

ಇದನ್ನೂ ಓದಿ: ಕೀವ್​​ ಗಡಿಯಲ್ಲಿ ಮಗಳ ಎದುರೇ ಮದುವೆಯಾದ ಉಕ್ರೇನಿಯನ್ ದಂಪತಿ; ಹಾಡಿ, ಸಂಭ್ರಮಿಸಿದ ಸೈನಿಕರ ವಿಡಿಯೋ ವೈರಲ್

Crime News: ಸಂಚಾರ ವಿಭಾಗ ಜಂಟಿ ಪೊಲೀಸ್ ಆಯಕ್ತರ ಕಚೇರಿಯಲ್ಲೇ ಕಳ್ಳತನ; ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್