AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಷಾರಾಮಿ ಕಾರು-ಬೈಕುಗಳ ಕಳ್ಳತನ: ಬೇರೆ ರಾಜ್ಯಗಳಲ್ಲಿ ಮಾರಾಟ ಮಾಡ್ತಿದ್ದ ಆರೋಪಿಗಳು ಬೆಂಗಳೂರಿನಲ್ಲಿ ಅರೆಸ್ಟ್

ಬೆಂಗಳೂರಿನಲ್ಲಿ ಬೈಕ್‌ಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ಉದಯ್ ಕುಮಾರ್(19), ಅಸ್ಲಂ ಸೊಲೇಜಾ(37) ಬಂಧಿತರು. ಆರೋಪಿಗಳಿಂದ 30.45 ಲಕ್ಷ ರೂಪಾಯಿ ಮೌಲ್ಯದ 40 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.

ಐಷಾರಾಮಿ ಕಾರು-ಬೈಕುಗಳ ಕಳ್ಳತನ: ಬೇರೆ ರಾಜ್ಯಗಳಲ್ಲಿ ಮಾರಾಟ ಮಾಡ್ತಿದ್ದ ಆರೋಪಿಗಳು ಬೆಂಗಳೂರಿನಲ್ಲಿ ಅರೆಸ್ಟ್
ಐಷಾರಾಮಿ ಕಾರು-ಬೈಕುಗಳ ಕಳ್ಳತನ: ಬೇರೆ ರಾಜ್ಯಗಳಲ್ಲಿ ಮಾರಾಟ ಮಾಡ್ತಿದ್ದ ಆರೋಪಿಗಳು ಬೆಂಗಳೂರಿನಲ್ಲಿ ಅರೆಸ್ಟ್
TV9 Web
| Edited By: |

Updated on: Mar 07, 2022 | 4:49 PM

Share

ಬೆಂಗಳೂರು: ಐಷಾರಾಮಿ ಕಾರುಗಳನ್ನು ಕದ್ದು ಬೇರೆ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೇಗೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಗೂ ಬಂಧಿತರಿಂದ 1 ಕೋಟಿ 55 ಲಕ್ಷ ರೂ. ಮೌಲ್ಯದ 6 ಇನೋವಾ ಕಾರು, 1 ಟೊಯೋಟಾ ಇಟಿಯೋಸ್ ಕಾರು ಜಪ್ತಿ ಮಾಡಲಾಗಿದೆ. ಆರೋಪಿಗಳು ಆಕ್ಸಿಡೆಂಟ್ ಆದ ವಾಹನಗಳ ಚಾರ್ಸಿ ನಂಬರ್, ವಾಹನದ ನಂಬರ್ ಕದ್ದ ಕಾರಿಗೆ ಬದಲಿಸಿ ಮಾರಾಟ ಮಾಡುತ್ತಿದ್ದರು. ತಮಿಳುನಾಡು ಮತ್ತು ಬೇರೆ ಬೇರೆ ರಾಜ್ಯದ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು. ಸದ್ಯ ಬೇಗೂರು ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ಬೈಕ್ ಕಳ್ಳರು ಅರೆಸ್ಟ್ ಇನ್ನು ಮತ್ತೊಂದೆಡೆ ಬೆಂಗಳೂರಿನಲ್ಲಿ ಬೈಕ್‌ಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ಉದಯ್ ಕುಮಾರ್(19), ಅಸ್ಲಂ ಸೊಲೇಜಾ(37) ಬಂಧಿತರು. ಆರೋಪಿಗಳಿಂದ 30.45 ಲಕ್ಷ ರೂಪಾಯಿ ಮೌಲ್ಯದ 40 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಬೆಂಗಳೂರು, ಕೋಲಾರ ಸೇರಿದಂತೆ ಹೊರವಲಯದ ವ್ಯಾಪ್ತಿಯಲ್ಲಿ ಕಳ್ಳತನ ಮಾಡ್ತಿದ್ದ ಆರೋಪಿಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಬೇಡಿಕೆ ಇರುವ ಡಿಯೋ ಬೈಕ್ಗಳನ್ನೇ ಕದ್ದು ಆರೋಪಿಗಳು ಮಾರಾಟ ಮಾಡುತ್ತಿದ್ದರು.

8 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ ಬೆಂಗಳೂರಿನಲ್ಲಿ 8 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಲಾಗಿದೆ. ಹುಳಿಮಾವು ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳ ಸೆರೆ ಹಿಡಿದಿದ್ದಾರೆ. ಬಂಧಿತರಿಂದ 12 ಕೆಜಿ 940 ಗ್ರಾಂ ಹ್ಯಾಶಿಸ್ ಆಯಿಲ್, 26 ಕೆಜಿ 250 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ವಿಕ್ರಂ ಅಲಿಯಾಸ್ ವಿಕ್ಕಿ(23), ಸಿಗಿಲ್ ವರ್ಗಿಸ್(23), ವಿಷ್ಣುಪ್ರಿಯಾ(22)ಳನ್ನು ಬಂಧಿತ ಆರೋಪಿಗಳು. ಕೇರಳದ ವರ್ಗಿಸ್, ತಮಿಳುನಾಡು ಮೂಲದ ವಿಷ್ಣುಪ್ರಿಯಾ ಎಂಬ ಆರೋಪಿಗಳು ವಿಕ್ರಂ ಮೂಲಕ ಮಾದಕ ವಸ್ತು ಮಾರಾಟ ಮಾಡಿಸುತ್ತಿದ್ದರು. ಸಿಗಿಲ್ ವರ್ಗಿಸ್ ಮತ್ತು ವಿಷ್ಣುಪ್ರಿಯಾ ಪ್ರೇಮಿಗಳು. ಇವರು ಕೊತ್ತನೂರಲ್ಲಿ ಮನೆ ಮಾಡಿಕೊಂಡು ವಾಸವಿದ್ದು ಈಗ ಅದೇ ಮನೆಯಲ್ಲಿಯೇ ಕೋಟಿ ಕೋಟಿ ಮೌಲ್ಯದ ಮಾದಕ ವಸ್ತು ಪತ್ತೆಯಾಗಿದೆ.

ಇದನ್ನೂ ಓದಿ: ಕೀವ್​​ ಗಡಿಯಲ್ಲಿ ಮಗಳ ಎದುರೇ ಮದುವೆಯಾದ ಉಕ್ರೇನಿಯನ್ ದಂಪತಿ; ಹಾಡಿ, ಸಂಭ್ರಮಿಸಿದ ಸೈನಿಕರ ವಿಡಿಯೋ ವೈರಲ್

Crime News: ಸಂಚಾರ ವಿಭಾಗ ಜಂಟಿ ಪೊಲೀಸ್ ಆಯಕ್ತರ ಕಚೇರಿಯಲ್ಲೇ ಕಳ್ಳತನ; ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ