AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹ, ಸಲುಗೆಯಿಂದ ಇರಲು ನಿರಾಕರಿಸಿದಕ್ಕೆ ಇಂದಿರಾನಗರದಲ್ಲಿ ಮಹಿಳೆಯನ್ನು ಕೊಲೆ ಮಾಡಿದ ಕ್ಯಾಬ್ ಡ್ರೈವರ್ ಅರೆಸ್ಟ್

ತನ್ನ ಜೊತೆಗೆ ಸ್ನೇಹ ಸಲುಗೆಯಿಂದ ಇರುವುದಕ್ಕೆ ಒಪ್ಪಿಲ್ಲಾ ಅನ್ನೊ ಕಾರಣಕ್ಕೆ ಕ್ಯಾಬ್ ಡ್ರೈವರ್ ಮಹಿಳೆಯನ್ನು ಕೊಲೆ ಮಾಡಿದ್ದು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಸ್ನೇಹ, ಸಲುಗೆಯಿಂದ ಇರಲು ನಿರಾಕರಿಸಿದಕ್ಕೆ ಇಂದಿರಾನಗರದಲ್ಲಿ ಮಹಿಳೆಯನ್ನು ಕೊಲೆ ಮಾಡಿದ ಕ್ಯಾಬ್ ಡ್ರೈವರ್ ಅರೆಸ್ಟ್
ದೀಪಾ
Follow us
ಆಯೇಷಾ ಬಾನು
|

Updated on:Mar 09, 2023 | 2:39 PM

ಬೆಂಗಳೂರು: ಇಂದಿರಾನಗರದಲ್ಲಿ(Indiranagar) ಮಹಿಳೆಯನ್ನು ಕೊಲೆ(Murder) ಮಾಡಿ ಆಕೆಯ ಶವವನ್ನು ನಗರದ ಹೊರ ವಲಯದಲ್ಲಿ ಎಸೆದು ತಲೆ ಮರೆಸಿಕೊಂಡಿದ್ದ ಕೊಲೆ ಆರೋಪಿಯನ್ನು ಬಾಗಲೂರು ಪೊಲೀಸರು(Bagalur Police) ಬಂಧಿಸಿದ್ದಾರೆ. ಭಿಮರಾವ್ ಬಂಧಿತ ಅರೋಪಿ. ದೀಪಾ ಕೊಲೆಯಾದ ಮಹಿಳೆ.

ಸ್ನೇಹ, ಸಲುಗೆಯಿಂದ ಇರಲು ನಿರಾಕರಿಸಿದ್ದಕ್ಕೆ ಕೊಲೆ

ಹೊಸಕೋಟೆಯ ಖಾಸಗಿ ಕಂಪನಿಯೊಂದರಲ್ಲಿ ದೀಪಾ ಕೆಲಸ ಮಾಡುತ್ತಿದ್ದರು. ಅದೇ ಕಂಪನಿಯಲ್ಲಿ ಆರೋಪಿ ಭಿಮರಾವ್ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಆರೋಪಿ ಭಿಮರಾವ್ ಪ್ರತಿ ದಿನ ದೀಪಾಳನ್ನು ಇಂದಿರಾನಗರದಿಂದ ಪಿಕಮ್-ಡ್ರಾಪ್ ಮಾಡುತ್ತಿದ್ದ. ದೀಪಾ ಕಂಡರೆ ಭಿಮರಾವ್​ಗೆ ಒಂದು ರೀತಿಯ ಹುಚ್ಚು ಮೋಹ. ಹೀಗಾಗಿ ಮಹಿಳೆ ಜೊತೆಗೆ ಸಂಪರ್ಕ ಸಾಧಿಸಲು ಯತ್ನಿಸುತ್ತಿದ್ದ. ತನ್ನ ಜೊತೆಗೆ ಗೆಳತಿಯಂತೆ ಇರು ಎಂದು ಪೀಡಿಸುತ್ತಿದ್ದ. ಆದರೆ ದೀಪಾಗೆ ಇದು ಇಷ್ಟವಾಗುತ್ತಿರಲಿಲ್ಲ. ಆಕೆ ಆತನ ಜೊತೆ ಎಷ್ಟು ಅಂದರ ಅಷ್ಟರಂತೆ ಇದ್ದರು.

ಇದನ್ನೂ ಓದಿ: ವಿಜಯಪುರ: ಇಟ್ಟಲ್ಲಿಯೇ ಸುಟ್ಟು ಹೋದ ಓರ್ವ ವಿದ್ಯಾರ್ಥಿನಿಯ ಮೂರು ಹಾಲ್​ಟಿಕೆಟ್​! ವಾಮಚಾರ ಶಂಕೆ

ಕೊಲೆ ಮಾಡಿ ಕಾರಿನಲ್ಲಿ ಮೃತ ದೇಹ ಸಾಗಿಸಿ ಎಸ್ಕೇಪ್

ಫೆಬ್ರವರಿ 27 ರಂದು ಇಂದಿರಾನಗರದಲ್ಲಿ ದೀಪಾರನ್ನು ಪಿಕ್ ಅಪ್ ಮಾಡುವಾಗ ಇಬ್ಬರ ನಡುವೆ ಗಲಾಟೆ ಆಗಿದೆ. ಈ ವೇಳೆ ಆರೋಪಿ ಕಬ್ಬಿಣದ ಜಾಕ್ ರಾಡ್ ನಿಂದ ಹಲ್ಲೆ ಮಾಡಿದ್ದಾನೆ. ಆಗ ಮಹಿಳೆ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ನಂತರ ಕಾರಿನಲ್ಲಿ ಮೃತ ದೇಹ ಸಾಗಿಸಿ ಬೆಂಗಳೂರು ಹೊರ ವಲಯದ ಬಾಗಲೂರು ಬಳಿಯ ನಿರ್ಜನ ಪ್ರದೇಶದಲ್ಲಿ ಮೃತ ದೇಹವನ್ನು ಬಿಸಾಕಿ ಎಸ್ಕೇಪ್ ಆಗಿದ್ದಾನೆ. ಮಾರ್ಚ್ ನಾಲ್ಕರಂದು ಮೃತ ದೇಹದ ಬಗ್ಗೆ ಬಾಗಲೂರು ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು ಮಾಹಿತಿ ಆಧರಿಸಿ ಮೃತ ದೇಹವನ್ನು ಅಸ್ಪತ್ರೆಗೆ ರವಾನಿಸಲಾಗಿತ್ತು. ಪೊಲೀಸರು ಇದು ಅನುಮಾನಾಸ್ಪದ ಸಾವು ಎಂದು ಕೇಸ್ ದಾಖಲಿಸಿದ್ದರು. ತನಿಖೆ ವೇಳೆ ಮೃತ ಮಹಿಳೆ ಇಂದಿರಾನಗರ ನಿವಾಸಿ ದೀಪಾ ಎಂಬುದು ಬೆಳಕಿಗೆ ಬಂದಿದೆ. ಮೃತಳ ಬಟ್ಟೆ ಮತ್ತು ವಾಚಿನ ಮೂಲಕ ಗುರುತು ಪತ್ತೆ ಮಾಡಲಾಗಿದೆ.

ಮತ್ತೊಂದೆಡೆ ಇತ್ತ ಮಹಿಳೆ ನಾಪತ್ತೆ ಬಗ್ಗೆ ಆಕೆಯ ಕುಟುಂಬಸ್ಥರು ಇಂದಿರಾನಗರದಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು. ಸದ್ಯ ಬಾಗಲೂರು ಪೊಲೀಸರು ಆರೋಪಿ ಭಿಮರಾಯ್ ಅರೆಸ್ಟ್ ಮಾಡಿದ್ದಾರೆ. ತನ್ನ ಜೊತೆಗೆ ಸ್ನೇಹ ಸಲುಗೆಯಿಂದ ಇರುವುದಕ್ಕೆ ಒಪ್ಪಿಲ್ಲಾ ಅನ್ನೊ ಕಾರಣಕ್ಕೆ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:35 pm, Thu, 9 March 23

ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು