AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸಿನಿಮಾ ಕಥೆಯಂತೆ ನಡೆದ ರಿಯಲ್ ಸ್ಟೋರಿ: ಚಾಕು ಹಿಡಿದು ಬೆದರಿಸಲು ಹೋದವ ಕೊಲೆಯಾದ

ಬಾಪೂಜಿ ಲೇಔಟ್​ನ 9ನೇ ಕ್ರಾಸ್​ನಲ್ಲಿ ಕಳ್ಳತನಕ್ಕೆ ಬಂದಿದ್ದಾರೆ ಎಂದು ಆರೋಪಿಸಿ ಇಬ್ಬರು ವ್ಯಕ್ತಿಗಳು ಹಾಗೂ ಮನೆ ಮಾಲೀಕನ ನಡುವೆ ಜಗಳ ನಡೆದಿತ್ತು. ಈ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ಮನೆ ಮಾಲೀಕನೇ ತನ್ನ ಮನೆಗೆ ಕನ್ನ ಹಾಕಲು ಬಂದಿದ್ದ ಖದೀಮನೊಬ್ಬನ ಕೊಲೆ ಮಾಡಿದ್ದಾನೆ. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಬೆಂಗಳೂರಿನಲ್ಲಿ ಸಿನಿಮಾ ಕಥೆಯಂತೆ ನಡೆದ ರಿಯಲ್ ಸ್ಟೋರಿ: ಚಾಕು ಹಿಡಿದು ಬೆದರಿಸಲು ಹೋದವ ಕೊಲೆಯಾದ
ಆರೋಪಿ ರಾಜೇಂದ್ರ ಪ್ರಸಾದ್
Jagadisha B
| Edited By: |

Updated on:Oct 05, 2023 | 9:00 AM

Share

ಬೆಂಗಳೂರು, ಅ.05: ಬೆಂಗಳೂರಿನಲ್ಲಿ ಸಿನಿಮಾ ಕಥೆಯಂತೆ ರಿಯಲ್ ಸ್ಟೋರಿಯೊಂದು ನಡೆದಿದೆ. ಚಾಕು ಹಿಡಿದು ಬೆದರಿಸಲು ಹೋದವರಲ್ಲೊಬ್ಬನ ಕೊಲೆ (Murder) ಮಾಡಲಾಗಿದ್ದು ಮತ್ತೊಬ್ಬ ಪರಾರಿಯಾಗಿದ್ದಾನೆ. ಬಾಪೂಜಿ ಲೇಔಟ್​ನ 9ನೇ ಕ್ರಾಸ್​ನಲ್ಲಿ ಕಳ್ಳತನಕ್ಕೆ (Theft) ಬಂದಿದ್ದಾರೆ ಎಂದು ಆರೋಪಿಸಿ ಇಬ್ಬರು ವ್ಯಕ್ತಿಗಳು ಹಾಗೂ ಮನೆ ಮಾಲೀಕನ ನಡುವೆ ಜಗಳ ನಡೆದಿತ್ತು. ಈ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ಮನೆ ಮಾಲೀಕನೇ ತನ್ನ ಮನೆಗೆ ಕನ್ನ ಹಾಕಲು ಬಂದಿದ್ದ ಖದೀಮನೊಬ್ಬನ ಕೊಲೆ ಮಾಡಿದ್ದಾನೆ. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಖಾದಿರ್ ಅಹಮದ್ (28) ಕೊಲೆಯಾದ ವ್ಯಕ್ತಿ. ರಾಜೇಂದ್ರ ಪ್ರಸಾದ್ ಬಂಧಿತ ಆರೋಪಿ.

ಕೊಲೆಯಾದ ಖಾದಿರ್ ಅಹಮದ್ ತನ್ನ ಗೆಳೆಯನ ಜೊತೆ ನಿರ್ಮಾಣ ಹಂತದ ಕಟ್ಟಡದ ಬಳಿ ಬಂದಿದ್ದ. ಈ ವೇಳೆ ಕಟ್ಟಡದಲ್ಲಿ ಕಳ್ಳತನಕ್ಕೆ ಯತ್ನ ನಡೆದಿದೆ ಎಂದು ಆರೋಪಿಸಿ ಖಾದಿರ್ ಹಾಗೂ ಆತನ ಗೆಳೆಯನ ಮುಂದೆ ಪ್ರತ್ಯಕ್ಷನಾಗಿದ್ದ ಮನೆ ಮಾಲೀಕ ರಾಜೇಂದ್ರ ಪ್ರಸಾದ್ ಜಗಳ ಶುರು ಮಾಡಿದ್ದರು. ಇನ್ನು ಇದೇ ವೇಳೆ ಸ್ಥಳದಲ್ಲಿದ್ದ ಕಟ್ಟಡದ ಕಾರ್ಮಿಕನೋರ್ವ, ಈ ಹಿಂದೆ ಸಹ ಇವರಿಬ್ಬರು ಕಳ್ಳತನ ಎಸಗಿದ್ದಾಗಿ ಹೇಳಿದ್ದ. ಇಷ್ಟೆಲ್ಲಾ ಆದ ಬಳಿಕ ಖಾದಿರ್ ಸ್ನೇಹಿತ ತನ್ನ ಬಳಿ ಇದ್ದ ಚಾಕುವನ್ನು ತೆಗೆದು ಮನೆ ಮಾಲೀಕ ರಾಜೇಂದ್ರ ಪ್ರಸಾದ್ ಮೇಲೆ ಹಲ್ಲೆಗೆ ಯತ್ನಿಸಿದ್ದ. ತಕ್ಷಣ ಎಚ್ಚೆತ್ತ ಪ್ರಸಾದ್, ಹಲ್ಲೆಯಿಂದ ತಪ್ಪಿಸಿಕೊಂಡು ಚಾಕುವನ್ನು ಕಿತ್ತುಕೊಂಡಿದ್ದ.

ಇದನ್ನೂ ಓದಿ: ಹಾಲಶ್ರೀ ಸ್ವಾಮೀಜಿಯ ಮತ್ತೊಂದು ಬಿಜೆಪಿ ಟಿಕೆಟ್‌ ಹಗರಣ ಬಯಲಿಗೆ: ಮಹತ್ವದ ಸಾಕ್ಷ್ಯ ಕಲೆಹಾಕಿದ ಪೊಲೀಸ್ರು

ಇದೇ ವೇಳೆ ಅಲ್ಲೇ ಇದ್ದ ಸನಿಕೆಯನ್ನು ಎತ್ತಿಕೊಂಡು ಖಾದಿರ್ ಕೂಡ ಹಲ್ಲೆಗೆ ಬಂದಿದ್ದ. ಆಗ ಕೈಯಲ್ಲಿದ್ದ ಚಾಕುವಿನಿಂದ ಖಾದಿರ್ ಎದೆಗೆ ಇರಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಖಾದಿರ್ ಸ್ನೇಹಿತ ಸ್ಥಳದಿಂದ ಪರಾರಿಯಾಗಿದ್ದು, ಮಾಡಿದ ತಪ್ಪಿಕೆ ಕಣ್ಣೀರು ಹಾಕುತ್ತ ರಾಜೇಂದ್ರ ಪ್ರಸಾದ್ ಅವರು ಖಾದಿರ್​ನನ್ನು ಸ್ಥಳೀಯ ಆಸ್ಪತ್ರೆಗೆ ತಾವೇ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸಿದೇ ಆಸ್ಪತ್ರೆಯಲ್ಲಿ ಖಾದಿರ್ ಮೃತಪಟ್ಟಿದ್ದಾನೆ. ಚಂದ್ರಲೇಔಟ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 304 ಅಡಿ ಪ್ರಕರಣ ದಾಖಲಾಗಿದ್ದು ಆರೋಪಿ ರಾಜೇಂದ್ರ ಪ್ರಸಾದ್ ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕನ್ನಿಗ್ಯಾಂ ರಸ್ತೆಯ ಬಸ್ ನಿಲ್ದಾಣದ ತಂಗುದಾಣ ಎಗರಿಸಿದ ಕಳ್ಳರು

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಕೊಂಚ ದೂರದಲ್ಲೇ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದಾರೆ. ಪ್ರಯಾಣಿಕರ ತಂಗುದಾಣವನ್ನೇ ಕಳ್ಳರು ಕದ್ದಿದ್ದಾರೆ. ಕನ್ನಿಗ್ಯಾಂ ರಸ್ತೆಯ ಬಸ್ ನಿಲ್ದಾಣದ ತಂಗುದಾಣ ಕಳ್ಳತನವಾಗಿದೆ. 10 ಲಕ್ಷ ವೆಚ್ಚದಲ್ಲಿ ತಂಗುದಾಣ ನಿರ್ಮಾಣ ಮಾಡಲಾಗಿತ್ತು. ಖಾಸಗಿ ಕಂಪನಿ ಸ್ಟೀಲ್ ಬಳಸಿ ತಂಗುದಾಣ ನಿರ್ಮಾಣ ಮಾಡಿತ್ತು. ಆಗಸ್ಟ್ ನಲ್ಲಿ ಭೇಟಿ ನೀಡಿದ ವೇಳೆ ತಂಗುದಾಣ ನಾಪತ್ತೆಯಾಗಿರುವುದು ಪತ್ತೆಯಾಗಿದೆ. ಈ ಬಗ್ಗೆ ಬಿಬಿಎಂಪಿ ಬಳಿ ಕಂಪನಿ ವಿಚಾರಿಸಿದೆ. ಬಿಬಿಎಂಪಿ ವಿಚಾರಿಸಿದಾಗ ತಂಗುದಾಣ ತೆರುವು ಮಾಡಿಲ್ಲ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಬಿಬಿಎಂಪಿ ಮಾಹಿತಿ ಹಿನ್ನಲೆ ಕಂಪನಿ ಸೆಪ್ಟೆಂಬರ್ 30ರಂದು ದೂರು ದಾಖಲಿಸಿದೆ. ಘಟನೆ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಹೈಗ್ರೌಂಡ್ ಪೊಲೀಸರು ಬಲೆ ಬೀಸಿದ್ದು ಘಟನಾ ಸ್ಥಳದ ಸಿಸಿಟಿವಿ ಆಧರಿಸಿ ಶೋಧ ಆರಂಭವಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:53 am, Thu, 5 October 23

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?