AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime: ಕಾನೂನುಬಾಹಿರ ಚಟುವಟಿಕೆ; ಒಂದೇ ತಿಂಗಳಲ್ಲಿ ಬೆಂಗಳೂರಿನಲ್ಲಿ 563 ಮಂದಿ ಬಂಧನ

ಬೆಂಗಳೂರು ನಗರದಲ್ಲಿ ಅಪರಾಧ ಕೃತ್ಯಗಳು ದಿನೇದಿನೆ ಹೆಚ್ಚಾಗುತ್ತಿದ್ದು, ಮಾದಕ ದ್ರವ್ಯ, ಜೂಜು, ಬೆಟ್ಟಿಂಗ್ ಸೇರಿದಂತೆ ವಿವಿಧ ಕಾನೂನುಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿ 563 ಜನರನ್ನು ಏಪ್ರಿಲ್‌ನಲ್ಲಿ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಯಾವೆಲ್ಲ ಪ್ರಕರಣಗಳಲ್ಲಿ ಎಷ್ಟು ಮಂದಿ ಅರೆಸ್ಟ್ ಆಗಿದ್ದಾರೆ ಎಂಬ ವಿವರ ಇಲ್ಲಿದೆ.

Bengaluru Crime: ಕಾನೂನುಬಾಹಿರ ಚಟುವಟಿಕೆ; ಒಂದೇ ತಿಂಗಳಲ್ಲಿ ಬೆಂಗಳೂರಿನಲ್ಲಿ 563 ಮಂದಿ ಬಂಧನ
ಕಾನೂನುಬಾಹಿರ ಚಟುವಟಿಕೆ; ಒಂದೇ ತಿಂಗಳಲ್ಲಿ ಬೆಂಗಳೂರಿನಲ್ಲಿ 563 ಮಂದಿ ಬಂಧನ
ಗಣಪತಿ ಶರ್ಮಾ
|

Updated on: May 08, 2024 | 7:54 AM

Share

ಬೆಂಗಳೂರು, ಮೇ 8: ಏಪ್ರಿಲ್‌ನಲ್ಲಿ ಬೆಂಗಳೂರು ಪೊಲೀಸರು (Bengaluru Police) ಮಾದಕ ದ್ರವ್ಯ, ಜೂಜು, ಬೆಟ್ಟಿಂಗ್ ಸೇರಿದಂತೆ ವಿವಿಧ ಕಾನೂನುಬಾಹಿರ ಚಟುವಟಿಕೆಗಳಿಗೆ (Illegal Activities) ಸಂಬಂಧಿಸಿದಂತೆ 563 ಜನರನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ತಿಂಗಳಿನಲ್ಲಿ ಒಟ್ಟು 182 ಪ್ರಕರಣಗಳು ದಾಖಲಾಗಿದ್ದು, ಅತಿ ಹೆಚ್ಚು (48) ಜೂಜಾಟಕ್ಕೆ ಸಂಬಂಧಿಸಿದ್ದಾಗಿವೆ. ನಂತರದ ಸ್ಥಾನದಲ್ಲಿ ಮಾದಕ ದ್ರವ್ಯಗಳ (NDPS) ನಿಷೇಧ ಕಾಯ್ದೆಯಡಿ ದಾಖಲಿಸಿದ ಪ್ರಕರಣಗಳು (41), ಮತ್ತು ಕ್ರಿಕೆಟ್ ಬೆಟ್ಟಿಂಗ್ (25) ಪ್ರಕರಣಗಳು ಸೇರಿವೆ.

ಎನ್‌ಡಿಪಿಎಸ್ ಪ್ರಕರಣಗಳಲ್ಲಿ ಎಂಟು ವಿದೇಶಿ ಪ್ರಜೆಗಳು ಸೇರಿದಂತೆ 51 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖಾಧಿಕಾರಿಗಳು 131.325 ಕೆಜಿ ಗಾಂಜಾ, 1.245 ಕೆಜಿ ಕೊಕೇನ್, 6.275 ಕೆಜಿ ಎಂಡಿಎಂಎ, 0.066 ಗ್ರಾಂ ಚರಸ್ ಮತ್ತು 109 ಎಕ್ಸ್‌ಟಸಿ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ.

ವಿದ್ಯಾರ್ಥಿಯ ಚಿನ್ನದ ಸರ ಕದ್ದಿದ್ದ ಆಟೋ ಚಾಲಕ ಅರೆಸ್ಟ್

20 ವರ್ಷದ ಕಾಲೇಜು ವಿದ್ಯಾರ್ಥಿಯೊಬ್ಬರಿಂದ ಚಿನ್ನದ ಸರ ಮತ್ತು ಉಂಗುರ ಕಳವು ಮಾಡಿದ ಆಟೋರಿಕ್ಷಾ ಚಾಲಕನನ್ನು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಪತ್ತೆಹಚ್ಚಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಈಶಾನ್ಯ ಬೆಂಗಳೂರಿನ ಎಂಎಸ್ ಪಾಳ್ಯದಲ್ಲಿ ವಾಸವಾಗಿರುವ ಆಟೋ ಚಾಲಕ ಸಾದಿಕ್ ಅಲಿಯಾಸ್ ಅನಿಲ್ ಎಂಬಾತನನ್ನು ಎಚ್‌ಎಎಲ್ ಪೊಲೀಸರು ಬಂಧಿಸಿದ್ದಾರೆ. ಸಾದಿಕ್ ವಿದ್ಯಾರ್ಥಿಯ ಬ್ಯಾಗನ್ನು ಕದ್ದು ಬಳಿಕ ಆಕೆಯನ್ನು ಬಸ್ ನಿಲ್ದಾಣಕ್ಕೆ ಬಿಟ್ಟು ಹೋಗಿದ್ದ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಡಬಲ್ ಮರ್ಡರ್; ಗಂಡ, ಮಕ್ಕಳನ್ನು ಬಿಟ್ಟು ತನ್ನ ಜೊತೆಗಿದ್ದ ಪ್ರಿಯತಮೆಯನ್ನೇ ಕೊಂದ ಪ್ರಿಯಕರ

ವಿದ್ಯಾರ್ಥಿ ಮನೆಯಿಂದ ಓಡಿಹೋಗಿದ್ದ. ಈ ಬಗ್ಗೆ ವಿದ್ಯಾರ್ಥಿಯ ತಾಯಿ ಎಚ್‌ಎಎಲ್ ಠಾಣೆಯಲ್ಲಿ ಎಪ್ರಿಲ್ 4 ರಂದು, ನಾಪತ್ತೆ ದೂರು ದಾಖಲಿಸಿದ್ದರು. ಮಗ ತನ್ನ ಸ್ನೇಹಿತರೊಂದಿಗೆ ಹೆಚ್ಚು ಸಮಯ ಕಳೆದಿದ್ದಕ್ಕಾಗಿ ಬೈದಿದ್ದಕ್ಕೆ ಮನೆಯಿಂದ ಓಡಿಹೋಗಿದ್ದಾನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದರು. ಪೊಲೀಸರು ನಂತರ ತನಿಖೆ ನಡೆಸಿ ವಿದ್ಯಾರ್ಥಿಯನ್ನು ಒಡಿಶಾದ ಪುರಿ ಜಗನ್ನಾಥ ದೇವಾಲಯದಲ್ಲಿ ಪತ್ತೆಹಚ್ಚಿದ್ದರು. ಮಹಿಳೆ ನೀಡಿದ ಮತ್ತೊಂದು ದೂರಿನಲ್ಲಿ, ಆಟೋ ಚಾಲಕ ಬಾಲಕನ ಬಳಿ ಇದ್ದ ಬ್ಯಾಗ್ ಅಪಹರಿಸಿದ್ದಾನೆ ಎಂದು ಉಲ್ಲೇಖಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು