AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸಾಜ್ ಪಾರ್ಲರ್ನಲ್ಲಿ ಎಂಜಾಯ್ ಮಾಡಲು ಐಷಾರಾಮಿ ಜೀವನ ನಡೆಸಲು ಕಳ್ಳತನ ಮಾಡುತ್ತಿದ್ದ ಖದೀಮರು ಅರೆಸ್ಟ್

ಐಷಾರಾಮಿ ಜೀವನ ಮಾಡಲು ಕಳ್ಳತನ ಮಾಡುತ್ತಿದ್ದ ಇಬ್ಬರು ಮನೆಗಳ್ಳರನ್ನ ವಿಜಯನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಇವರು ಕಳ್ಳತನ ಮಾಡಿ ಮಸಾಜ್ ಪಾರ್ಲರ್ನಲ್ಲಿ ಎಂಜಾಯ್ ಮಾಡ್ತಿದ್ದರು. ಮಸಾಜ್ ಪಾರ್ಲನಲ್ಲಿ ₹10-15 ಸಾವಿರ ಟಿಪ್ಸ್ ಕೊಡ್ತಿದ್ದರು.

ಮಸಾಜ್ ಪಾರ್ಲರ್ನಲ್ಲಿ ಎಂಜಾಯ್ ಮಾಡಲು ಐಷಾರಾಮಿ ಜೀವನ ನಡೆಸಲು ಕಳ್ಳತನ ಮಾಡುತ್ತಿದ್ದ ಖದೀಮರು ಅರೆಸ್ಟ್
ಜಾನ್ ಮೆಲ್ವಿನ್, ಮಂಜುನಾಥ್
TV9 Web
| Edited By: |

Updated on: Feb 10, 2022 | 9:12 AM

Share

ಬೆಂಗಳೂರು: ಕೈಯಲ್ಲಿ ಮೊಬೈಲ್ ಹಿಡಿದು ನಡೆದು ಹೋಗೋರನ್ನು ಟಾರ್ಗೆಟ್ ಮಾಡಿ ಕ್ಷಣ ಮಾತ್ರದಲ್ಲಿ ಕೈಯಿಂದ ಮೊಬೈಲ್ ಕಿತ್ತು ಎಸ್ಕೇಪ್ ಆಗ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ಕದ್ದು ಕಣ್ಣಾಮುಚ್ಚಾಲೆ ಆಟ ಆಡ್ತಿದ್ದ ಅಸಾಮಿಗಳು ಖಾಕಿ ಬಲೆಗೆ ಬಿದ್ದಿದ್ದಾರೆ. ಮೊಬೈಲ್ ಕಳ್ಳತನ ಮಾಡುತ್ತಿದ್ದ ಮೂವರನ್ನ ಜೆಜೆ ನಗರ ಪೊಲೀಸರು ಬಂಧಿಸಿದ್ದಾರೆ. ಮುಜಾಹಿದ್, ಮುಬಾರಕ್ ಪಾಷಾ, ಖಾಸಿಫ್ ಖಾನ್ ಬಂಧಿತ ಆರೋಪಿಗಳು. ಬಂಧಿತರಿಂದ 13 ಲಕ್ಷ 60 ಸಾವಿರ ಮೌಲ್ಯದ ವಿವಿಧ ಕಂಪನಿಯ 80 ಮೊಬೈಲ್ ಫೋನ್, ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ.

ಮಸಾಜ್ ಪಾರ್ಲರ್ನಲ್ಲಿ ₹10-15 ಸಾವಿರ ಟಿಪ್ಸ್ ಕೊಡ್ತಿದ್ದರು ಈ ಖದೀಮರು ಇನ್ನು ಬೆಂಗಳೂರಿನಲ್ಲಿ ಮತ್ತೊಂದು ಕಡೆ ಐಷಾರಾಮಿ ಜೀವನ ಮಾಡಲು ಕಳ್ಳತನ ಮಾಡುತ್ತಿದ್ದ ಇಬ್ಬರು ಮನೆಗಳ್ಳರನ್ನ ವಿಜಯನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಜಾನ್ ಮೆಲ್ವಿನ್, ಮಂಜುನಾಥ್ ಬಂಧಿತ ಆರೋಪಿಗಳು. ಇವರು ಕಳ್ಳತನ ಮಾಡಿ ಮಸಾಜ್ ಪಾರ್ಲರ್ನಲ್ಲಿ ಎಂಜಾಯ್ ಮಾಡ್ತಿದ್ದರು. ಮಸಾಜ್ ಪಾರ್ಲನಲ್ಲಿ ₹10-15 ಸಾವಿರ ಟಿಪ್ಸ್ ಕೊಡ್ತಿದ್ದರು. ಹೆಣ್ಣು ಮಕ್ಕಳ ಶೋಕಿಗೆ ಬಿದ್ದು ಮನೆಗಳ್ಳತನ ಮಾಡುತ್ತಿದ್ದರು.

ಆರೋಪಿಗಳು ಮಸಾಜ್ ಪಾರ್ಲರ್ನಲ್ಲಿ ಎಂಜಾಯ್ ಮಾಡಬೇಕು, ಐಷಾರಾಮಿ ಜೀವನ ನಡೆಸಬೇಕೆಂದೆ ಮನೆಗಳ್ಳತನ ಮಾಡುತ್ತಿದ್ದರು. ಸದ್ಯ ಆರೋಪಿಗಳು ಅರೆಸ್ಟ್ ಆಗಿದ್ದು ಬಂಧಿತರಿಂದ 16 ಲಕ್ಷ ಮೌಲ್ಯದ ಚಿನ್ನಾಭರಣ, ಒಂದು ಜೊತೆ ಬೆಳ್ಳಿಯ ಕಾಲು ಚೈನು, ಎರಡು ಬೈಕ್ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನಲ್ಲಿ ಬೈಕ್ ಕಳ್ಳನನ್ನ ಬಂಧಿಸಿದ ಪೊಲೀಸರು ಬೈಕ್ಗಳನ್ನು ಕದಿಯುತ್ತಿದ್ದ ಆಲಂದಾರ್ ಎಂಬ ಬೈಕ್ ಕಳ್ಳನನ್ನ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 5 ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ‘ವಿಜಯ್​ ದೇವರಕೊಂಡ ನೋಡಿ ಭಯ ಆಗಿತ್ತು’; ಮತ್ತೆ ಮುನ್ನೆಲೆಗೆ ಬಂತು ರಶ್ಮಿಕಾ ಹೇಳಿದ್ದ ಆ ಮಾತು

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ