AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸಾಜ್ ಪಾರ್ಲರ್ನಲ್ಲಿ ಎಂಜಾಯ್ ಮಾಡಲು ಐಷಾರಾಮಿ ಜೀವನ ನಡೆಸಲು ಕಳ್ಳತನ ಮಾಡುತ್ತಿದ್ದ ಖದೀಮರು ಅರೆಸ್ಟ್

ಐಷಾರಾಮಿ ಜೀವನ ಮಾಡಲು ಕಳ್ಳತನ ಮಾಡುತ್ತಿದ್ದ ಇಬ್ಬರು ಮನೆಗಳ್ಳರನ್ನ ವಿಜಯನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಇವರು ಕಳ್ಳತನ ಮಾಡಿ ಮಸಾಜ್ ಪಾರ್ಲರ್ನಲ್ಲಿ ಎಂಜಾಯ್ ಮಾಡ್ತಿದ್ದರು. ಮಸಾಜ್ ಪಾರ್ಲನಲ್ಲಿ ₹10-15 ಸಾವಿರ ಟಿಪ್ಸ್ ಕೊಡ್ತಿದ್ದರು.

ಮಸಾಜ್ ಪಾರ್ಲರ್ನಲ್ಲಿ ಎಂಜಾಯ್ ಮಾಡಲು ಐಷಾರಾಮಿ ಜೀವನ ನಡೆಸಲು ಕಳ್ಳತನ ಮಾಡುತ್ತಿದ್ದ ಖದೀಮರು ಅರೆಸ್ಟ್
ಜಾನ್ ಮೆಲ್ವಿನ್, ಮಂಜುನಾಥ್
TV9 Web
| Edited By: ಆಯೇಷಾ ಬಾನು|

Updated on: Feb 10, 2022 | 9:12 AM

Share

ಬೆಂಗಳೂರು: ಕೈಯಲ್ಲಿ ಮೊಬೈಲ್ ಹಿಡಿದು ನಡೆದು ಹೋಗೋರನ್ನು ಟಾರ್ಗೆಟ್ ಮಾಡಿ ಕ್ಷಣ ಮಾತ್ರದಲ್ಲಿ ಕೈಯಿಂದ ಮೊಬೈಲ್ ಕಿತ್ತು ಎಸ್ಕೇಪ್ ಆಗ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ಕದ್ದು ಕಣ್ಣಾಮುಚ್ಚಾಲೆ ಆಟ ಆಡ್ತಿದ್ದ ಅಸಾಮಿಗಳು ಖಾಕಿ ಬಲೆಗೆ ಬಿದ್ದಿದ್ದಾರೆ. ಮೊಬೈಲ್ ಕಳ್ಳತನ ಮಾಡುತ್ತಿದ್ದ ಮೂವರನ್ನ ಜೆಜೆ ನಗರ ಪೊಲೀಸರು ಬಂಧಿಸಿದ್ದಾರೆ. ಮುಜಾಹಿದ್, ಮುಬಾರಕ್ ಪಾಷಾ, ಖಾಸಿಫ್ ಖಾನ್ ಬಂಧಿತ ಆರೋಪಿಗಳು. ಬಂಧಿತರಿಂದ 13 ಲಕ್ಷ 60 ಸಾವಿರ ಮೌಲ್ಯದ ವಿವಿಧ ಕಂಪನಿಯ 80 ಮೊಬೈಲ್ ಫೋನ್, ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ.

ಮಸಾಜ್ ಪಾರ್ಲರ್ನಲ್ಲಿ ₹10-15 ಸಾವಿರ ಟಿಪ್ಸ್ ಕೊಡ್ತಿದ್ದರು ಈ ಖದೀಮರು ಇನ್ನು ಬೆಂಗಳೂರಿನಲ್ಲಿ ಮತ್ತೊಂದು ಕಡೆ ಐಷಾರಾಮಿ ಜೀವನ ಮಾಡಲು ಕಳ್ಳತನ ಮಾಡುತ್ತಿದ್ದ ಇಬ್ಬರು ಮನೆಗಳ್ಳರನ್ನ ವಿಜಯನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಜಾನ್ ಮೆಲ್ವಿನ್, ಮಂಜುನಾಥ್ ಬಂಧಿತ ಆರೋಪಿಗಳು. ಇವರು ಕಳ್ಳತನ ಮಾಡಿ ಮಸಾಜ್ ಪಾರ್ಲರ್ನಲ್ಲಿ ಎಂಜಾಯ್ ಮಾಡ್ತಿದ್ದರು. ಮಸಾಜ್ ಪಾರ್ಲನಲ್ಲಿ ₹10-15 ಸಾವಿರ ಟಿಪ್ಸ್ ಕೊಡ್ತಿದ್ದರು. ಹೆಣ್ಣು ಮಕ್ಕಳ ಶೋಕಿಗೆ ಬಿದ್ದು ಮನೆಗಳ್ಳತನ ಮಾಡುತ್ತಿದ್ದರು.

ಆರೋಪಿಗಳು ಮಸಾಜ್ ಪಾರ್ಲರ್ನಲ್ಲಿ ಎಂಜಾಯ್ ಮಾಡಬೇಕು, ಐಷಾರಾಮಿ ಜೀವನ ನಡೆಸಬೇಕೆಂದೆ ಮನೆಗಳ್ಳತನ ಮಾಡುತ್ತಿದ್ದರು. ಸದ್ಯ ಆರೋಪಿಗಳು ಅರೆಸ್ಟ್ ಆಗಿದ್ದು ಬಂಧಿತರಿಂದ 16 ಲಕ್ಷ ಮೌಲ್ಯದ ಚಿನ್ನಾಭರಣ, ಒಂದು ಜೊತೆ ಬೆಳ್ಳಿಯ ಕಾಲು ಚೈನು, ಎರಡು ಬೈಕ್ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನಲ್ಲಿ ಬೈಕ್ ಕಳ್ಳನನ್ನ ಬಂಧಿಸಿದ ಪೊಲೀಸರು ಬೈಕ್ಗಳನ್ನು ಕದಿಯುತ್ತಿದ್ದ ಆಲಂದಾರ್ ಎಂಬ ಬೈಕ್ ಕಳ್ಳನನ್ನ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 5 ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ‘ವಿಜಯ್​ ದೇವರಕೊಂಡ ನೋಡಿ ಭಯ ಆಗಿತ್ತು’; ಮತ್ತೆ ಮುನ್ನೆಲೆಗೆ ಬಂತು ರಶ್ಮಿಕಾ ಹೇಳಿದ್ದ ಆ ಮಾತು

Follow Us
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ