AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ದಾರಿಯಲ್ಲಿ ನಡೆದು ಹೋಗುತ್ತಿದ್ದ ಯುವತಿ ಕೈಹಿಡಿದು ಎಳೆದಾಡಿ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕರು, ಬೈಕ್ ಸವಾರನಿಂದ ಉಳೀತು ಮಾನ

ಕುಮಾರಸ್ವಾಮಿ ಲೇಔಟ್​ನ 4 ನೇ ಅಡ್ಡರಸ್ತೆಯಲ್ಲಿ ತನ್ನ ಪಾಡಿಗೆ ತಾನು ನಡೆದುಕೊಂಡ ಹೋಗ್ತಿದ್ದ ಯುವತಿಯ ಮೇಲೆ ಕಾಮುಕರು ಎರಗಿದ್ದಾರೆ. ನಡುರಸ್ತೆಯಲ್ಲೇ ಎಳೆದಾಡಿದ್ದಾರೆ. ಕೈ ಕಚ್ಚಿ ವಿಕೃತಿ ಮೆರೆದಿದ್ದಾರೆ.

ಬೆಂಗಳೂರು: ದಾರಿಯಲ್ಲಿ ನಡೆದು ಹೋಗುತ್ತಿದ್ದ ಯುವತಿ ಕೈಹಿಡಿದು ಎಳೆದಾಡಿ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕರು, ಬೈಕ್ ಸವಾರನಿಂದ ಉಳೀತು ಮಾನ
ಅತ್ಯಾಚಾರಕ್ಕೆ ಯತ್ನ ನಡೆದ ಸ್ಥಳ
TV9 Web
| Edited By: |

Updated on:Feb 08, 2023 | 6:56 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮಹಿಳೆಯರಿಗೆ ಸೇಫ್ ಅಲ್ಲ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. ಫೆ. 07ರ ಮಟ ಮಟ ಮಧ್ಯಾಹ್ನವೇ ಲೈಂಗಿಕ ದೌರ್ಜನ್ಯದ(Sexual Harassment) ಆರೋಪ ಕೇಳಿ ಬಂದಿದ್ದು, ಕಾಮುಕರ ಕೃತ್ಯಕ್ಕೆ ಯುವತಿ ನಡುಗಿಹೋಗಿದ್ದಾಳೆ. ಆರೋಪಿಗಳು ಯುವತಿಯ ಕೈಹಿಡಿದು ಎಳೆದಾಡಿ ಕುತ್ತಿಗೆ ಬಿಗಿದು ಅಟ್ಟಹಾಸ ಮೆರೆದಿದ್ದಾರಂತೆ.

ಮಟ ಮಟ ಮಧ್ಯಾಹ್ನವೇ ಯುವತಿ ಮೇಲೆ ಲೌಂಗಿಕ ದೌರ್ಜನ್ಯ ಆರೋಪ

ಫೆಬ್ರವರಿ 07 ರ ಮಧ್ಯಾಹ್ನ ಸರಿ ಸುಮಾರು ಒಂದು ಗಂಟೆಯ ಸಮಯ. ಕುಮಾರಸ್ವಾಮಿ ಲೇಔಟ್​ನ 4 ನೇ ಅಡ್ಡರಸ್ತೆಯಲ್ಲಿ ತನ್ನ ಪಾಡಿಗೆ ತಾನು ನಡೆದುಕೊಂಡ ಹೋಗ್ತಿದ್ದ ಯುವತಿಯ ಮೇಲೆ ಕಾಮುಕರು ಎರಗಿದ್ದಾರೆ. ನಡುರಸ್ತೆಯಲ್ಲೇ ಎಳೆದಾಡಿದ್ದಾರೆ. ಕೈ ಕಚ್ಚಿ ವಿಕೃತಿ ಮೆರೆದಿದ್ದಾರೆ. ನಿರ್ಮಾಣ ಹಂತದ ಕಟ್ಟಡಕ್ಕೆ ಎಳೆದೊಯ್ದು ಅತ್ಯಾಚಾರಕ್ಕೆ ಯತ್ನ ಮಾಡಲು ಮುಂದಾಗಿದ್ರಂತೆ. ಆದ್ರೆ ಬೈಕ್ ಸವಾರ ಓರ್ವ ಬಂದಿದ್ದರಿಂದ ಬಚಾವಾದೇ ಅಂತಾ ಯುವತಿ ನೋವು ತೋಡಿಕೊಂಡಿದ್ದಾಳೆ.

ಇದನ್ನೂ ಓದಿ: ವಿವೇಕನಗರ: ಪಾರ್ಟಿ ನೆಪದಲ್ಲಿ ಕಾಶ್ಮೀರದ ಇಬ್ಬರು ಯುವತಿಯರ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ ಯತ್ನ, ಇಬ್ಬರು ಅರೆಸ್ಟ್

ಬೆಂಗಳೂರಲ್ಲಿ ಇಂತಹ ಲೈಂಗಿಕ ದೌರ್ಜನ್ಯ ಕೃತ್ಯಗಳು ಹೆಚ್ಚಾಗಿದ್ದು, ಕಾನೂನು ಸುವ್ಯವಸ್ಥೆಯನ್ನೇ ಪ್ರಶ್ನೆ ಮಾಡುವಂತಾಗಿದೆ. ಕೆ.ಎಸ್ ಲೇಔಟ್ ಸುತ್ತಾಮುತ್ತಾ ಪೊಲೀಸರ ಗಸ್ತು ಕಡಿಮೆಯಾಗಿರೋದೇ ಘಟನೆಗೆ ಕಾರಣ ಅಂತಾ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ದೂರು ದಾಖಲಿಸಲು ಯುವತಿ ಹೆದರ್ತಿದ್ದು, ಪೊಲೀಸರು ಗಸ್ತು ತಿರುಗಿ ಇಂತಹ ಕೃತ್ಯಕ್ಕೆ ಬ್ರೇಕ್ ಹಾಕಿದ್ರೆ ಸಾಕು ಅಂತಾ ಮನವಿ ಮಾಡಿಕೊಂಡಿದ್ದಾರೆ.

ವರದಿ: ರಾಚಪ್ಲಾಜಿ ನಾಯಕ್, ಟಿವಿ9 ಬೆಂಗಳೂರು

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:56 am, Wed, 8 February 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್