AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯ ಮಹಿಳೆಯರ ಶೌಚಾಲಯದಲ್ಲಿ ಕ್ಯಾಮರಾ ಇಟ್ಟಿದ್ದ ವಾರ್ಡ್​ ಬಾಯ್ ಅರೆಸ್ಟ್​

ಆಸ್ಪತ್ರೆಯ ಮಹಿಳೆಯರ ಶೌಚಾಲಯದಲ್ಲಿ ಕ್ಯಾಮರಾ ಇಟ್ಟಿದ್ದ ವಾರ್ಡ್​ಬಾಯ್​ನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಕ್ಟೋಬರ್ 31ರಂದು ಯಲ್ಲಾಲಿಂಗ ಎಂಬಾತನನ್ನು ಬಂಧಿಸಲಾಗಿದ್ದು, ಆತ ಕಲಬುರಗಿ ಮೂಲದವನು ಎನ್ನುವ ಮಾಹಿತಿ ಲಭ್ಯವಾಗಿದೆ. ತಿಲಕನಗರದ ಆಸ್ಪತ್ರೆಯಲ್ಲಿ ವಾರ್ಡ್ ಸಹಾಯಕನಾಗಿ ಕೆಲಸ ಮಾಡುತ್ತಿದ್ದ.

ಆಸ್ಪತ್ರೆಯ ಮಹಿಳೆಯರ ಶೌಚಾಲಯದಲ್ಲಿ ಕ್ಯಾಮರಾ ಇಟ್ಟಿದ್ದ ವಾರ್ಡ್​ ಬಾಯ್ ಅರೆಸ್ಟ್​
ವಾಶ್​ರೂಂ-ಸಾಮದರ್ಭಿಕ ಚಿತ್ರImage Credit source: Stanza Living
ನಯನಾ ರಾಜೀವ್
|

Updated on: Nov 07, 2024 | 8:26 AM

Share

ಆಸ್ಪತ್ರೆಯ ಮಹಿಳೆಯರ ಶೌಚಾಲಯದಲ್ಲಿ ಕ್ಯಾಮರಾ ಇಟ್ಟಿದ್ದ ವಾರ್ಡ್​ಬಾಯ್​ನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಕ್ಟೋಬರ್ 31ರಂದು ಯಲ್ಲಾಲಿಂಗ ಎಂಬಾತನನ್ನು ಬಂಧಿಸಲಾಗಿದ್ದು, ಆತ ಕಲಬುರಗಿ ಮೂಲದವನು ಎನ್ನುವ ಮಾಹಿತಿ ಲಭ್ಯವಾಗಿದೆ. ತಿಲಕನಗರದ ಆಸ್ಪತ್ರೆಯಲ್ಲಿ ವಾರ್ಡ್ ಸಹಾಯಕನಾಗಿ ಕೆಲಸ ಮಾಡುತ್ತಿದ್ದ.

ಪೊಲೀಸ್ ಅಧಿಕಾರಿ ನೀಡಿರುವ ಮಾಹಿತಿ ಪ್ರಕಾರ, ಅಕ್ಟೋಬರ್ 31 ರಂದು ಬೆಳಗ್ಗೆ 8.20ರ ಸುಮಾರಿಗೆ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ವಾಶ್​ರೂಂನ ಕಿಟಕಿಯ ಮೇಲೆ ಮೊಬೈಲ್​ ಇರುವುದನ್ನು ಕಂಡರು. ಅದನ್ನು ಅನ್​ಲಾಕ್ ಮಾಡಿದ ಬಳಿಕ ಹಲವು ರೆಕಾರ್ಡಿಂಗ್ಸ್​ಗಳನ್ನು ನೋಡಿ ಗಾಬರಿಗೊಂಡಿದ್ದರು.

ಅವಳು ಹೊರಗೆ ಬಂದಾಗ ಯಲ್ಲಾಲಿಂಗ ಆ ಫೋನ್​ ನನ್ನದು ನನಗೆ ವಾಪಸ್ ಕೊಡು ಎಂದು ಕೇಳಿದ್ದಾನೆ, ಆದರೆ ಸಿಬ್ಬಂದಿ ನಿರಾಕರಿಸಿದಾಗ ಆಕೆಯ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಕೂಡಲೇ ಆಸ್ಪತ್ರೆಯ ಸಿಬ್ಬಂದಿ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮತ್ತಷ್ಟು ಓದಿ: ಬದುಕನ್ನೇ ನರಕವಾಗಿಸಿದ ಪ್ರವಾಸ; ಮುಂಬೈ ಬಾಲಕಿ ಮೇಲೆ ಪುದುಚೆರಿಯಲ್ಲಿ ಸಾಮೂಹಿಕ ಅತ್ಯಾಚಾರ

ತಿಲಕನಗರ ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಕಾಯ್ದೆಯ ಸೆಕ್ಷನ್ 77 (ವೋಯರಿಸಂ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಈ ಕುರಿತು ಕೇಳಿದಾಗ ತಪ್ಪಾಗಿ ತನ್ನ ಮೊಬೈಲ್​ನ್ನು ವಾಶ್​ರೂಂನಲ್ಲಿ ಇರಿಸಿರುವುದಾಗಿ ತಿಳಿಸಿದ್ದಾನೆ.

ಆದರೆ ಅಲ್ಲಿರುವ ರೆಕಾರ್ಡಿಂಗ್​ಗಳು ವಿಭಿನ್ನ ಕಥೆಯನ್ನೇ ಹೇಳುತ್ತಿವೆ. ಯಲ್ಲಾಲಿಂಗ ಅವರಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಏತನ್ಮಧ್ಯೆ, ಆಸ್ಪತ್ರೆಯು ತನ್ನ ಲೈಂಗಿಕ ಕಿರುಕುಳ ತಡೆ (POSH) ಸಮಿತಿಯ ತನಿಖೆಯ ಬಾಕಿ ಇರುವವರೆಗೆ ಅವರನ್ನು ಅಮಾನತುಗೊಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್