AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್: ಪೊಲೀಸರ ಮೊರೆ ಹೋದ ಮಹಿಳೆ

ಬೆಂಗಳೂರಿನ ಬನಶಂಕರಿಯಲ್ಲಿ ಮಹಿಳೆಯೊಬ್ಬರು ತನ್ನ ಪತಿಯ ವಿರುದ್ಧವೇ, ಆತ ತನ್ನನ್ನು ರಾಜಕಾರಣಿಗಳ ಜೊತೆ ಮಲಗುವಂತೆ ಒತ್ತಾಯಿಸಿದ್ದಾನೆ ಮತ್ತು ಹಿಂಸೆ ನೀಡಿದ್ದಾನೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ಬಲವಂತದಿಂದ ಗರ್ಭಪಾತ ಮಾಡಿಸಿದ್ದು, ಕೊಲೆ ಬೆದರಿಕೆ ಹಾಗೂ ವರದಕ್ಷಿಣೆ ಕಿರುಕುಳದ ಆರೋಪಗಳನ್ನೂ ಮಾಡಿದ್ದು, ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್: ಪೊಲೀಸರ ಮೊರೆ ಹೋದ ಮಹಿಳೆ
ಸಂತ್ರಸ್ತೆ ಹಾಗೂ ಆರೋಪಿ ಯೂನಸ್ ಪಾಷಾ
ಗಣಪತಿ ಶರ್ಮಾ
|

Updated on:Jul 01, 2025 | 12:14 PM

Share

ಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! ಇಂಥದ್ದೊಂದು ವಿಲಕ್ಷಣ ಘಟನೆ ಬೆಂಗಳೂರಿನ (Bengaluru) ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಜಕಾರಣಿಗಳ ಜತೆ ಹಾಗೂ ಸಹಚಚರ ಒಟ್ಟಿಗೆ ಮಲಗುವಂತೆ ಒತ್ತಾಯಿಸುತ್ತಿದ್ದುದಲ್ಲದೆ, 6 ಬಾರಿ ತಲಾಖ್ (Talaq) ನೀಡಿದ ಮತ್ತು ಅಬಾರ್ಷನ್ ಮಾಡಿಸಿದ ಆರೋಪದಲ್ಲಿ ಪತಿಯ ವಿರುದ್ಧವೇ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಜತೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಲ್ಲಿ ಅತ್ತೆ-ಮಾವನ ವಿರುದ್ಧವೂ ದೂರು ದಾಖಲಿಸಿದ್ದಾರೆ. ಸಂತ್ರಸ್ತೆ ನೀಡಿದ ದೂರಿನ ಆಧಾರದಲ್ಲಿ ಸದ್ಯ ಬನಶಂಕರಿ ಠಾಣೆ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.

ರಾಜಕಾರಣಿಗಳ ಜೊತೆ ಮಲಗೆಂದು ಒತ್ತಾಯ

ಸಂತ್ರಸ್ತೆಯು 25-6-2021 ರಂದು ಆರೋಪಿ ಯೂನಸ್ ಪಾಷಾನನ್ನು ವಿವಾಹವಾಗಿದ್ದರು. ಇದಾದ ಸುಮಾರು 4 ತಿಂಗಳ ನಂತರ ಆರೋಪಿಗಳಾದ ಯೂನಸ್ ಪಾಷಾ, ಆತನ ತಂದೆ ಚಿಂದ್ ಪಾಷಾ, ತಾಯಿ ಪಹೀನ್ ತಾಜ್ ಸೇರಿಕೊಂಡು ಸಂತ್ರಸ್ತೆಗೆ ಹಿಂಸೆ ನೀಡಲು ಆರಂಭಿಸಿದ್ದಾರೆ. ಈ ಮಧ್ಯೆ, ಸಂತ್ರಸ್ತೆಯು ಗರ್ಭವತಿಯಾಗಿದ್ದು, ಯೂನಸ್ ಪಾಷಾ ಆಕೆಯ ಹೊಟ್ಟೆಯ ಮೇಲೆ ಒದ್ದು ಹಲ್ಲೆ ಮಾಡಿದ್ದ. 17-12-2021 ರಂದು ಸಂತ್ರಸ್ತೆಯನ್ನು ಹೆದರಿಸಿ ಮತ್ತು ಒತ್ತಾಯಪಡಿಸಿ ಗರ್ಭಪಾತ ಮಾಡಿಸಿದ್ದಾನೆ ಎಂದು ಎಫ್​ಐಆರ್​​ನಲ್ಲಿ ಉಲ್ಲೇಖಿಸಲಾಗಿದೆ.

ಪತ್ನಿಯ ತಲೆಗೆ ಗನ್ ಇಟ್ಟು ಹೆದರಿಸುತ್ತಿದ್ದ ಆರೋಪಿ

ನಡವಳಿಕೆಗಳನ್ನು ಪ್ರಶ್ನಿಸಿದರೆ ಯೂನಸ್ ಪಾಷಾ ಆಯುಧಗಳನ್ನು ತೋರಿಸಿ ಬೆದರಿಕೆ ಹಾಕುತ್ತಿದ್ದ. ಪತ್ನಿಯ ತಲೆಗೆ ಗನ್ ಇಟ್ಟು ಹೆದರಿಸುತ್ತಿದ್ದ. ಅಷ್ಟೇ ಅಲ್ಲದೆ, ಸಂತ್ರಸ್ತೆಯ ತಂದೆ ಮತ್ತು ಕುಟುಂಬದವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಾ ಬರುತ್ತಿದ್ದ. 2023 ರಲ್ಲಿ ಸಂತ್ರಸ್ತೆ ಮೇಲೆ ಗಂಭೀರ ಹಲ್ಲೆ ಮಾಡಿದ್ದ ಎಂದು ಎಫ್​ಐಆರ್​​ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ
Image
ನೈಸ್ ರಸ್ತೆ ಟೋಲ್ ದರ ಹೆಚ್ಚಳ: ಇಲ್ಲಿದೆ ಪರಿಷ್ಕೃತ ದರ ಪಟ್ಟಿ
Image
ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್​ನಲ್ಲಿ ಅಗ್ನಿ ಅವಘಡ
Image
ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದ ಬಿಜೆಪಿ ರಾಜ್ಯಾಧ್ಯಕ್ಷ ಘೋಷಣೆ
Image
ಶಾಸಕರ ಮುನಿಸಿಗೆ ಮದ್ದರೆಯಲು ಸುರ್ಜೇವಾಲ ಸಂಧಾನ ಸೂತ್ರ

ರಾಜಕಾರಣಿಗಳು, ಸ್ಥಳೀಯ ರೌಡಿಗಳ ನಂಟು: ಪತ್ನಿಯ ಮಾರಾಟಕ್ಕೆ ಮುಂದಾಗಿದ್ದ ಪಾಷಾ!

ಯೂನಸ್ ಪಾಷಾಗೆ ರಾಜಕಾರಣಿಗಳು, ಸ್ಥಳೀಯ ರೌಡಿಗಳ ನಂಟು ಇದೆ. ಆರೋಪಿಯು ಸಂತ್ರಸ್ತೆಯನ್ನು ಆತನ ರಾಜಕಾರಣಿ ಸ್ನೇಹಿತನಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾನೆ ಎಂಬುದು ಕೆಲವು ತಿಂಗಳ ಹಿಂದೆ ತಿಳಿದು ಬಂದಿದೆ. ಇದರಿಂದ ಭಯಗೊಂಡ ಸಂತ್ರಸ್ತೆಯು ಕಳೆದ ಎರಡು ತಿಂಗಳುಗಳಿಂದ ಗಂಡನ ಮನೆ ಬಿಟ್ಟು ಬಂದು ತಾಯಿ ಮನೆಯಲ್ಲಿ ವಾಸವಿದ್ದಾರೆ ಎಂದು ಎಫ್​ಐಆರ್​​​ನಲ್ಲಿ ಉಲ್ಲೇಖವಾಗಿದೆ.

ಇದನ್ನೂ ಓದಿ: ಮುಸ್ಲಿಂ ವ್ಯಕ್ತಿ ಜೊತೆ ಲಿವಿಂಗ್ ಟುಗೆದರ್​​ನಲ್ಲಿದ್ದ ಆಶಾ ಬಿಬಿಎಂಪಿ ಕಸದ ಲಾರಿಯಲ್ಲಿ ಶವವಾಗಿ ಪತ್ತೆ!

2025 ರ ಜೂನ್ 4 ರಂದು ಸಂತ್ರಸ್ತೆಯು ಬಟ್ಟೆಗಳನ್ನು ವಾಪಸ್ ತರಲು ಪತಿಯ ಮನೆಗೆ ಹೋಗಿದ್ದಾಗ ಪಾಷಾ ಕೊಲೆ ಬೆದರಿಕೆ ಹಾಕಿದ್ದಾನೆ. ಸಂತ್ರಸ್ತೆಗೆ ಮಾತ್ರವಲ್ಲದೆ ಆಕೆಯ ತಾಯಿಗೂ ಕೊಲೆ ಬೆದರಿಕೆ ಹಾಕಿದ್ದಾನೆ. ಇದರಿಂದ ಮನನೊಂದ ಸಂತ್ರಸ್ತೆ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಕೋರಿ ದೂರು ನೀಡಿದ್ದಾರೆ ಎಂದು ಬನಶಂಕರಿ ಠಾಣೆಯಲ್ಲಿ ದಾಖಲಾದ ಎಫ್​ಐಆರ್​​ನಲ್ಲಿ ಹೇಳಲಾಗಿದೆ.

ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9, ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:16 am, Tue, 1 July 25

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ