AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಇಂದಿನಿಂದ ಡಿಸೆಂಬರ್ 7ರವರೆಗೆ ಕಬ್ಬನ್ ಪಾರ್ಕ್​ನಲ್ಲಿ ಫ್ಲವರ್ ಶೋ!

ಕಬ್ಬನ್ ಪಾರ್ಕ್‌ನಲ್ಲಿ ನವೆಂಬರ್ 27ರಿಂದ ಡಿಸೆಂಬರ್ 7ರವರೆಗೆ ಹೂವಿನ ಪ್ರದರ್ಶನ ಆಯೋಜಿಸಲಾಗಿದೆ. ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಅಂಗವಾಗಿ 10 ವರ್ಷಗಳ ನಂತರ ನಡೆಯುತ್ತಿರುವ ಈ ಪುಷ್ಪ ಮೇಳದಲ್ಲಿ ಆಕರ್ಷಕ ಕಲಾಕೃತಿಗಳು ಹಾಗೂ ವಿವಿಧ ಜಾತಿಯ ಹೂವುಗಳನ್ನು ಪ್ರದರ್ಶಿಸಲು ಇಲಾಖೆ ಮುಂದಾಗಿದ್ದು, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪ್ರವೇಶವಿರಲಿದೆ.

ಬೆಂಗಳೂರು: ಇಂದಿನಿಂದ ಡಿಸೆಂಬರ್ 7ರವರೆಗೆ ಕಬ್ಬನ್ ಪಾರ್ಕ್​ನಲ್ಲಿ ಫ್ಲವರ್ ಶೋ!
ಇಂದಿನಿಂದ ಕಬ್ಬನ್ ಪಾರ್ಕ್ನಲ್ಲಿ ಫ್ಲವರ್ ಶೋ!
Vinay Kashappanavar
| Edited By: |

Updated on:Nov 27, 2025 | 12:43 PM

Share

ಬೆಂಗಳೂರು, ನವೆಂಬರ್ 27: ಪ್ರತಿ ವರ್ಷ ಲಾಲ್ಬಾಗ್ ಫಲ ಪುಷ್ಪ ಪ್ರದರ್ಶನಕ್ಕೆ ಜನರು ಬಂದು ಕಣ್ತುತುಂಬಿಕೊಳ್ಳುತ್ತಾರೆ. ಇದೇ ಮಾದರಿಯಲ್ಲಿ ಇಂದಿನಿಂದ (ನ.27) ಕಬ್ಬನ್ ಪಾರ್ಕ್ನಲ್ಲಿಯೂ (Cubbon Park) ಪುಷ್ಪ ಮೇಳಕ್ಕೆ ತೋಟಗಾರಿಕೆ ಇಲಾಖೆ ಚಾಲನೆ ನೀಡಲಿದೆ. ಕನ್ನಡ ರಾಜ್ಯೋತ್ಸವ ಹಾಗೂ‌ ಮಕ್ಕಳ ದಿನಾಚರಣೆ ಅಂಗವಾಗಿ ಹತ್ತು ವರ್ಷಗಳ ಬಳಿಕ ಫ್ಲವರ್ ಶೋ ನಡೆಯುತ್ತಿದ್ದು, ಡಿಸೆಂಬರ್ 7ರ ವರೆಗೂ ಪುಷ್ಪ ಪ್ರದರ್ಶನ ಮುಂದುವರೆಯಲಿದೆ.

ಸರ್ಕಾರಿ‌ ಶಾಲೆ ಮಕ್ಕಳಿಗೆ ಉಚಿತ ಪ್ರವೇಶ

ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯೋತ್ಸವ ಅಂಗವಾಗಿ ತೋಟಗಾರಿಕೆ ಇಲಾಖೆ ಲಾಲ್ಬಾಗ್​ನಲ್ಲಿ ಮಾತ್ರ ಫಲಪುಷ್ಪ ಪ್ರದರ್ಶನ ಆಯೋಜಿಸುತ್ತಿತ್ತು ಈಗ ಕಬ್ಬನ್ ಉದ್ದಾನದಲ್ಲಿ ರಾಜೋತ್ಸವ, ಮಕ್ಕಳ ದಿನಾಚರಣೆ ಅಂಗವಾಗಿ ಶೋ ಆಯೋಜನೆ ಮಾಡಿದೆ. ಸರ್ಕಾರಿ‌ ಶಾಲೆ ಮಕ್ಕಳಿಗೆ ಉಚಿತ ಪ್ರವೇಶ ಇದ್ದು, ದೊಡ್ಡವರಿಗೆ 30 ರೂ. ಹಾಗೂ ಮಕ್ಕಳಿಗೆ 10 ರೂ. ಶುಲ್ಕದ ಟಿಕೆಟ್ ನಿಗದಿಸಲಾಗಿದೆ.

ಇಲಾಖೆ ಪುಷ್ಪ ಪ್ರದರ್ಶನದ ಜೊತೆಗೆ ಕಲಾ, ಸಂಸ್ಕೃತಿ ಹಬ್ಬವನ್ನೂ ಸಹ ಹಮ್ಮಿಕೊಳ್ಳಲಿದ್ದು, ಆಲಂಕಾರಿಕ ಕುಂಡಗಳನ್ನೂ ಸಿದ್ಧ ಮಾಡಿಕೊಂಡಿದೆ. ಪುಷ್ಪಗಳಲ್ಲಿ ಪ್ರಾಣಿಗಳ ಕರಕುಶಲಗಳನ್ನು ರಚಿಸಿ ಮಕ್ಕಳನ್ನು ಆಕರ್ಷಿಸುವ ಯೋಜನೆ ರೂಪಿಸಲಾಗಿದೆ. ಕಬ್ಬನ್ ಪಾರ್ಕ್​ನ ಬ್ಯಾಂಡ್ ಸ್ಟ್ಯಾಂಡ್ ಹತ್ತಿರ 20 ರಿಂದ 25 ಸಾವಿರ ಕುಂಡಗಳನ್ನು ಇಡಲು ಪ್ಲಾನ್ ಮಾಡಿದ್ದು, ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಪ್ರದರ್ಶನ ಇರಲಿದೆ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕಿ ಕುಸುಮಾ ಹೇಳಿದ್ದಾರೆ.

ಇದನ್ನೂ ಓದಿ ಫ್ಲವರ್ ಶೋ ಹಿನ್ನೆಲೆ ಕಬ್ಬನ್ ಪಾರ್ಕ್‌ ಸುತ್ತ ಮುತ್ತ ಸಂಚಾರ ಬದಲಾವಣೆ

 11 ದಿನಗಳ ಕಾಲ ಸಂಚಾರ ನಿರ್ಬಂಧ

ಕಬ್ಬನ್ ಪಾರ್ಕ್ನಲ್ಲಿ ಈಗಾಗಲೇ ಹೂವಿನಲ್ಲಿ ಅರಳಿದ ಆನೆ, ಚಿಟ್ಟೆ, ಡಾಲ್ಫಿನ್ ಕಲಾಕೃತಿಗಳು ಜನರನ್ನು ಆಕರ್ಷಿಸುತ್ತಿದ್ದು, ಕಬ್ಬನ್ ಪಾರ್ಕ್ ಪುಷ್ಪ ಮೇಳ ನೋಡಲು ಸಿಟಿ ಜನರು ಉತ್ಸಾಹಕರಾಗಿದ್ದಾರೆ. ಪಾರ್ಕ್ನ ಒಂದು ಗೇಟ್ ಸಂಚಾರ ನಿಯಂತ್ರಣ ಮಾಡಲು ಇಲಾಖೆ ಮುಂದಾಗಿದ್ದು, ಹೈ ಕೋರ್ಟ್ ನಿಂದ ವಿಠಲ್ ಮಲ್ಯ ರಸ್ತೆ ಸಂಪರ್ಕಿಸುವ ರಸ್ತೆ, ಬ್ಯಾಂಡ್ ಸ್ಟ್ಯಾಂಡ್ ಬಾಲಭವನದ ಮುಂಭಾಗದ ರಸ್ತೆ ಸಂಚಾರಕ್ಕೆ ನಿರ್ಬಂಧ ತೋಟಗಾರಿಕೆ ಇಲಾಖೆ ಮುಂದಾಗಿದೆ. ಮುಂದಿನ 11 ದಿನಗಳ ಕಾಲ ಈ ನಿರ್ಬಂಧ ಇರಲಿದ್ದು, ಇದರಿಂದ ಕಬ್ಬನ್ ಪಾರ್ಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:49 am, Thu, 27 November 25

Follow Us
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ