AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನು 1 ತಿಂಗಳು ಬೆಂಗಳೂರಿನ ಕಬ್ಬನ್ ರಸ್ತೆ ಬಂದ್; ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ

30 ದಿನಗಳವರೆಗೆ ಬೆಂಗಳೂರಿನ ಕಬ್ಬನ್ ರಸ್ತೆಯಲ್ಲಿ ಸಂಚಾರ ಸ್ಥಗಿತವಾಗಲಿದೆ. ಕಬ್ಬನ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚಾರ ನಿಷೇಧಿಸಲಾಗಿದೆ. ಕಬ್ಬನ್ ರಸ್ತೆಯಲ್ಲಿ ಮೇನ್ ಗಾರ್ಡ್ ಕ್ರಾಸ್ ರಸ್ತೆಯಿಂದ ಡಿಸ್ಪೆನ್ಸರಿ ರಸ್ತೆಯವರೆಗೆ 1 ತಿಂಗಳ ಕಾಲ ವಾಹನ ನಿರ್ಬಂಧವನ್ನು ಘೋಷಿಸಲಾಗಿದೆ. ನಿನ್ನೆಯಿಂದ (ಭಾನುವಾರ) ಈ ನಿಷೇಧ ಜಾರಿಯಲ್ಲಿದ್ದು, ಸಂಚಾರ ನಿರ್ಬಂಧಗಳೇನು? ಇದಕ್ಕೆ ಪರ್ಯಾಯ ಮಾರ್ಗಗಳು ಯಾವುವು? ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ಇನ್ನು 1 ತಿಂಗಳು ಬೆಂಗಳೂರಿನ ಕಬ್ಬನ್ ರಸ್ತೆ ಬಂದ್; ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ
Cubbon Road
ಸುಷ್ಮಾ ಚಕ್ರೆ
|

Updated on: Feb 03, 2025 | 11:48 AM

Share

ಬೆಂಗಳೂರು: ವೈಟ್ ಟಾಪಿಂಗ್ ಕೆಲಸದಿಂದಾಗಿ ಬೆಂಗಳೂರು ಸಂಚಾರ ಪೊಲೀಸರು ಫೆಬ್ರವರಿ 2ರಿಂದ ಕಬ್ಬನ್ ರಸ್ತೆಯಲ್ಲಿ (ಮೇನ್ ಗಾರ್ಡ್ ಕ್ರಾಸ್​ನಿಂದ ಡಿಸ್ಪೆನ್ಸರಿ ರಸ್ತೆ) 1 ತಿಂಗಳ ಕಾಲ ವಾಹನ ಸಂಚಾರವನ್ನು ನಿರ್ಬಂಧಿಸಿದ್ದಾರೆ. ಬೆಂಗಳೂರು ಸಂಚಾರ ಪೊಲೀಸರು ಹೊರಡಿಸಿದ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ಶಿವಾಜಿನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಬ್ಬನ್ ರಸ್ತೆ ಮುಖ್ಯ ಗಾರ್ಡ್ ಕ್ರಾಸ್ ರಸ್ತೆಯಿಂದ ಡಿಸ್ಪೆನ್ಸರಿ ರಸ್ತೆಯವರೆಗೆ ಬಿಬಿಎಂಪಿಯಿಂದ ವೈಟ್ ಟಾಪಿಂಗ್ ಕೆಲಸವನ್ನು ಗಮನದಲ್ಲಿಟ್ಟುಕೊಂಡು ಫೆಬ್ರವರಿ 2ರಿಂದ 30 ದಿನಗಳವರೆಗೆ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಸಂಚಾರ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲು ಈ ಆದೇಶ ಹೊರಡಿಸಲಾಗಿದೆ.

ಕಬ್ಬನ್ ರಸ್ತೆ ಮುಖ್ಯ ಗಾರ್ಡ್ ಕ್ರಾಸ್ ರಸ್ತೆಯಿಂದ ಡಿಸ್ಪೆನ್ಸರಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವಿಲ್ಲ ಎಂದು ಬೆಂಗಳೂರು ಸಂಚಾರ ಪೊಲೀಸರು ಪ್ರಕಟಿಸಿದ್ದಾರೆ. ಫೆಬ್ರವರಿ 2ರ ಭಾನುವಾರದಿಂದ ನಿರ್ಬಂಧಗಳನ್ನು ಜಾರಿಗೆ ತರಲಾಗಿದೆ.

ಇದನ್ನೂ ಓದಿ: ಎಂಆರ್​ಐ ಕುರಿತ ಚಾಟ್​ಜಿಪಿಟಿ ಮಾಹಿತಿಯಿಂದ ಅಚ್ಚರಿಗೊಂಡ ಬೆಂಗಳೂರು ಉದ್ಯಮಿ

ಕಬ್ಬನ್ ರಸ್ತೆಯ ಮುಖ್ಯ ಗಾರ್ಡ್ ಕ್ರಾಸ್ ರಸ್ತೆಯಿಂದ ಡಿಸ್ಪೆನ್ಸರಿ ರಸ್ತೆಯಿಂದ ವಾಹನ ಸಂಚಾರವನ್ನು 1 ತಿಂಗಳ ಕಾಲ ಮುಚ್ಚಲಾಗುವುದು ಎಂದು ಬೆಂಗಳೂರು ಸಂಚಾರ ಪೊಲೀಸರು ಘೋಷಿಸಿದ್ದರು. ಅದರಂತೆ ಫೆಬ್ರವರಿ 2ರಿಂದಲೇ ಈ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಶಿವಾಜಿನಗರ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವೈಟ್ ಟಾಪಿಂಗ್ ಕಾಮಗಾರಿಗೆ ಅನುಕೂಲವಾಗುವಂತೆ ಬೆಂಗಳೂರು ಸಂಚಾರದ ಸಲಹೆ ನೀಡಲಾಗಿದೆ.

ನಿರ್ಬಂಧಿತ ರಸ್ತೆಗಳು:

– ಸಫೀನಾ ಪ್ಲಾಜಾ ಜಂಕ್ಷನ್‌ನಿಂದ ಇನ್‌ಫೆಂಟ್ರಿ ರಸ್ತೆ ಮೂಲಕ ಕಮರ್ಷಿಯಲ್ ಸ್ಟ್ರೀಟ್‌ಗೆ ವಾಹನಗಳನ್ನು ನಿರ್ಬಂಧಿಸಲಾಗಿದೆ.

– ಸಫೀನಾ ಪ್ಲಾಜಾ ಜಂಕ್ಷನ್‌ನಿಂದ ಕಬ್ಬನ್ ರಸ್ತೆ ಮುಖ್ಯ ಗಾರ್ಡ್ ಕ್ರಾಸ್ ರಸ್ತೆ ಮೂಲಕ ಕಮರ್ಷಿಯಲ್ ಸ್ಟ್ರೀಟ್‌ಗೆ ವಾಹನಗಳನ್ನು ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲೊಂದು ಭಯಾನಕ ಘಟನೆ: ಕ್ಯಾಬ್​ಗೆ ನುಗ್ಗಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ

ಪರ್ಯಾಯ ಮಾರ್ಗಗಳೇನು?:

ಇನ್‌ಫೆಂಟ್ರಿ ರಸ್ತೆ ಸಫೀನಾ ಪ್ಲಾಜಾದಿಂದ ಕಮರ್ಷಿಯಲ್ ಸ್ಟ್ರೀಟ್ ಕಡೆಗೆ ಹೋಗುವ ಎಲ್ಲಾ ರೀತಿಯ ವಾಹನಗಳು ಇನ್‌ಫೆಂಟ್ರಿ ರಸ್ತೆ ಮತ್ತು ಲೇಡಿ ಕರ್ಜನ್ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು, ಲೇಡಿ ಕರ್ಜನ್ ರಸ್ತೆಯಲ್ಲಿ ಎಡ ತಿರುವು ಪಡೆದು, ಕಬ್ಬನ್ ರಸ್ತೆ ಮತ್ತು ಕೆಆರ್ ರಸ್ತೆ ಮತ್ತು ಕಬ್ಬನ್ ರಸ್ತೆಯ ಜಂಕ್ಷನ್​ನಲ್ಲಿ ಎಡ ತಿರುವು ಪಡೆದು ಮುಂದೆ ಸಾಗಬಹುದು. ನಂತರ ಕಾಮರಾಜ ರಸ್ತೆಯಲ್ಲಿ ಎಡ ತಿರುವು ಪಡೆದು ಕಮರ್ಷಿಯಲ್ ಸ್ಟ್ರೀಟ್ ಕಡೆಗೆ ಸಾಗಬಹುದು.

ಕಬ್ಬನ್ ಮುಖ್ಯ ಗಾರ್ಡ್ ಕ್ರಾಸ್ ರಸ್ತೆ ಸಫೀನಾ ಪ್ಲಾಜಾ ಜಂಕ್ಷನ್‌ನಿಂದ ಕಮರ್ಷಿಯಲ್ ಸ್ಟ್ರೀಟ್ ಕಡೆಗೆ ಹೋಗುವ ಎಲ್ಲಾ ರೀತಿಯ ವಾಹನಗಳು ಕಬ್ಬನ್ ರಸ್ತೆಯ ಮೂಲಕ ಸಾಗಬಹುದು. ಕೆಆರ್ ರಸ್ತೆ ಮತ್ತು ಕಬ್ಬನ್ ರಸ್ತೆ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಕಾಮರಾಜ ರಸ್ತೆ ಮೂಲಕ ಕಮರ್ಷಿಯಲ್ ಸ್ಟ್ರೀಟ್‌ಗೆ ಹೋಗಬಹುದು.

ಬೆಂಗಳೂರಿನ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಪ್ರಜ್ವಲ್ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ​​ಆಕ್ರೋಶ
ಪ್ರಜ್ವಲ್ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ​​ಆಕ್ರೋಶ