AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ವಿರುದ್ಧದ ಲಾಕಪ್ ಡೆತ್ ಕೇಸಿಗೆ ಟ್ವಿಸ್ಟ್: ದರ್ಶನ್ ಕೊಲೆ ರಹಸ್ಯ ಬಯಲು

ದರ್ಶನ ಎನ್ನುವ ಯುವಕನ ಸಾವು ಪ್ರಕರಣ ಸಂಬಂಧ ಲಾಕ್ ಡೆತ್ ಎಂದು ಪೊಲೀಸರ ವಿರುದ್ಧವೇ ಕೊಲೆ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಕೂಡ ಸಸ್ಪೆಂಡ್ ಆಗಿ ಸಿಐಡಿ ತನಿಖೆಗೆ ಇಳಿದಿತ್ತು. ಇದೀಗ ಸಿಐಡಿ ತನಿಖೆಯಲ್ಲಿ ಯುವಕನ ಕೊಲೆಯ ರಹಸ್ಯ ಬಯಲಾಗಿದೆ. ಹಾಗಾದ್ರೆ ದರ್ಶನ್​​ನನ್ನು ಕೊಲೆ ಮಾಡಿದ್ಯಾರು? ಪೊಲೀಸರನ್ನೇ ಕೊಲೆ ಕೇಸಿನಲ್ಲಿ ತಗಲಾಕಿಸಿದ್ಯಾರು? ಇಲ್ಲಿದೆ ಸಿಐಡಿಯ ತನಿಖೆಯ ಸತ್ಯಾಂಶ

ಪೊಲೀಸರ ವಿರುದ್ಧದ ಲಾಕಪ್ ಡೆತ್ ಕೇಸಿಗೆ ಟ್ವಿಸ್ಟ್: ದರ್ಶನ್ ಕೊಲೆ ರಹಸ್ಯ ಬಯಲು
Darshan
ರಮೇಶ್ ಬಿ. ಜವಳಗೇರಾ
|

Updated on: Jan 13, 2026 | 9:52 PM

Share

ಬೆಂಗಳೂರು, (ಜನವರಿ 13): ಕಳೆದ ನವೆಂಬರ್ ನಲ್ಲಿ ಬೆಂಗಳೂರು ಪೊಲೀಸರಿಗೆ (Bengaluru Police) ದೊಡ್ಡ ಅಘಾತ ಎದುರಾಗಿತ್ತು.. ಮೂರು ದಿನ ಅಕ್ರಮವಾಗಿ ಪೊಲೀಸರ ಕಸ್ಟಡಿಯಲ್ಲಿದ್ದ ದರ್ಶನ್ ಎಂಬ 22 ವರ್ಷದ ಯುವಕ ನಂತರ ರಿಹ್ಯಾಬ್ ಸೆಂಟರ್ ಸೇರಿದ ಮೂರೇ ದಿನಕ್ಕೆ ಪ್ರಾಣ ಬಿಟ್ಟಿದ್ದ. ಮಗನ ಈ ಸಾವಿಗೆ ಪೊಲೀಸರ ಹೊಡೆತಗಳೇ ಕಾರಣ ಎಂದು ಪೋಷಕರು ಆರೋಪಿಸಿದ್ದರು. ಇದರಿಂದ ವಿವೇಕ ನಗರ ಪೊಲೀಸರ ವಿರುದ್ಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿತ್ತು. ಲಾಕ್ ಅಪ್ ಡೆತ್ ಸ್ವರೂಪದ ಈ ಕೇಸ್ ನಂತರ ಸಿಐಡಿಗೆ ವರ್ಗಾವಣೆ ಆಗಿತ್ತು. ಸದ್ಯ ಸಿಐಡಿ ತನಿಖೆಯಲ್ಲಿ ಇಡೀ ಪ್ರರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದರ್ಶನ್ ಕೊಲೆಗೆ ಪೊಲೀಸರು ಕಾರಣರಲ್ಲ ಎಂದು ಸಿಐಡಿ ತನಿಖೆಯಲ್ಲಿ ಗೊತ್ತಾಗಿದೆ.

ದರ್ಶನ್ ಸಾವಿಗೆ ಪೊಲೀಸ್ರು ಕಾರಣರಲ್ಲ

ಹೌದು… ವಿವೇಕನಗರ ಪೊಲೀಸರಿಂದ ದರ್ಶನ್ ಕಸ್ಟೋಡಿಯಲ್ ಡೆತ್ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಲಾಕಪ್ ಡೆತ್ ಆರೋಪ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ್ದು, ಇದೀಗ ಸಿಐಡಿ ತನಿಖೆ ಮಾಡಿ ದರ್ಶನ್ ಸಾವಿಗೆ ಕಾರಣ ಯಾರು ಎನ್ನುವುದನ್ನು ಪತ್ತೆ ಮಾಡಿದ್ದಾರೆ. ಸಿಐಡಿ ತನಿಖೆಯಲ್ಲಿ ದರ್ಶನ್ ಸಾವಿಗೆ ಕಾರಣ ಪೊಲೀಸರಲ್ಲ. ಬದಲಾಗಿ ಆತ ದಾಖಲಾಗಿದ್ದ ರಿಹ್ಯಾಬ್ ಸೆಂಟರ್ ಕೆಲಸಗಾರರು ಎನ್ನುವುದು ಬಯಲಿಗೆ ಬಂದಿದ್ದು, ಈ ಸಂಬಂಧ ಸಿಐಡಿ ಅಧಿಕಾರಿಗಳು 8 ಜನರನ್ನು ಬಂಧಿಸಿದ್ದಾರೆ. ನವೀನ್, ಅಖಿಲ್, ನಾರಾಯಣ @ನಾಣಿ, ಹಿತೇಶ್ ಕುಮಾರ್, ಮಂಜು, ಸಾಹಿಲ್ ಅಹಮದ್, ನವೀನ್ ಕುಮಾರ್, ರವಿ ಎನ್ನುವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ದರ್ಶನ್ ಸಾವು: ಪೊಲೀಸರಿಂದಲೇ ಕೊಲೆ ಆರೋಪ, ಪ್ರಕರಣ ಸಿಐಡಿ ಹೆಗಲಿಗೆ

ರಿಹ್ಯಾಬ್ ಹುಡುಗರಿಂದ ದರ್ಶನ್ ಕೊಲೆ

ಮೊದಲೇ ಕುಡಿತದ ದಾಸನಾಗಿದ್ದ ದರ್ಶನ್ ನನ್ನು ವಿವೇಕನಗರ ಪೊಲೀಸರು ಯಾವುದೇ ಕೇಸ್ ದಾಖಲಿಸಿದೆ ಮೂರು ದಿನ ಅಕ್ರಮವಾಗಿ ಕಸ್ಟಡಿಯಲ್ಲಿ ಇಟ್ಟುಕೊಂಡಿದ್ದರು. ಬಳಿಕ ಅಡಕಮಾರನಹಳ್ಳಿಯ ಯುನಿಟಿ ಫೌಂಡೇಶನ್ ಎಂಬ ರಿಹ್ಯಾಬ್ ಸೆಂಟರ್ ಗೆ ಸೇರಿಸಲಾಗಿತ್ತು.ಆದರೆ ದರ್ಶನ್ ಕಂಟ್ರೋಲ್ ಮಾಡೋದಕ್ಕೆ ರಿಹ್ಯಾಬ್ ಹುಡುಗರು ಆತನ ಮೇಲೆ ಎರಡ್ಮೂರು ದಿನ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಬಳಿಕ ರಿಹ್ಯಾಬ್ ಸೆಂಟರ್ ನಲ್ಲಿ ಲೋ ಬಿಪಿಯಾಗಿ ದರ್ಶನ್ ಸಾವನ್ನಪ್ಪಿದ್ದ. ಸದ್ಯ ಸಿಐಡಿ ತನಿಖೆಯಲ್ಲಿ ರಿಹ್ಯಾಬ್ ಸೆಂಟರ್ ನ ಇನ್ಚಾರ್ಜ್ ಅಖಿಲ್ ಸೇರಿದಂತೆ 8 ಜನರನ್ನ ಬಂಧಿಸಿ ಜೈಲಿಗಟ್ಟಲಾಗಿದೆ.

ಪೊಲೀಸರ ವಿರುದ್ಧ ಕೊಲೆ ಕೇಸ್

ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ದರ್ಶನ್ ಎಂಬ ಯುವಕನನ್ನು ಪೊಲೀಸರು 2025ರ ನವೆಂಬರ್ 15ರಂದು ಸ್ಟೇಷನ್‌ಗೆ ಕರೆತಂದಿದ್ದರು. ಈ ವೇಳೆ ಯಾವುದೇ ಕೇಸ್ ಮಾಡದೆ, ಎರಡು ದಿನ ಕಸ್ಟಡಿಯಲ್ಲಿಟ್ಟು ಹಲ್ಲೆ ನಡೆಸಿದ್ದಾರೆ ಎಂಬ ಆರೋಪವಿದೆ. ಇದಾದ ಬಳಿಕ ಆತನನ್ನು ಬಿಟ್ಟು ಕಳಿಸಿದ್ದು, ಮಾದನಾಯಕನಹಳ್ಳಿ ಬಳಿ ಯುನಿಟಿ ರಿಹ್ಯಾಬಿಲೇಷನ್ ಸೆಂಟರ್‌ನಲ್ಲಿ (ಪುನರ್ವಸತಿ ಕೇಂದ್ರದಲ್ಲಿ) ಸೇರಿಸಲಾಗಿತ್ತು. ಆ ವೇಳೆ ದರ್ಶನ್ ಸಾವನ್ನಪ್ಪಿದ್ದು, ಮರಣೋತ್ತರ ಪರೀಕ್ಷೆ ವೇಳೆ ಹಲ್ಲೆ ನಡೆಸಿರೋದು ಬೆಳಕಿಗೆ ಬಂದಿತ್ತು. ಈ ನಿಟ್ಟಿನಲ್ಲಿ ದರ್ಶನ್ ಪೋಷಕರು ಪೊಲೀಸರ ವಿರುದ್ಧವೇ ಲಾಕಪ್ ಡೆತ್ ಆರೋಪ ಮಾಡಿದ್ದರು. ಸಂಬಂಧ ವಿವೇಕನಗರ ಇನ್​​ಸ್ಪೆಕ್ಟರ್ ಶಿವಕುಮಾರ್ ಸೇರಿ ನಾಲ್ವರ ಮೇಲೆ FIR ದಾಖಲಾಗಿತ್ತು. ಇದೀಗ ಸಿಐಡಿ ತನಿಖೆಯಿಂದ ಅಸಲಿ ಸತ್ಯ ಬಯಲಿಗೆ ಬಂದಿದ್ದು, ವಿವೇಕನಗರ ಪೊಲೀಸರು ನಿಟ್ಟುಸಿರುಬಿಟ್ಟಿದ್ದಾರೆ.

ವರದಿ: ಪ್ರದೀಪ್ ಚಿಕ್ಕಾಟಿ, Tv9, ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​