AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬಾಯ್ಲರ್ ಸ್ಫೋಟ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಇನ್ನೂ ಇಬ್ಬರ ಸಾವು

ಘಟನೆಯಲ್ಲಿ ತೀವ್ರ ಸ್ವರೂಪದ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ನಾಲ್ವರನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಇಬ್ಬರು ಇಂದು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಆ ಮೂಲಕ ಬಾಯ್ಲರ್ ಸ್ಪೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಬಾಯ್ಲರ್ ಸ್ಫೋಟ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಇನ್ನೂ ಇಬ್ಬರ ಸಾವು
ಬಾಯ್ಲರ್ ಸ್ಫೋಟಗೊಂಡಿರುವ ಸ್ಥಳ
TV9 Web
| Edited By: |

Updated on: Aug 24, 2021 | 8:11 AM

Share

ಬೆಂಗಳೂರು: ನಿನ್ನೆ (ಆಗಸ್ಟ್ 23) ಬಾಯ್ಲರ್ ಸ್ಫೋಟಿಸಿ ಇಬ್ಬರು ಸಜೀವ ದಹನವಾದ ದುರ್ಘಟನೆ ಬೆಂಗಳೂರಿನ ಮಾಗಡಿ ರಸ್ತೆ ಅಂಜನ್ ಥಿಯೇಟರ್ ಬಳಿ ನಡೆದಿತ್ತು. ಇಲ್ಲಿಯ ಎಂ.ಎಂ.ಫುಡ್ ಫ್ಯಾಕ್ಟರಿಯಲ್ಲಿ ನಡೆದಿರುವ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನು ನಾಲ್ಕು ಜನರಿಗೆ ಗಂಭೀರ ಗಾಯವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ, ಧನಲಕ್ಷ್ಮಿ(5೦) ಹಾಗೂ ಸಚಿನ (4೦) ಮೃತಪಟ್ಟಿದ್ದಾರೆ.

ಘಟನೆಯಲ್ಲಿ ತೀವ್ರ ಸ್ವರೂಪದ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ನಾಲ್ವರನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಇಬ್ಬರು ಇಂದು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಆ ಮೂಲಕ ಬಾಯ್ಲರ್ ಸ್ಪೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ.

ಕಾಬೂಲ್ ಕಡಲೆ, ಚಿಪ್ಸ್ ಸೇರಿದಂತೆ ಸ್ನ್ಯಾಕ್ಸ್ ತಯಾರಿಕಾ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದೆ. ಬಿಹಾರ, ತಮಿಳುನಾಡು ಮೂಲದವರು ಕೆಲಸ ಮಾಡುತ್ತಿದ್ದರು. ಅನಧಿಕೃತವಾಗಿ ಫುಡ್ ಫ್ಯಾಕ್ಟರಿ ನಡೆಸಲಾಗುತ್ತಿತ್ತು ಎಂಬ ದೂರು ಸಹ ಕೇಳಿಬಂದಿದೆ. ಈ ಕುರಿತು ಪ್ರತಿಕ್ರಿಯಿಸಿದ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್, ಗಾಯಾಳುಗಳ ಹೇಳಿಕೆ ಪಡೆದು ಪ್ರಕರಣ ದಾಖಲಿಸಲಿದ್ದೇವೆ. ಘಟನೆಯಲ್ಲಿ ಇಬ್ಬರು ಮೃತಪಟ್ಟು, ಮೂವರಿಗೆ ಗಾಯವಾಗಿದೆ. ಜನವಸತಿ ಪ್ರದೇಶದಲ್ಲಿ ಫ್ಯಾಕ್ಟರಿಗೆ ಹೇಗೆ ಅನುಮತಿ ಕೊಟ್ಟರು ಎಂಬ ಬಗ್ಗೆ ಸಂಬಂಧಿಸಿದ ಇಲಾಖೆಯವರೇ ಉತ್ತರಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಫುಡ್ ಫ್ಯಾಕ್ಟರಿಯೊಂದರಲ್ಲಿ ಬಾಯ್ಲರ್ ಸ್ಫೋಟ; ಓರ್ವ ಸಜೀವ ದಹನ, ನಾಲ್ವರಿಗೆ ಗಂಭೀರ ಗಾಯ

ಬ್ಲೂಟೂತ್ ಹೆಡ್​ಫೋನ್ ಸ್ಪೋಟ, ಯುವಕ ಸಾವು..!

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್