AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಚಂದಾಪುರ ಜಂಕ್ಷನ್ ಬಳಿ ಅಪಾಯಕಾರಿ ವ್ಹೀಲಿಂಗ್; ವಿಡಿಯೋ ವೈರಲ್

ಬೆಂಗಳೂರು ನಗರದಲ್ಲಿ ದ್ವಿಚಕ್ರ ವಾಹನ ಸವಾರರು ವ್ಹೀಲಿಂಗ್ ಮಾಡುತ್ತಿರುವ ಪ್ರಕರಣ ಅಲ್ಲೊಂದು ಇಲ್ಲೊಂದು ನಡೆಯುತ್ತಲೇ ಇದೆ. ಪೊಲೀಸರು ಎಷ್ಟೇ ಕ್ರಮ ಕೈಗೊಂಡರೂ ವ್ಹೀಲಿಂಗ್ ಪ್ರಕರಣಕ್ಕೆ ಯುವಕ ಹುಚ್ಚಾಟಕ್ಕೆ ಲಗಾಮು ಹಾಕಲು ಆಗುತ್ತಿಲ್ಲ. ಇದೀಗ, ಹೊಸೂರು ಹೆದ್ದಾರಿಯ ಚಂದಾಪುರ ಜಂಕ್ಷನ್ ಯುವಕನೊಬ್ಬ ಮಾಡಿದ ಅಪಾಯಕಾರಿ ದ್ವಿಚಕ್ರ ವಾಹನದ ವ್ಹೀಲಿಂಗ್ ವಿಡಿಯೋ ವೈರಲ್ ಆಗುತ್ತಿದೆ.

ಬೆಂಗಳೂರು: ಚಂದಾಪುರ ಜಂಕ್ಷನ್ ಬಳಿ ಅಪಾಯಕಾರಿ ವ್ಹೀಲಿಂಗ್; ವಿಡಿಯೋ ವೈರಲ್
ಬೆಂಗಳೂರು: ಚಂದಾಪುರ ಜಂಕ್ಷನ್ ಬಳಿ ಅಪಾಯಕಾರಿ ವ್ಹೀಲಿಂಗ್; ವಿಡಿಯೋ ವೈರಲ್
TV9 Web
| Edited By: |

Updated on: Mar 15, 2024 | 11:13 AM

Share

ಬೆಂಗಳೂರು, ಮಾ.15: ನಗರದಲ್ಲಿ (Bengaluru) ದ್ವಿಚಕ್ರ ವಾಹನ ಸವಾರರು ವ್ಹೀಲಿಂಗ್ (Wheeling) ಮಾಡುತ್ತಿರುವ ಪ್ರಕರಣ ಅಲ್ಲೊಂದು ಇಲ್ಲೊಂದು ನಡೆಯುತ್ತಲೇ ಇದೆ. ಪೊಲೀಸರು ಎಷ್ಟೇ ಕ್ರಮ ಕೈಗೊಂಡರೂ ವ್ಹೀಲಿಂಗ್ ಪ್ರಕರಣಕ್ಕೆ ಯುವಕ ಹುಚ್ಚಾಟಕ್ಕೆ ಲಗಾಮು ಹಾಕಲು ಆಗುತ್ತಿಲ್ಲ. ಇದೀಗ, ಹೊಸೂರು ಹೆದ್ದಾರಿಯ ಚಂದಾಪುರ ಜಂಕ್ಷನ್ ಯುವಕನೊಬ್ಬ ಮಾಡಿದ ಅಪಾಯಕಾರಿ ದ್ವಿಚಕ್ರ ವಾಹನದ ವ್ಹೀಲಿಂಗ್ ವಿಡಿಯೋ ವೈರಲ್ ಆಗುತ್ತಿದೆ.

ಹೊಸೂರು ರಾಷ್ಟ್ರೀಯ ಹೆದ್ದಾರಿಯ ಚಂದಾಪುರ ಜಂಕ್ಷನ್ ಬಳಿ ಮಾರ್ಚ್ 13 ರಂದು ಬೆಳಿಗ್ಗೆ 9:50 ರ ಸುಮಾರಿಗೆ ಈ ಅಪಾಯಕಾರಿ ವ್ಹೀಲಿಂಗ್ ನಡೆಸಲಾಗಿದೆ. ವ್ಹೀಲಿಂಗ್​ಗಾಗಿ ಸವಾರನು ನಂಬರ್ ಪ್ಲೇಟ್ ಇಲ್ಲದ ದ್ವಿಚಕ್ರ ವಾಹನ ಬಳಕೆ ಮಾಡಿದ್ದಾನೆ. ವ್ಹೀಲಿಂಗ್ ವೇಳೆ ಆತನ ಇತರೆ ಸ್ನೇಹಿತರು ಬೈಕ್ ಮೂಲಕ ಹಿಂಬಾಲಿಸಿ ವಿಡಿಯೋ ಚಿತ್ರೀಕರಿಸಿದ್ದಾರೆ. ಇದರ ದೃಶ್ಯವನ್ನು ಸಾರ್ವಜನಿಕರೊಬ್ಬರು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ.

ಬಳಿಕ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಟ್ಯಾಗ್ ಮಾಡಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಪೊಲೀಸರು, ಈ ಪ್ರಕರಣ ಗಮನಿಸುವಂತೆ ಬೆಂಗಳೂರು ಗ್ರಾಮಾಂತರದ ಎಸ್​ಪಿಗೆ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಹೆದ್ದಾರಿಯಲ್ಲಿ ವೀಲಿಂಗ್ ಮಾಡ್ತಿದ್ದ 6ಜನ ಪುಂಡರ ಬಂಧನ; 13 ಬೈಕ್ ಜಪ್ತಿ

ವೀಡಿಯೊವನ್ನು ಮಾರ್ಚ್ 14 ರಂದು ಎಕ್ಸ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈವರೆಗೆ 72 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಕೆಲವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. “ಇಂತಹ ಪ್ರಕರಣಗಳು ಬೆಂಗಳೂರಿನಾದ್ಯಂತ ಕಾರ್ಯನಿರ್ವಹಿಸುತ್ತಿವೆ. ಹುಷಾರಾಗಿರಿ ಮತ್ತು ದೂರವಿರಿ” ಎಂದು ವ್ಯಕ್ತಿಯೊಬ್ಬರು ಪೋಸ್ಟ್ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾನೆ.

Thirdeye ಎಕ್ಸ್ ಪೋಸ್ಟ್

ಇದೇ ಸ್ಕೂಟರ್ ಮತ್ತು ಅದೇ ರೀತಿ ಕಾಣುವ ವ್ಯಕ್ತಿ ಅದೇ ಚಂದಾಪುರ ಜಂಕ್ಷನ್‌ನಲ್ಲಿ ನನ್ನ ಕಾರಿಗೆ ಡಿಕ್ಕಿ ಹೊಡೆದ್ದಾಗಿ ನೆಟ್ಟಿಗರೊಬ್ಬರು ಕಾಮೆಂಟ್ ಮಾಡಿದ್ದಾರೆ. ಇಂತಹ ಘಟನೆ ನಿಲ್ಲದಿರುವುದು ಬೇಸರ ತಂದಿದೆ. ಎಸ್ಪಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದಯವಿಟ್ಟು ಕ್ರಮ ಕೈಗೊಳ್ಳಿ,” ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ