AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಚಂದಾಪುರ ಜಂಕ್ಷನ್ ಬಳಿ ಅಪಾಯಕಾರಿ ವ್ಹೀಲಿಂಗ್; ವಿಡಿಯೋ ವೈರಲ್

ಬೆಂಗಳೂರು ನಗರದಲ್ಲಿ ದ್ವಿಚಕ್ರ ವಾಹನ ಸವಾರರು ವ್ಹೀಲಿಂಗ್ ಮಾಡುತ್ತಿರುವ ಪ್ರಕರಣ ಅಲ್ಲೊಂದು ಇಲ್ಲೊಂದು ನಡೆಯುತ್ತಲೇ ಇದೆ. ಪೊಲೀಸರು ಎಷ್ಟೇ ಕ್ರಮ ಕೈಗೊಂಡರೂ ವ್ಹೀಲಿಂಗ್ ಪ್ರಕರಣಕ್ಕೆ ಯುವಕ ಹುಚ್ಚಾಟಕ್ಕೆ ಲಗಾಮು ಹಾಕಲು ಆಗುತ್ತಿಲ್ಲ. ಇದೀಗ, ಹೊಸೂರು ಹೆದ್ದಾರಿಯ ಚಂದಾಪುರ ಜಂಕ್ಷನ್ ಯುವಕನೊಬ್ಬ ಮಾಡಿದ ಅಪಾಯಕಾರಿ ದ್ವಿಚಕ್ರ ವಾಹನದ ವ್ಹೀಲಿಂಗ್ ವಿಡಿಯೋ ವೈರಲ್ ಆಗುತ್ತಿದೆ.

ಬೆಂಗಳೂರು: ಚಂದಾಪುರ ಜಂಕ್ಷನ್ ಬಳಿ ಅಪಾಯಕಾರಿ ವ್ಹೀಲಿಂಗ್; ವಿಡಿಯೋ ವೈರಲ್
ಬೆಂಗಳೂರು: ಚಂದಾಪುರ ಜಂಕ್ಷನ್ ಬಳಿ ಅಪಾಯಕಾರಿ ವ್ಹೀಲಿಂಗ್; ವಿಡಿಯೋ ವೈರಲ್
TV9 Web
| Edited By: |

Updated on: Mar 15, 2024 | 11:13 AM

Share

ಬೆಂಗಳೂರು, ಮಾ.15: ನಗರದಲ್ಲಿ (Bengaluru) ದ್ವಿಚಕ್ರ ವಾಹನ ಸವಾರರು ವ್ಹೀಲಿಂಗ್ (Wheeling) ಮಾಡುತ್ತಿರುವ ಪ್ರಕರಣ ಅಲ್ಲೊಂದು ಇಲ್ಲೊಂದು ನಡೆಯುತ್ತಲೇ ಇದೆ. ಪೊಲೀಸರು ಎಷ್ಟೇ ಕ್ರಮ ಕೈಗೊಂಡರೂ ವ್ಹೀಲಿಂಗ್ ಪ್ರಕರಣಕ್ಕೆ ಯುವಕ ಹುಚ್ಚಾಟಕ್ಕೆ ಲಗಾಮು ಹಾಕಲು ಆಗುತ್ತಿಲ್ಲ. ಇದೀಗ, ಹೊಸೂರು ಹೆದ್ದಾರಿಯ ಚಂದಾಪುರ ಜಂಕ್ಷನ್ ಯುವಕನೊಬ್ಬ ಮಾಡಿದ ಅಪಾಯಕಾರಿ ದ್ವಿಚಕ್ರ ವಾಹನದ ವ್ಹೀಲಿಂಗ್ ವಿಡಿಯೋ ವೈರಲ್ ಆಗುತ್ತಿದೆ.

ಹೊಸೂರು ರಾಷ್ಟ್ರೀಯ ಹೆದ್ದಾರಿಯ ಚಂದಾಪುರ ಜಂಕ್ಷನ್ ಬಳಿ ಮಾರ್ಚ್ 13 ರಂದು ಬೆಳಿಗ್ಗೆ 9:50 ರ ಸುಮಾರಿಗೆ ಈ ಅಪಾಯಕಾರಿ ವ್ಹೀಲಿಂಗ್ ನಡೆಸಲಾಗಿದೆ. ವ್ಹೀಲಿಂಗ್​ಗಾಗಿ ಸವಾರನು ನಂಬರ್ ಪ್ಲೇಟ್ ಇಲ್ಲದ ದ್ವಿಚಕ್ರ ವಾಹನ ಬಳಕೆ ಮಾಡಿದ್ದಾನೆ. ವ್ಹೀಲಿಂಗ್ ವೇಳೆ ಆತನ ಇತರೆ ಸ್ನೇಹಿತರು ಬೈಕ್ ಮೂಲಕ ಹಿಂಬಾಲಿಸಿ ವಿಡಿಯೋ ಚಿತ್ರೀಕರಿಸಿದ್ದಾರೆ. ಇದರ ದೃಶ್ಯವನ್ನು ಸಾರ್ವಜನಿಕರೊಬ್ಬರು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ.

ಬಳಿಕ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಟ್ಯಾಗ್ ಮಾಡಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಪೊಲೀಸರು, ಈ ಪ್ರಕರಣ ಗಮನಿಸುವಂತೆ ಬೆಂಗಳೂರು ಗ್ರಾಮಾಂತರದ ಎಸ್​ಪಿಗೆ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಹೆದ್ದಾರಿಯಲ್ಲಿ ವೀಲಿಂಗ್ ಮಾಡ್ತಿದ್ದ 6ಜನ ಪುಂಡರ ಬಂಧನ; 13 ಬೈಕ್ ಜಪ್ತಿ

ವೀಡಿಯೊವನ್ನು ಮಾರ್ಚ್ 14 ರಂದು ಎಕ್ಸ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈವರೆಗೆ 72 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಕೆಲವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. “ಇಂತಹ ಪ್ರಕರಣಗಳು ಬೆಂಗಳೂರಿನಾದ್ಯಂತ ಕಾರ್ಯನಿರ್ವಹಿಸುತ್ತಿವೆ. ಹುಷಾರಾಗಿರಿ ಮತ್ತು ದೂರವಿರಿ” ಎಂದು ವ್ಯಕ್ತಿಯೊಬ್ಬರು ಪೋಸ್ಟ್ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾನೆ.

Thirdeye ಎಕ್ಸ್ ಪೋಸ್ಟ್

ಇದೇ ಸ್ಕೂಟರ್ ಮತ್ತು ಅದೇ ರೀತಿ ಕಾಣುವ ವ್ಯಕ್ತಿ ಅದೇ ಚಂದಾಪುರ ಜಂಕ್ಷನ್‌ನಲ್ಲಿ ನನ್ನ ಕಾರಿಗೆ ಡಿಕ್ಕಿ ಹೊಡೆದ್ದಾಗಿ ನೆಟ್ಟಿಗರೊಬ್ಬರು ಕಾಮೆಂಟ್ ಮಾಡಿದ್ದಾರೆ. ಇಂತಹ ಘಟನೆ ನಿಲ್ಲದಿರುವುದು ಬೇಸರ ತಂದಿದೆ. ಎಸ್ಪಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದಯವಿಟ್ಟು ಕ್ರಮ ಕೈಗೊಳ್ಳಿ,” ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ