AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲಗಾರರ ಕಾಟಕ್ಕೆ ಒಂದೇ ಕುಟುಂಬದ ಇಬ್ಬರು ಬಲಿ: ಮತ್ತೆರಡು ಮಂದಿ ಸ್ಥಿತಿ ಗಂಭೀರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್‌ನ ಮಲ್ಲೇನಹಳ್ಳಿಯಲ್ಲಿ ಸಾಲಬಾಧೆಯಿಂದ ದಾರುಣ ಘಟನೆ ನಡೆದಿದೆ. ಚೀಟಿ ವ್ಯವಹಾರದ ಸಾಲ ಮತ್ತು ದುಂದು ವೆಚ್ಚದಿಂದ ಬೇಸತ್ತ ವ್ಯಕ್ತಿಯೋರ್ವ ತಾಯಿ, ಅಕ್ಕ ಮತ್ತು ಅಕ್ಕನ ಮಗನ ಕತ್ತು ಸೀಳಿ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ಘಟನೆಯಲ್ಲಿ ತಾಯಿ ಮತ್ತು ಅಕ್ಕ ಮೃತಪಟ್ಟಿದ್ದು, ಯುವಕ ಮತ್ತು ಬಾಲಕ ಗಂಭೀರ ಸ್ಥಿತಿಯಲ್ಲಿದ್ದಾರೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಾಲಗಾರರ ಕಾಟಕ್ಕೆ ಒಂದೇ ಕುಟುಂಬದ ಇಬ್ಬರು ಬಲಿ: ಮತ್ತೆರಡು ಮಂದಿ ಸ್ಥಿತಿ ಗಂಭೀರ
ಮೃತರುImage Credit source: Tv9 Kannada
ರಾಮು, ಆನೇಕಲ್​
| Edited By: |

Updated on:Mar 29, 2026 | 7:01 AM

Share

ಆನೇಕಲ್​​, ಮಾರ್ಚ್​​ 29: ಸಾಲಗಾರರ ಕಾಟಕ್ಕೆ ಒಂದೇ ಕುಟುಂಬದ ಇಬ್ಬರು ಮೃತಪಟ್ಟಿರುವ ಆಘಾತಕಾರಿ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ. ವ್ಯಕ್ತಿಯೋರ್ವ ತಾಯಿ, ಅಕ್ಕ ಮತ್ತು ಅಕ್ಕನ ಮಗನ ಕತ್ತು ಸೀಳಿ, ಬಳಿಕ ತಾನೂ ಆತ್ಮಹತ್ಯೆಗೆ ಮುಂದಾಗಿದ್ದಾನೆ. ಘಟನೆಯಲ್ಲಿ ತಾಯಿ ಮತ್ತು ಅಕ್ಕ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದರೆ, ಬಾಲಕ ಸೇರಿ ಇಬ್ಬರಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ತಾಯಿ ಆಶಾ(55), ಅಕ್ಕ ವರ್ಷಿತಾ(34) ಮೃತರಾಗಿದ್ದು, ಮೋಹನ್ ಗೌಡ(27), ಅಕ್ಕನ ಮಗ ಮಯಾಂಕ್(11) ಸ್ಥಿತಿ ಗಂಭೀರವಾಗಿದೆ.

ಸಾಲಗಾರರ ಕಾಟದಿಂದ ಮೋಹನ್​​ ಗೌಡ ತೀವ್ರವಾಗಿ ಬೇಸತ್ತಿದ್ದರು. ಈ ಸಂಬಂಧ ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ವಿಡಿಯೋ ಮಾಡಿದ್ದ ಮೋಹನ್, ಅದನ್ನು ತನ್ನ ಸಂಬಂಧಿಕರಿಗೆ ಕೂಡ ಕಳುಹಿಸಿದ್ದರು. ವಿಡಿಯೋ ನೋಡಿ ಆತಂಕಗೊಂಡ ಸಂಬಂಧಿಕರು ಮನೆ ಬಳಿ ಬಂದಿದ್ದಾರೆ. ಈ ವೇಳೆ ಡೋರ್​​ ಲಾಕ್​​ ಆಗಿರೋದು ಕಂಡುಬಂದಿದ್ದು, ಬಾಗಿಲನ್ನು ಒಡೆದು ಒಳ ಹೋಗಿ ನೋಡಿದಾಗ ಎರಡು ಮೃತ ದೇಹಗಳು ಪತ್ತೆಯಾಗಿವೆ. ಜೊತೆಗೆ ಮೋಹನ್​​ ಮತ್ತು ಮಯಾಂಕ್ ನೆಲದ ನೇಲೆ ಒದ್ದಾಡುತ್ತಿರುವುದನ್ನು ಕಂಡ ಸಂಬಂಧಿಕರು ಕೂಡಲೇ ಅವರಿಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇವರಿಬ್ಬರಿಗೂ ಸದ್ಯ ಚಿಕಿತ್ಸೆ ಮುಂದುವರಿದಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅತ್ತಿಬೆಲೆ ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೈಸೂರಿನಲ್ಲಿ 12 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ! ಇಬ್ಬರು ಆರೋಪಿಗಳು ಅಂದರ್

ಇನ್ನು ಘಟನೆ ಬಗ್ಗೆ ಬೆಂಗಳೂರು ಗ್ರಾಮಾಂತರ ಎಸ್ಪಿ ಚಂದ್ರಕಾತ್ ಮಾಹಿತಿ ನೀಡಿದ್ದು, ರಾತ್ತಿ 10:30ರ ಸುಮಾರಿಗೆ ಆತ್ಮಹತ್ಯೆ ಯತ್ನದ ಬಗ್ಗೆ ಮಾಹಿತಿ ಸಿಕ್ಕಿದೆ. ಕೂಡಲೇ ಅತ್ತಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಅತಿಯಾದ ಸಾಲ ಘಟನೆಗೆ ಕಾರಣ ಎಂಬುದು ಗೊತ್ತಾಗಿದೆ. ಗಾಯಾಳು ಮೋಹನ್ ಚೀಟಿ ವ್ಯವಹಾರದಲ್ಲಿ ಸಾಲ ಮಾಡಿಕೊಂಡಿದ್ದ. ಜೊತೆಗೆ ಐಷಾರಾಮಿ ಜೀವನಕ್ಕೆಂದು ದುಂದು ವೆಚ್ಚ ಮಾಡಿದ್ದು, ಸಾಲ ತೀರಿಸಲಾಗದೆ ಇಡೀ ಕುಟುಂಬ ಆತ್ಮಹತ್ಯೆಗೆ ನಿರ್ಧರಿಸಿದೆ. ಗಾಯಾಳು ಮೋಹನ್ ತಾಯಿ, ಅಕ್ಕ ಮತ್ತು ಅಕ್ಕನ ಮಗನ ಕುತ್ತಿಗೆ ಸೀಳಿ ಬಳಿಕ ತಾನು ಕುತ್ತಿಗೆ ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿರೋದು ಮೇಲ್ನೋಟಕ್ಕೆ ಕಂಡು ಬಂದಿದೆ. ಮುಂದಿನ ತನಿಖೆ ವೇಳೆ ನಿಖರ ಕಾರಣ ತಿಳಿಯಲಿದೆ ಎಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:59 am, Sun, 29 March 26

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ