AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Karaga: ಈ ಬಾರಿಯ ಬೆಂಗಳೂರು ಕರಗ ಶಕ್ತ್ಯೋತ್ಸವ ಚೈತ್ರ ಪೂರ್ಣಿಮೆ ಏಪ್ರಿಲ್ 6 ಕ್ಕೆ

Dharmaraya Swamy Karaga: ಈ ಬಾರಿ ಬೆಂಗಳೂರು ಕರಗ ಶಕ್ತ್ಯೋತ್ಸವ ಚೈತ್ರ ಪೂರ್ಣಿಮೆ ಏಪ್ರಿಲ್ 6 ರಂದು ನಡೆಯಲಿದೆ. ಇದೇ ಮಾರ್ಚ್​​ 29ರಿಂದ ಉತ್ಸವ ಆರಂಭವಾಗಿ, ಏಪ್ರಿಲ್​ 8ರವರೆಗೆ ನಡೆಯಲಿದೆ.

Bangalore Karaga: ಈ ಬಾರಿಯ ಬೆಂಗಳೂರು ಕರಗ ಶಕ್ತ್ಯೋತ್ಸವ ಚೈತ್ರ ಪೂರ್ಣಿಮೆ ಏಪ್ರಿಲ್ 6 ಕ್ಕೆ
ಬೆಂಗಳೂರು ಕರಗ
ವಿವೇಕ ಬಿರಾದಾರ
| Edited By: |

Updated on:Mar 21, 2023 | 12:10 PM

Share

ಬೆಂಗಳೂರು: ಈ ಬಾರಿ ಬೆಂಗಳೂರು (Bengaluru) ಕರಗ ಶಕ್ತ್ಯೋತ್ಸವ (Karaga Shaktyotsava) ಚೈತ್ರ ಪೂರ್ಣಿಮೆ ಏಪ್ರಿಲ್ 6 ರಂದು ನಡೆಯಲಿದೆ. ಇದೇ ಮಾರ್ಚ್​​ 29ರಿಂದ ಉತ್ಸವ ಆರಂಭವಾಗಿ, ಏಪ್ರಿಲ್​ 8ರವರೆಗೆ ನಡೆಯಲಿದೆ. ಬರೋಬ್ಬರಿ 11 ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಧರ್ಮರಾಯಸ್ವಾಮಿ ಕರಗ (Dharmaraya Swamy Karaga) ವಿಜೃಂಭಣೆಯಿಂದ ನಡೆಯಲಿದೆ. ಈ ಬಾರಿಯು ಕರಗವನ್ನು ತಿಗಳ ಸಮುದಾಯದ ಅರ್ಚಕ ವಿ. ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ. ಪೂಜಾರಿ ಜ್ಞಾನೇಂದ್ರ ಅವರು ಕಳೆದ 12 ವರ್ಷಗಳಿಂದ ಕರಗ ಹೊರುತ್ತಿದ್ದಾರೆ. ಕರಗ ರಾತ್ರಿ 12 ಗಂಟೆಗೆ ನಗರ ಪ್ರದಕ್ಷಿಣೆಗೆ ಹೊರಡಲಿದೆ.

ಮಾರ್ಚ್​. 29ರಂದು ಧ್ವಜಾರೋಹಣ ನಡೆಯುತ್ತದೆ. ನಂತರ ಏಪ್ರಿಲ್​ 8ರವರಗೆ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಏಪ್ರಿಲ್​​ 3 ರಂದು ಆರತಿ, ಏಪ್ರಿಲ್​​ 4 ರಂದು ಹಸಿಕರಗ, ಏಪ್ರಿಲ್​ 5 ರಂದು ಪೊಂಗಲ್​, ಮರುದಿನ 6 ರಂದು ಕರಗ ಉತ್ಸವ ನಡೆಯಲಿದೆ. ಇನ್ನು ವೀರಕುಮಾರರು, ತಿಗಳ ಸಮುದಾಯದ ಕೆಲ ಭಕ್ತರು ಕರಗ ನಡೆಯುವ 11 ದಿನಗಳ ಕಾಲ ಉಪವಾಸ ಇರುತ್ತಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮನೆ ಬಾಡಿಗೆ ಬೇಕಂದ್ರೆ ಲಿಂಕ್ಡ್​ಇನ್ ಪ್ರೊಫೈಲ್ ಕೊಡಬೇಕು, ಪೋಸ್ಟ್ ವೈರಲ್

ಕರಗದಲ್ಲಿ ಮಲ್ಲಿಗೆ ಹೂವು ಮತ್ತು ಮಹಿಳೆಯರಿಗೆ ಹೆಚ್ಚಿನ ಪ್ರಶಸ್ತ್ಯ ನೀಡಲಾಗುತ್ತದೆ. ಈ ದುಂಡು ಮಲ್ಲಿಗೆಯ ಒತ್ತಾದ ದಂಡೆಗಳನ್ನು ವೀರಕುಮಾರರಿಗೆ ಮುಡಿಯಿಂದ ಹಾಕಲಾಗುತ್ತದೆ. ಜತೆಗೆ ದೇವಾನುದೇವತೆಗಳಿಗೂ ಮಲ್ಲಿಗೆಯನ್ನು ಬಿಟ್ಟು ಬೇರೆ ಹೂವುಗಳನ್ನು ಕರಗದಲ್ಲಿ ಬಳಸುವುದಿಲ್ಲ. ಇನ್ನು, ಇದು ಶಾಕ್ತಪಂಥದ ಆರಾಧನಾ ಕ್ರಮವಾದ್ದರಿಂದ ಶಕ್ತಿ ಸ್ವರೂಪಿಣಿಯಾದ ಸ್ತ್ರೀಗೆ ಹೆಚ್ಚಿನ ಮಹತ್ವ ಕೊಡಲಾಗಿದೆ. ಕರಗದ 11 ದಿನಗಳ ಕಾಲವೂ ಅರ್ಪಿಸಲಾಗುವ ಗಾವನ್ನ, ಪೊಂಗಲ್‌, ನೈವೇದ್ಯ ಇತ್ಯಾದಿಗಳನ್ನೆಲ್ಲವಹ್ನಿಕುಲ ಸಮುದಾಯದ ಹೆಣ್ಣುಮಕ್ಕಳೇ ಶ್ರದ್ಧೆಯಿಂದ ಸಿದ್ಧಪಡಿಸುತ್ತಾರೆ.

ಇಷ್ಟಾರ್ಥಗಳ ಸಿದ್ಧಿಗಾಗಿ ಅಥವಾ ಅಂದುಕೊಂಡದ್ದು ಜರುಗಿದರೆ ದೇವಾಲಯದ ಮುಂದೆ ಕರ್ಪೂರವನ್ನು ಹಚ್ಚುವುದು ಕರಗ ಉತ್ಸವದ ವಿಶೇಷ. ರಥೋತ್ಸವದ ವಿಶೇಷ. ಅದರಂತೆ ಕರಗದ ದಿನ ನೂರಾರು ಭಕ್ತರು ದೇವಾಲಯದ ಆವರಣ ಹಾಗೂ ರಸ್ತೆಯಲ್ಲಿ ಕರ್ಪೂರ ಹಚ್ಚಿ ದೇವರ ಕೃಪೆಗೆ ಪಾತ್ರರಾಗುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:58 am, Tue, 21 March 23

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!