AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ ಅಪ್ರಾಪ್ತೆ ಕೊಲೆಗಾರ ಅಜ್ಮೀರ್​​ನಲ್ಲಿ ಅರೆಸ್ಟ್, ಪ್ರಾಯಶ್ಚಿತಕ್ಕಾಗಿ ದರ್ಗಾ ಮೊರೆ ಹೋಗಿದ್ದ ಹಂತಕ

ಬೆಂಗಳೂರಿನ ಡಿ.ಜೆ. ಹಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯ ಭೀಕರ ಕೊಲೆ ಪ್ರಕರಣ ಸಂಬಂಧ ಭಾವಿ ಪತಿಯ ಕ್ರೂರತೆ ಬಯಲಾಗಿದೆ. ಯುವತಿ ಮೇಲೆ ಅನುಮಾನಗೊಂಡು ಆಕೆಯ ಎದೆ ಭಾಗ ಮತ್ತು ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು, ಕುತ್ತಿಗೆ ಕೊಯ್ದು ಆರೋಪಿ ಹತ್ಯೆಗೈದಿದ್ದ. ಬಳಿಕ ನಾಪತ್ತೆಯಾಗಿದ್ದ ಹಂತಕ ರಾಜಸ್ಥಾನದ ಅಜ್ಮೀರ್ ದರ್ಗಾ ಬಳಿ ಸಿಕ್ಕಿಬಿದ್ದಿದ್ದಾನೆ. ಅಷ್ಟಕ್ಕೂ ಕೊಲೆ ಮಾಡಿ ಅಜ್ಮೀರ್ ದರ್ಗಾಕ್ಕೆ ಹೋಗಿದ್ಯಾಕೆ ಎನ್ನುವುದನ್ನು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ.

ಡಿಜೆ ಹಳ್ಳಿ ಅಪ್ರಾಪ್ತೆ ಕೊಲೆಗಾರ ಅಜ್ಮೀರ್​​ನಲ್ಲಿ ಅರೆಸ್ಟ್, ಪ್ರಾಯಶ್ಚಿತಕ್ಕಾಗಿ ದರ್ಗಾ ಮೊರೆ ಹೋಗಿದ್ದ ಹಂತಕ
ಸೈಯದ್ ಶಬೀಲ್
ರಾಚಪ್ಪಾಜಿ ನಾಯ್ಕ್
| Edited By: |

Updated on: Mar 22, 2026 | 7:51 PM

Share

ಬೆಂಗಳೂರು, (ಮಾರ್ಚ್ 22): ನಗರದ ಡಿ.ಜೆ.ಹಳ್ಳಿ ಸಕ್ಕರೆ ಮಂಡಿಯ ಪಾಳುಮನೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪ್ರಾಪ್ತೆಯನ್ನ ಕೊಲೆ ಮಾಡಿ ಪರಾರಿಯಾಗಿದ್ದ ಭಾವಿ ಪತಿ ಸೈಯದ್ ಶಬೀಲ್ ಸಿಕ್ಕಿಬಿದ್ದಿದ್ದಾನೆ. ಮದುವೆಯಾಗಿಬೇಕಿದ್ದ ಯುವತಿ ಮೇಲಿನ ಅನುಮಾನದಿಂದ ಆಕೆನ್ನು ಕೊಂದಿದ್ದ. ಮಾರ್ಚ್ 17ರಂದು ಆಕೆಯನ್ನು ಭೇಟಿಯ ನೆಪದಲ್ಲಿ ಕರೆದು, ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಮತ್ತು ಕುತ್ತಿಗೆ ಕೊಯ್ದು ಹತ್ಯೆ ಮಾಡಿ ಪರಾರಿಯಾಗಿದ್ದ. ಬಳಿಕ ಪೊಲೀಸರು ಎಲ್ಲಾ ಕಡೆ ಶೋಧ ನಡೆಸಿದ್ದು, ಅಂತಿಮವಾಗಿ ಹಂತಕ ಶಬೀಲ್ ರಾಜಸ್ಥಾನದ ಅಜ್ಮೀರ್ ದರ್ಗಾ ಬಳಿ ಬಲೆಗೆ ಬಿದಿದ್ದಾನೆ. ಕೊಲೆ ಬಳಿಕ ಪಶ್ಚಾತ್ತಾಪಕ್ಕಾಗಿ ಅಜ್ಮೀರ್ ದರ್ಗಾಕ್ಕೆ ಹೋಗಿದ್ದ ಎಂದು ತಿಳಿದುಬಂದಿದೆ.

ಕೊಲೆ ಮಾಡಿ ಬಳಿಕ ತಲೆ ಮರಿಸಿಕೊಂಡಿದ್ದ ಶಬೀಲ್ ನನ್ನು ಅಜ್ಮೀರ್​​​ ನಲ್ಲಿ ಬಂಧಿಸುವಲ್ಲಿ ಡಿ.ಜೆ.ಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ಬಳಿಕ ಪಶ್ಚಾತ್ತಾಪ ಪಟ್ಟು ಅಜ್ಮೀರಗೆ ತೆರಳಿದ್ದು, ದರ್ಗಾದಲ್ಲಿ ಪ್ರಾರ್ಥನೆ ಮಾಡಿ ಪ್ರಾಯಶ್ಚಿತಕ್ಕಾಗಿ ಬೇಡಿಕೊಂಡಿದ್ದ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಇರಿದು ಭೀಕರವಾಗಿ ಕೊಲೆ: ಭಾವಿ ಪತಿ ಅನುಮಾನಕ್ಕೆ ಅಪ್ರಾಪ್ತೆ ಬಲಿ

ಕೋಲಾರ ಮೂಲದ ಅಪ್ರಾಪ್ತ ಬಾಲಕಿ ಆಗಾಗ ಬೆಂಗಳೂರಿನ ಸಂಬಂಧಿಕರ ಮನೆಗೆ ಬರುತ್ತಿದ್ದಳು. ಈ ನಡುವೆ ಡಿಜೆ ಹಳ್ಳಿಯ ಈರುಳ್ಳಿ ಮಾರ್ಕೆಟ್​​ನಲ್ಲಿ ಕೆಲಸ ಮಾಡ್ತಿದ್ದ ಸೈಯದ್ ಶಬೀಲ್ ಎಂಬ ಯುವಕನ ಜೊತೆ ಆಕೆಗೆ ಪ್ರೀತಿ ಶುರುವಾಗಿತ್ತು. ಆಗಾಗ ಫೋನ್​​ನಲ್ಲಿಇವರು ಮಾತಾನಾಡುತ್ತಿರೋದನ್ನು ಗಮನಿಸಿದ ಸಂಬಂಧಿಕರು, ಪೋಷಕರಿಗೆ ವಿಚಾರ ತಿಳಿಸಿದ್ದರು. ಬಳಿಕ ಆಕೆ ಪ್ರೀತಿಸುತ್ತಿದ್ದವನ ಜೊತೆಯೇ ಮದುವೆ ಮಾಡಲು ಮನೆಯವರು ಮುಂದಾಗಿದ್ದರು. ಅದರಂತೆ ಕಳೆದ 2025ರ ಜೂನ್​​ನಲ್ಲಿ ಇವರಿಬ್ಬರ ಎಂಗೇಜ್ಮೆಂಟ್ ಕೂಡ ನಡೆದಿತ್ತು. ಕೆಲ ಸಮಯದ ಬಳಿಕ ಮದುವೆಯ ತಯಾರಿಯಲ್ಲೂ ಮನೆಯವರಿದ್ದರು. ಆದರೆ ಇತ್ತೀಚೆಗೆ ಅಪ್ರಾಪ್ತಳ ಮೇಲೆ ಅನುಮಾನ ಪಟ್ಟಿದ್ದ. ಬಳಿಕ ಇದೇ ಮಾರ್ಚ್ 17ರಂದು ಮಾತನಾಡುವ ನೆಪದಲ್ಲಿ ಡಿ.ಜೆ.ಹಳ್ಳಿ ಸಕ್ಕರೆ ಮಂಡಿಯ ಪಾಳುಮನೆಗೆ ಕರೆದೊಯ್ದು ಆಕೆಯ ಎದೆ ಭಾಗ ಕತ್ತರಿಸಿ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದಿದ್ದ. ಸಾಲದಕ್ಕೆ ಕುತ್ತಿಗೆ ಕೊಯ್ದು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?