AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬಾಂಗ್ಲಾದೇಶಿ ದಂಪತಿ ಮೇಲೆ ಹಲ್ಲೆ: ವೈದ್ಯನ ಬಂಧನ

ಬೆಂಗಳೂರಿನ ಬೆಳ್ಳಂದೂರಿನಲ್ಲಿ ವಾಸವಾಗಿದ್ದ ಬಾಂಗ್ಲಾದೇಶಿ ದಂಪತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸ್ಥಳೀಯ ಸಾಯಿ ಕ್ಲಿನಿಕ್ ವೈದ್ಯ ಡಾ. ನಾಗೇಂದ್ರ ಅವರನ್ನು ಪೊಲೀಸರು ಬಂಧಿಸಿದ್ದಾರೆ. ವೈಟ್‌ಫೀಲ್ಡ್ ಭಾಗದಲ್ಲಿ ಅಕ್ರಮ ವಲಸಿಗರಿದ್ದರೆ ಕಾನೂನು ಕೈಗೆತ್ತಿಕೊಳ್ಳುವ ಬದಲು ಪೊಲೀಸರಿಗೆ ಮಾಹಿತಿ ನೀಡಬೇಕಿತ್ತು ಎಂದು ಬೆಳ್ಳಂದೂರು ಪೊಲೀಸರು ತಿಳಿಸಿದ್ದು, ಸದ್ಯ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಬಾಂಗ್ಲಾದೇಶಿ ದಂಪತಿ ಮೇಲೆ ಹಲ್ಲೆ: ವೈದ್ಯನ ಬಂಧನ
ಸಾಂದರ್ಭಿಕ ಚಿತ್ರImage Credit source: gettyimages.com
ಭಾವನಾ ಹೆಗಡೆ
|

Updated on: Jul 26, 2026 | 1:47 PM

Share

ಮುಖ್ಯಾಂಶಗಳು

  • ಬಾಂಗ್ಲಾದೇಶಿ ದಂಪತಿಯ ಮೇಲೆ ಹಲ್ಲೆ ನಡೆಸಿದ ಬೆಂಗಾಳೂರು ವೈದ್ಯನ ಬಂಧನ.
  • ಪೌರತ್ವದ ವಿಷಯವಾಗಿ ಗಲಾಟೆ ತೆಗೆದು ಹಲ್ಲೆ ನಡೆಸಿದ ಡಾ. ನಾಗೇಂದ್ರ.
  • ಕಾನೂನು ಕೈಗೆತ್ತಿಕೊಳ್ಳದೆ ಪೊಲೀಸರಿಗೆ ದೂರು ನೀಡಬೇಕಿತ್ತೆಂದು ತಿಳಿಸಿದ ತನಿಖಾಧಿಕಾರಿಗಳು.

ಬೆಂಗಳೂರು, ಜುಲೈ 26: ಬೆಳ್ಳಂದೂರಿನಲ್ಲಿ ವಾಸಿಸುತ್ತಿದ್ದ ಬಾಂಗ್ಲಾದೇಶಿ ದಂಪತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸ್ಥಳೀಯ ವೈದ್ಯರೊಬ್ಬರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಸಾಯಿ ಕ್ಲಿನಿಕ್‌ನ ಡಾ. ನಾಗೇಂದ್ರ ಬಂಧಿತ ವೈದ್ಯ. ವೈಟ್ ಫೀಲ್ಡ್ ಸಮೀಪದ ಬೆಟ್ಟದಾಸಪುರದಲ್ಲಿ ವಾಸವಾಗಿರುವ ಬಾಂಗ್ಲಾದೇಶ ಮೂಲದ ನಸ್ರೀನಾ ಬಿಲಾಲ್ (23) ಎಂಬ ಮಹಿಳೆ ನೀಡಿದ ದೂರಿನನ್ವಯ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ನಡೆದಿದ್ದೇನು?

ನಸ್ರೀನಾ ಬಿಲಾಲ್ ಹಾಗೂ ಅವರ ಪತಿ ಮಹಮ್ಮದ್ ಬಿಲಾಲ್ (ಚಾಲಕ) ಅವರು ಬಾಂಗ್ಲಾದೇಶದ ನಿವಾಸಿಗಳು ಎಂಬ ಕಾರಣಕ್ಕೆ ಡಾ. ನಾಗೇಂದ್ರ ಅವರು ದಂಪತಿಯ ಪೌರತ್ವವನ್ನು ಪ್ರಶ್ನಿಸಿ ಜಗಳ ತೆಗೆದಿದ್ದಾರೆ. ಮಾತಿಗೆ ಮಾತು ಬೆಳೆದು ಆಕ್ರೋಶಗೊಂಡ ವೈದ್ಯ ನಾಗೇಂದ್ರ ದಂಪತಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೂರಿನ ಆಧಾರದ ಮೇಲೆ ಬೆಳ್ಳಂದೂರು ಪೊಲೀಸರು ಡಾ. ನಾಗೇಂದ್ರ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಅಧಿಕಾರಿಗಳು ಹೇಳಿದ್ದೇನು?

ಸಂತ್ರಸ್ತರು ಬಾಂಗ್ಲಾದೇಶಿ ಮೂಲದವರಾಗಿದ್ದು, ಪ್ರದೇಶದಲ್ಲಿ ಅಕ್ರಮ ವಲಸಿಗರು ಹೆಚ್ಚಾಗಿದ್ದಾರೆಂಬ ಭಾವೋದ್ವೇಗದಿಂದ ವೈದ್ಯರು ಈ ರೀತಿ ವರ್ತಿಸಿದ್ದಾರೆ ಎಂದು ತಿಳಿದುಬಂದಿದೆ. “ದಂಪತಿ ಬಾಂಗ್ಲಾದೇಶದವರಾಗಿದ್ದರೂ ಅವರ ಮೇಲೆ ಹಲ್ಲೆ ನಡೆಸುವುದು ಸರಿಯಲ್ಲ, ವೈದ್ಯರು ಕಾನೂನನ್ನು ಕೈಗೆ ತೆಗೆದುಕೊಳ್ಳುವ ಬದಲು ನಮಗೆ ಮಾಹಿತಿ ನೀಡಬೇಕಿತ್ತು” ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಈ ದಂಪತಿಯ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನೋಡೋಕೆ ಸಮಾಜ ಸೇವೆ: ಆ್ಯಂಬುಲೆನ್ಸ್​ನಲ್ಲಿ ನಡೀತಿದ್ದಿದ್ದು ಡ್ರಗ್ಸ್ ದಂಧೆ!
ನೋಡೋಕೆ ಸಮಾಜ ಸೇವೆ: ಆ್ಯಂಬುಲೆನ್ಸ್​ನಲ್ಲಿ ನಡೀತಿದ್ದಿದ್ದು ಡ್ರಗ್ಸ್ ದಂಧೆ!
ಮಳೆ ಕೊರತೆ: ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ
ಮಳೆ ಕೊರತೆ: ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ
ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!
ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ