Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕರು ವಾರಕ್ಕೆ 70 ಗಂಟೆ ಕೆಲಸ ಮಾಡಿ ಎಂಬ ನಾರಾಯಣ ಮೂರ್ತಿ ಹೇಳಿಕೆಗೆ ಹೃದ್ರೋಗ ತಜ್ಞನ ವಿರೋಧ

ಭಾರತದಲ್ಲಿ ಯುವಕರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂಬ ಇನ್ಫೋಸಿಸ್​ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿಕೆಗೆ ಬೆಂಗಳೂರು ಮೂಲದ ಹೃದ್ರೋಗ ತಜ್ಞ ದೀಪಕ್ ಕೃಷ್ಣಮೂರ್ತಿ ಅವರು ವಿರೋಧ ವ್ಯಕ್ತಪಡಿಸಿ ಎಕ್ಸ್​ (ಹಿಂದಿನ ಟ್ವಿಟರ್​​) ಅಕೌಂಟ್​​​​ನಲ್ಲಿ ಪೋಸ್ಟ್​​​ ಹಾಕಿದ್ದಾರೆ.

ಯುವಕರು ವಾರಕ್ಕೆ 70 ಗಂಟೆ ಕೆಲಸ ಮಾಡಿ ಎಂಬ ನಾರಾಯಣ ಮೂರ್ತಿ ಹೇಳಿಕೆಗೆ ಹೃದ್ರೋಗ ತಜ್ಞನ ವಿರೋಧ
ಎನ್ ಆರ್ ನಾರಾಯಣಮೂರ್ತಿ
Follow us
ವಿವೇಕ ಬಿರಾದಾರ
|

Updated on: Oct 29, 2023 | 12:23 PM

ಬೆಂಗಳೂರು ಅ.29: ಭಾರತದಲ್ಲಿ ಯುವಕರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂಬ ಇನ್ಫೋಸಿಸ್ (Infosys)​ ಸಹ ಸಂಸ್ಥಾಪಕ ನಾರಾಯಣ ಮೂರ್ತಿ (Narayan Murthy) ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ (Social Media) ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ನಾರಾಯಣ ಮೂರ್ತಿ ಅವರ ಅಭಿಪ್ರಾಯಕ್ಕೆ ಕೆಲವರು ಬೆಂಬಲ ಸೂಚಿಸಿದರೇ ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರು ಮೂಲದ ಹೃದ್ರೋಗ ತಜ್ಞ ದೀಪಕ್ ಕೃಷ್ಣಮೂರ್ತಿ, ಯುವಕರು ಹೆಚ್ಚು ಗಂಟೆಗಳ ಕಾಲ ಕೆಲಸ ಮಾಡುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಎಕ್ಸ್​ (ಹಿಂದಿನ ಟ್ವಿಟರ್​​) ಅಕೌಂಟ್​​​​ನಲ್ಲಿ ಪೋಸ್ಟ್​​​ ಹಾಕಿದ್ದಾರೆ.

ದೀರ್ಘಾವಧಿಯ ಕೆಲಸವು ಯುವಜನರಲ್ಲಿ ಹೃದಯಾಘಾತಕ್ಕೆ ಕಾರಣವಾಗಬಹುದು. ಇದು ಸಾಮಾನ್ಯ ಸಂಗತಿಯಾಗಿದೆ. ವಾರಕ್ಕೆ 70 ಗಂಟೆ ಕೆಲಸವನ್ನು ದಿನದ ಲೆಕ್ಕದಲ್ಲಿ ನೋಡುವುವುದಾರೇ, ದಿನದ 24 ಗಂಟೆಗಳು, ನೀವು ವಾರದಲ್ಲಿ 6 ದಿನ 12 ಗಂಟೆ ಕೆಲಸ ಮಾಡುತ್ತೀರಿ. ಉಳಿದ 12 ಗಂಟೆಯಲ್ಲಿ 8 ಗಂಟೆ ನಿದ್ದೆ ಮಾಡುತ್ತೀರಿ. ಉಳಿದಿದ್ದು 4 ಗಂಟೆಗಳು ಮಾತ್ರ.

ಬೆಂಗಳೂರಿನಂತಹ ನಗರದಲ್ಲಿ ಟ್ರಾಫಿಕ್​ನಲ್ಲಿ 2 ಗಂಟೆ ಕಳೆಯುತ್ತದೆ. ಉಳಿದಿದ್ದು 2 ಗಂಟೆ ಇದು ಹಲ್ಲುಜ್ಜಲು, ಮಲ, ಸ್ನಾನ, ಆಹಾರ ಸೇವಿಸಲು ಹೋಗುತ್ತದೆ. ಇಷ್ಟಾದ ಮೇಲೆ ಸ್ನೇಹಿತರೊಂದಿಗೆ, ಕುಟುಂಬದೊಂದಿಗೆ ಮಾತನಾಡಲು ಸಮಯವಿಲ್ಲ, ವ್ಯಾಯಾಮ ಮಾಡಲು ಸಮಯವಿಲ್ಲ, ಮನರಂಜನೆಗೆ ಸಮಯವಿಲ್ಲ. ಕೆಲಸದ ಸಮಯದ ನಂತರವೂ ಜನರು ಇಮೇಲ್‌ಗಳು ಮತ್ತು ಕರೆಗಳಿಗೆ ಉತ್ತರಿಸಬೇಕೆಂದು ಕಂಪನಿಗಳು ನಿರೀಕ್ಷಿಸುತ್ತವೆ ಎಂಬುವುದು ಇಲ್ಲಿ ಮರೆಯುವಹಾಗಿಲ್ಲ.

ಇದನ್ನೂ ಓದಿ: ಮೋದಿ ಪ್ರತಿದಿನ 16 ಗಂಟೆ ಕೆಲಸ ಮಾಡುತ್ತಾರೆ, ನಾರಾಯಣ ಮೂರ್ತಿ ಹೇಳಿಕೆ ಬೆಂಬಲಸಿದ ಸಜ್ಜನ್ ಜಿಂದಾಲ್

ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದಾದರೇ ಮದುವೆಯಾಗಬೇಡಿ, ಮಕ್ಕಳು ಬೇಡ. ಕೆಲಸ ಹೊರತು ಬೇರೆಯಾವುದರ ಬಗ್ಗೆಯೂ ಯೋಚಿಸಬೇಡಿ. ಈಗಾಗಲೆ ಕಂಪನಿಗೋಸ್ಕರ ದಿನಕ್ಕೆ 12 ಗಂಟೆಗಳ ಕಾಲ ಕೆಲಸ ಮಾಡಿದರೇ ಮಾಲಿಕನಿಗೆ ಮಿಲಿಯನ್​ಗಟ್ಟಲೆ ಆದಾಯ ಬರುತ್ತದೆ. ಕೆಲಸಗಾರನಿಗೆ ಕಡಲೆಕಾಯಿ ಸಿಪ್ಪೆ ಎಂದು ವ್ಯಂಗ್ಯವಾಡಿದ್ದಾರೆ.

ವೇಗವಾಗಿ ಬೆಳೆಯುತ್ತಿರುವ ಚೀನಾ ಮತ್ತು ಜಪಾನ್‌ ದೇಶಗಳೊಂದಿಗೆ ನಾವು ಸ್ಪರ್ಧಿಸಬೇಕೆಂದರೇ ನಾವು ನಮ್ಮ ಕೆಲಸದ ಅವಧಿಯನ್ನು ಹೆಚ್ಚಿಸಿಕೊಳ್ಳಬೇಕು. ಭಾರತದಲ್ಲಿ ಕೆಲಸ ಮಾಡುವ ಸಮಯ ತುಂಬಾ ಕಡಿಮೆಯಾಗಿದೆ. “ನಮ್ಮ ಯುವಕರು ವಾರಕ್ಕೆ ಕನಿಷ್ಠ 70 ಗಂಟೆಗಳ ಕಾಲ ಕೆಲಸ ಮಾಡಿದರೇ ವೇಗವಾಗಿ ಅಭಿವೃದ್ಧಿ ಹೊಂದಬಹುದು” ಎಂದು ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನ್‌ದಾಸ್ ಪೈ ಅವರೊಂದಿಗಿನ ಯೂಟ್ಯೂಬ್ ಪಾಡ್‌ಕಾಸ್ಟ್‌ನಲ್ಲಿ ನಾರಾಯಣ ಮೂರ್ತಿ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ