AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನಿ ದಾನಕ್ಕೆ ಮನವಿ ಮಾಡಿದ್ದ ವೈದ್ಯೆಗೆ ಹೈಕೋರ್ಟ್​ ಗ್ರೀನ್ ಸಿಗ್ನಲ್

ಬೆಂಗಳೂರಿನ ವೈದ್ಯೆಯೊಬ್ಬರು ಯಾವುದೇ ಪ್ರತಿಫಲ ಬಯಸದೆ ಕಿಡ್ನಿ ದಾನ ಮಾಡಲು ಮುಂದಾಗಿದ್ದರು, ಆದರೆ ಆಸ್ಪತ್ರೆ ಅವಕಾಶ ನೀಡಿರಲಿಲ್ಲ. ಈ ಅಪರೂಪದ ಪ್ರಕರಣವನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ವೈದ್ಯೆಯ ಮನವಿಯನ್ನು ಪುರಸ್ಕರಿಸಿದೆ. ಅಂಗಾಂಗ ಕಸಿ ಸಮಿತಿಗೆ ಅರ್ಹ ರೋಗಿಗಳನ್ನು ಪರಿಶೀಲಿಸಿ, ವೈದ್ಯೆಯ ದಾನವನ್ನು ಸ್ವೀಕರಿಸಲು ಸೂಚಿಸಿದೆ.

ಕಿಡ್ನಿ ದಾನಕ್ಕೆ ಮನವಿ ಮಾಡಿದ್ದ ವೈದ್ಯೆಗೆ ಹೈಕೋರ್ಟ್​ ಗ್ರೀನ್ ಸಿಗ್ನಲ್
ಸಾಂದರ್ಭಿಕ ಚಿತ್ರ
Ramesha M
| Updated By: ಅಕ್ಷಯ್​ ಪಲ್ಲಮಜಲು​​|

Updated on: Dec 16, 2025 | 4:10 PM

Share

ಬೆಂಗಳೂರು,ಡಿ.16: ವೈದ್ಯರೊಬ್ಬರು ಕಿಡ್ನಿ ದಾನ ಮಾಡಲು ಆಸ್ಪತ್ರೆಯೊಂದು ಅವಕಾಶ ನೀಡಿಲ್ಲ ಎಂದು ಹೈಕೋರ್ಟ್ ( Karnataka High Court)​​​ ಮೆಟ್ಟಿಲೇರಿದ್ದರು. ಇದೊಂದು ಅಪರೂಪ ಪ್ರಕರಣವಾಗಿದ್ದು, ಇದೀಗ ಕೋರ್ಟ್​ ಅವರಿಗೆ ಕಿಡ್ನಿ ದಾನ ಮಾಡಲು ಅವಕಾಶ ನೀಡಿದೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ವೈದ್ಯೆಯ ಮನವಿಯನ್ನು ಕರ್ನಾಟಕ ಹೈಕೋರ್ಟ್​​ ಪುರಸ್ಕರಿ, ದಾನಕ್ಕೆ ಅರ್ಹತೆಯನ್ನು ಪಡೆದಿದ್ದಾರೆ ಅವಕಾಶ ನೀಡಿ ಎಂದು ಹೇಳಿದೆ. ನ್ಯಾ.ಸೂರಜ್ ಗೋವಿಂದರಾಜ್ ಅವರ ಹೈಕೋರ್ಟ್​​ ಪೀಠ ಈ ಸೂಚನೆಯನ್ನು ನೀಡಿದೆ. ಆಸ್ಪತ್ರೆ ಕೆಲವು ಕಾರಣಗಳನ್ನು ನೀಡಿ, ಅವರಿಗೆ ಕಿಡ್ನಿ ದಾನ ಮಾಡಲು ಅವಕಾಶವನ್ನು ನೀಡಿರಲಿಲ್ಲ, ಇದೀಗ ವೈದ್ಯೆಯ ಮನವಿಗೆ ಅವಕಾಶ ನೀಡಿದೆ.

ಯಾವುದೇ ಪರಿಹಾರ ಬಯಸದೇ ಅಂದರೆ ತಾವು ಮಾಡಿದ ದಾನಕ್ಕೆ ಯಾವುದೇ ಪ್ರತಿಫಲ ಇಲ್ಲದೆ, ಉಚಿತವಾಗಿ ದಾನ ಮಾಡಲು ಮುಂದಾಗಿದ್ದರು. ತನ್ನ ಕಿಡ್ನಿಯನ್ನು ಯಾವುದೇ ರೀತಿಯಲ್ಲಿ ಹಣ ಪಡೆಯದೇ ಉಚಿತವಾಗಿ ದಾನ ಮಾಡುವೆ ಎಂಬ ಮನವಿಯನ್ನು ಅಂಗಾಗ ಕಸಿ ಸಮಿತಿ ಒಪ್ಪಿರಲಿಲ್ಲ. ಹೀಗಾಗಿ ವೈದ್ಯೆ ಹೈಕೋರ್ಟ್ ಮೊರೆ ಹೋಗಿದ್ದರು. 58 ವರ್ಷದ ಈ ವೈದ್ಯೆ ತನ್ನ ಕಿಡ್ನಿಗೆ ಸರಿಹೊಂದುವ ಮಣಿಪಾಲ್ ಆಸ್ಪತ್ರೆಯ ರೋಗಿಗೆ ದಾನ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಇದಕ್ಕೆ ಅಂಗಾಗ ಕಸಿ ಸಮಿತಿ ಒಪ್ಪಿಗೆ ನೀಡರಲಿಲ್ಲ.

ಇದನ್ನೂ ಓದಿ: “ನಮಗೆ ಹೊಸ ಸೇತುವೆ ಬೇಕು”: 30 ವರ್ಷಗಳಿಂದ ಮನವಿ, ಕ್ಯಾರೆ ಎನ್ನದ ಅಧಿಕಾರಿಗಳು

ಇದೀಗ ಹೈಕೋರ್ಟ್​​​ ವೈದ್ಯೆ ಮನವಿ ಮಾಡಿದ ಅರ್ಜಿಯನ್ನು ವಿಚಾರಣೆ ನಡೆಸಿದೆ. ಈ ಬಗ್ಗೆ ಹೈಕೋರ್ಟ್​​​​ ಅಂಗಾಗ ಕಸಿ ಸಮಿತಿಗೆ ಒಂದು ಮಹತ್ವದ ಸೂಚನೆಯನ್ನು ನೀಡಿದೆ. ಕಿಡ್ನಿ ದಾನ ಪಡೆಯಲು ಅರ್ಹರಿದ್ದಾರೆಯೇ ಎಂದು ಮೊದಲು ಪರಿಶೀಲನೆ ನಡೆಸಿ ಎಂದು ಹೇಳಿದೆ. ಇದಕ್ಕೆ ಸಮಿತಿ ಅವರು ವೈದ್ಯೆ ಅರ್ಹತೆಯನ್ನು ಪಡೆದಿದ್ದಾರೆ. ಇದೀಗ ಕಿಡ್ನಿ ಕಸಿ ಮಾಡಲು ಐವರು ರೋಗಿಗಳಿದ್ದಾರೆಂದು ಹೇಳಿದೆ. ಸೂಕ್ತ ತಪಾಸಣೆ ನಡೆಸಿ ಕಿಡ್ನಿ ದಾನ ಪಡೆಯುವ ವ್ಯಕ್ತಿಯನ್ನು ಆಯ್ಕೆ ಮಾಡಿ. ಬಳಿಕ ವೈದ್ಯೆಯ ಅರ್ಜಿಯನ್ನು ಪರಿಗಣಿಸುವಂತೆ ಅಂಗಾಂಗ ಕಸಿ ಸಮಿತಿಗೆ ಹೈಕೋರ್ಟ್​​ ಸೂಚನೆಯನ್ನು ನೀಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ