Pampa Award: 2022-23ನೇ ಸಾಲಿ‌ನ ಪಂಪ ಪ್ರಶಸ್ತಿಗೆ ಡಾ.ಎಸ್.ಆರ್.ರಾಮಸ್ವಾಮಿ ಆಯ್ಕೆ

ಕರ್ನಾಟಕ ಸರ್ಕಾರದಿಂದ ಕೊಡಮಾಡಲ್ಪಡುವ 2022-23ನೇ ಸಾಲಿ‌ನ ಪಂಪ ಪ್ರಶಸ್ತಿಗೆ ಡಾ.ಎಸ್.ಆರ್.ರಾಮಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

Pampa Award: 2022-23ನೇ ಸಾಲಿ‌ನ ಪಂಪ ಪ್ರಶಸ್ತಿಗೆ ಡಾ.ಎಸ್.ಆರ್.ರಾಮಸ್ವಾಮಿ ಆಯ್ಕೆ
ಡಾ.ಎಸ್.ಆರ್.ರಾಮಸ್ವಾಮಿ
Rakesh Nayak Manchi

Updated on: Feb 27, 2023 | 11:12 PM

ಬೆಂಗಳೂರು: ಕರ್ನಾಟಕ ಸರ್ಕಾರದಿಂದ ಕೊಡಮಾಡಲ್ಪಡುವ 2022-23ನೇ ಸಾಲಿ‌ನ ಪಂಪ ಪ್ರಶಸ್ತಿಗೆ (Pampa Award) ಡಾ.ಎಸ್.ಆರ್.ರಾಮಸ್ವಾಮಿ (Dr. S. R. Ramaswamy) ಅವರು ಆಯ್ಕೆಯಾಗಿದ್ದಾರೆ. ಹಿರಿಯ ಪತ್ರಕರ್ತ, ಆರ್​ಎಸ್​ಎಸ್​ ವಿಚಾರವಾದಿಯಾಗಿರುವ ಇವರು 1979 ರಿಂದ 4 ದಶಕಗಳಿಂದ ರಾಷ್ಟ್ರೋತ್ಥಾನ ಪರಿಷತ್ತು ಪ್ರಕಟಿಸುವ ಜನಪ್ರಿಯ ಮಾಸಿಕ ಉತ್ಥಾನದ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಡಾ.ಎಸ್.ಆರ್.ರಾಮಸ್ವಾಮಿ ಅವರು ನಾಲ್ಕು ದಶಕಗಳಿಂದ ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಅವರು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಸುಮಾರು 30 ಪ್ರಮುಖ ಪುಸ್ತಕಗಳ ಲೇಖಕರಾಗಿದ್ದಾರೆ ಮತ್ತು ಸಾಹಿತ್ಯಿಕ, ಸಾಂಸ್ಕೃತಿಕ, ರಾಷ್ಟ್ರೀಯತಾವಾದಿ ಮತ್ತು ಅಭಿವೃದ್ಧಿ ವಿಷಯಗಳ ಕುರಿತು 1,000 ಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದಾರೆ.

Published On - 11:12 pm, Mon, 27 February 23

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us