AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 5.24 ಕೋಟಿ ರೂ ಮೌಲ್ಯದ ಡ್ರಗ್ಸ್, ಗಾಂಜಾ ಜಪ್ತಿ: ಮಹಿಳೆಯರಿಬ್ಬರು ಸೇರಿ 16 ಆರೋಪಿಗಳ ಬಂಧನ

ಇತ್ತೀಚೆಗೆ ಬೆಂಗಳೂರಿನಲ್ಲಿ ಕೋಟ್ಯಂತರ ರೂ ಮೌಲ್ಯದ ಮಾದಕ ವಸ್ತುಗಳನ್ನು ಸಿಸಿಬಿ ಪೊಲೀಸರು ಸೀಜ್ ಮಾಡಿ ಪೆಡ್ಲರ್​ಗಳನ್ನು ಲಾಕ್ ಮಾಡಿದ್ದರು. ಇದೀಗ ನಗದರಲ್ಲಿ ಮತ್ತೆ ಕೋಟ್ಯಂತರ ರೂ ಮೌಲ್ಯದ ಡ್ರಗ್ಸ್ ಮತ್ತು ಗಾಂಜಾ ಜಪ್ತಿ ಮಾಡಿದ್ದು, ಇಬ್ಬರು ಮಹಿಳೆಯರು ಸೇರಿ 16 ಆರೋಪಿಗಳನ್ನು ಬಂಧಿಸಲಾಗಿದೆ.​

ಬೆಂಗಳೂರಿನಲ್ಲಿ 5.24 ಕೋಟಿ ರೂ ಮೌಲ್ಯದ ಡ್ರಗ್ಸ್, ಗಾಂಜಾ ಜಪ್ತಿ: ಮಹಿಳೆಯರಿಬ್ಬರು ಸೇರಿ 16 ಆರೋಪಿಗಳ ಬಂಧನ
ಜಪ್ತಿ ಮಾಡಲಾದ ಡ್ರಗ್ಸ್​Image Credit source: tv9 kannada
ಪ್ರದೀಪ್​ ಚಿಕ್ಕಾಟಿ
| Edited By: |

Updated on: Feb 27, 2026 | 3:16 PM

Share

ಬೆಂಗಳೂರು, ಫೆಬ್ರವರಿ 27: ವಿವಿಧ ಡ್ರಗ್ಸ್ ಪ್ರಕರಣಗಳಲ್ಲಿ (Drugs Case) ಇಬ್ಬರು ಮಹಿಳೆಯರು ಸೇರಿ ಒಟ್ಟು 16 ಪೆಡ್ಲರ್​ಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಹಾಗೂ ನಗರದ ವಿವಿಧ ಠಾಣೆಗಳ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ವಿದೇಶಿ ಪ್ರಜೆಗಳು ಸೇರಿದಂತೆ ಹೊರ ರಾಜ್ಯದ 8 ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಜೊತೆಗೆ ನಗರದಲ್ಲಿ 5.24 ಕೋಟಿ ರೂ ಮೌಲ್ಯದ ಡ್ರಗ್ಸ್, ಮೂರು ಸಾವಿರ ಎಂಡಿಎಂ ಮಾತ್ರೆಗಳು ಮತ್ತು ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

ನೈಜೀರಿಯಾ ಪ್ರಜೆಯ ಡ್ರಗ್ಸ್ ಡಿಲೀಂಗ್​​ಗೆ ಸಾಥ್ ಕೊಡುತ್ತಿದ್ದ ಕಿಲಾಡಿ ಲೇಡಿಯ ಬಂಧನ

ಇನ್ನು ನೈಜೀರಿಯಾ ಪ್ರಜೆಯ ಡ್ರಗ್ಸ್ ಡಿಲೀಂಗ್​​ಗೆ ಸಾಥ್ ಕೊಡುತ್ತಿದ್ದ ಕಿಲಾಡಿ ಲೇಡಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುಭಾಷಿಣಿ ಬಂಧಿತ ಮಹಿಳೆ. ಬಾಗಲೂರು ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಳು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೇರಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 1 ಕೋಟಿ ರೂ ಮೌಲ್ಯದ ಡ್ರಗ್ಸ್ ಸೀಜ್, ಪೆಡ್ಲರ್ ಅರೆಸ್ಟ್

ಬಂಧಿತ ಸುಭಾಷಿಣಿ, ನೈಜೀರಿಯನ್​​ ಪ್ರಜೆಯೊಬ್ಬನ ಜೊತೆ ಸೇರಿ ಡ್ರಗ್ಸ್ ಡಿಲೀಂಗ್​​​ ಮಾಡುತ್ತಿದ್ದಳು. ವಿದೇಶಿ ಪ್ರಜೆ ನೈಜೀರಿಯಾದಿಂದ ಡ್ರಗ್ಸ್​ ತರಿಸಿಕೊಂಡು ಸುಭಾಷಿಣಿ ಮನೆಯಲ್ಲಿ ಶೇಖರಿಸಿಟ್ಟಿದ್ದ. ಆತ ಸೂಚಿಸಿದ್ದ ವಿಳಾಸ, ಗ್ರಾಹಕರಿಗೆ ಸುಭಾಷಿಣಿ ತಲುಪಿಸುತ್ತಿದ್ದಳು.

ವಿದೇಶಿ ಡ್ರಗ್ ಪೆಡ್ಲರ್ ಪರಾರಿ

ಇನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ, ಬಂಧಿತಳಿಂದ 2 ಕೋಟಿ ರೂ ಮೌಲ್ಯದ 300 ಎಕ್ಸ್ ಟೆಸಿ ಮಾತ್ರೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪರಾರಿಯಾಗಿರುವ ವಿದೇಶಿ ಡ್ರಗ್ ಪೆಡ್ಲರ್​ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಏರ್​ಪೋರ್ಟಲ್ಲಿ ಭರ್ಜರಿ ಕಾರ್ಯಾಚರಣೆ: ಬ್ಯಾಂಕಾಕ್, ಹಾಂಕಾಂಗ್​ನಿಂದ ಬರ್ತಿದ್ದ ಅಪಾರ ಪ್ರಮಾಣದ ಡ್ರಗ್ಸ್ ವಶ

ಇನ್ನು ಇತ್ತೀಚೆಗೆ ಬೆಂಗಳೂರಿನಲ್ಲಿ ಕೋಟಿಗಟ್ಟಲೇ ಮಾದಕ ವಸ್ತುಗಳನ್ನು ಸಿಸಿಬಿ ಪೊಲೀಸರು ಸೀಜ್ ಮಾಡಿ ಪೆಡ್ಲರ್​ಗಳನ್ನು ಲಾಕ್​ ಮಾಡಿದ್ದರು. ಬಂಧಿತರಲ್ಲಿ ಬಹುಪಾಲು ನೆರೆ ರಾಜ್ಯದವರು ಸೇರಿ ವಿದೇಶಿಗರನ್ನು ಕಂಬಿಹಿಂದೆ ತಳ್ಳಿದ್ದರು. ಅಮೃತಹಳ್ಳಿ, ಹೆಬ್ಬಗೋಡಿ, ಶೇಷಾದ್ರಿಪುರಂ, ಜೆಬಿ ನಗರ, ಮಹಾಲಕ್ಷ್ಮೀ ಲೇಔಟ್, ಗೋವಿಂದರಾಜ್ ಠಾಣಾ ವ್ಯಾಪ್ತಿಗಳಲ್ಲಿ ಪೆಡ್ಲರ್​ಗಳನ್ನು ಲಾಕ್ ಮಾಡಿ ಬರೋಬ್ಬರಿ 20 ಕೋಟಿ ರೂ ಮೌಲ್ಯದ ವಿವಿಧ ಬಗೆಯ ಮಾದಕ ವಸ್ತುಗಳನ್ನು ಸೀಜ್​ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ