AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆ ಅಂಚೆ ಕಚೇರಿಯಲ್ಲಿ ಡ್ರಗ್ಸ್​​ ಬಾಕ್ಸ್​ ಪತ್ತೆ ಕೇಸ್​: ಸಿಸಿಬಿ ತನಿಖೆಯಲ್ಲಿ ಸ್ಫೋಟಕ ಅಂಶಗಳು ಬಹಿರಂಗ

ಚಾಮರಾಜಪೇಟೆಯ ವಿದೇಶಿ ಅಂಚೆ ಕಚೇರಿಯಲ್ಲಿ ಪತ್ತೆಯಾದ ಮಾದಕ ವಸ್ತು ಪ್ರಕರಣದ ತನಿಖೆ ನಡೆಸಿದ ಸಿಸಿಬಿ ಪೊಲೀಸರು ಹಲವು ಆಘಾತಕಾರಿ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ. ವಿದೇಶದಿಂದ ಬಂದ ಕೊರಿಯರ್‌ಗಳ ಮೇಲೆ ನಕಲಿ ವಿಳಾಸವಿದ್ದು, ಈ ಮೂಲಕ ಮಾದಕ ವಸ್ತುಗಳನ್ನು ಸಾಗಿಸಲಾಗುತ್ತಿತ್ತು. ಪೆಡ್ಲರ್‌ಗಳು ಆನ್‌ಲೈನ್‌ನಲ್ಲಿ ಡ್ರಗ್ಸ್ ಅನ್ನು ಬುಕ್ ಮಾಡಿ, ತಪ್ಪು ವಿಳಾಸ ನೀಡಿ ತಲುಪಿಸಿಕೊಳ್ಳುತ್ತಿದ್ದರು.

ಚಾಮರಾಜಪೇಟೆ ಅಂಚೆ ಕಚೇರಿಯಲ್ಲಿ ಡ್ರಗ್ಸ್​​ ಬಾಕ್ಸ್​ ಪತ್ತೆ ಕೇಸ್​: ಸಿಸಿಬಿ ತನಿಖೆಯಲ್ಲಿ ಸ್ಫೋಟಕ ಅಂಶಗಳು ಬಹಿರಂಗ
ಡ್ರಗ್ಸ್, ಸಿಸಿಬಿ
Jagadisha B
| Edited By: |

Updated on:Dec 08, 2024 | 1:05 PM

Share

ಬೆಂಗಳೂರು, ಡಿಸೆಂಬರ್​ 08: ಚಾಮರಾಜಪೇಟೆ ವಿದೇಶಿ ಅಂಚೆ ಕಚೇರಿಗೆ (Chamrajpet Post Office) ಕೋರಿಯರ್​ ಬಾಕ್ಸ್​ನಲ್ಲಿ ಡ್ರಗ್ಸ್​ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ (CCB) ಪೊಲೀಸರ ತನಿಖೆಯಲ್ಲಿ ಹಲವು ವಿಚಾರಗಳು ಬಹಿರಂಗಗೊಂಡಿವೆ. ವಿದೇಶದಿಂದ ಬಂದ ಡ್ರಗ್ಸ್​​ (Durg) ಕೊರಿಯರ್​​ ಬಾಕ್ಸ್​ಗಳ ಮೇಲಿನ ವಿಳಾಸ ನಕಲಿಯಾಗಿವೆ. ತಪ್ಪಾದ ವಿಳಾಸ ನೀಡಿದರೂ ಕೊರಿಯರ್​ನಲ್ಲಿದ್ದ ಡ್ರಗ್ ಪ್ಯಾಕೇಟ್​ಗಳನ್ನು ಡೀಲರ್​ಗಳು ಹಲವು ಮಾರ್ಗದಲ್ಲಿ ಪಡೆಯುತಿದ್ದರು.

ಪೆಡ್ಲರ್ಸ್​​ಗಳು ಮನೆಯಲ್ಲೇ ಕುಳಿತು ತಪ್ಪಾದ ವಿಳಾಸ ನೀಡಿ ಆನ್​ಲೈನ್​ನಲ್ಲಿ ಡ್ರಗ್ಸ್​ ಬುಕ್ ಮಾಡಿ ಅಂಚೆ ಮೂಲಕ ತರಿಸಿಕೊಳ್ಳುತ್ತಿದ್ದರು. ವಿದೇಶದಿಂದ ಬಂದ ಪ್ಯಾಕೇಟ್​ಗಳು ಕೊರಿಯರ್ ಏಜೆನ್ಸಿಗೆ ತಲುಪುತಿದ್ದವು. ಏಜೆನ್ಸಿಗೆ ತಲುಪಿದ ಕೂಡಲೇ ಪೆಡ್ಲರ್​​ಗೆ ಡೆಲವರಿ ಟ್ರ್ಯಾಕಿಂಗ್​ ಮಾಹಿತಿ ರವಾನಿಸಲಾಗುತ್ತಿತ್ತು. ತಪ್ಪಾದ ವಿಳಾಸಕ್ಕೆ ಡ್ರಗ್ಸ್​ ಡೆಲವರಿಯಾಗುವ ಮುನ್ನ ಟ್ರಾಕಿಂಗ್ ಮಾಹಿತಿ ಆಧರಿಸಿ ಡ್ರಗ್ಸ್​ ಬಾಕ್ಸ್​ ಅನ್ನು ಪಡೆಯುತ್ತಿದ್ದರು.

ಮತ್ತೊಂದು ಸಂದರ್ಭದಲ್ಲಿ ತಪ್ಪಾದ ವಿಳಾಸಕ್ಕೆ ತೆರಳುತಿದ್ದ ಡೆಲವರಿ ಸಿಬ್ಬಂದಿಗಳು, ವಿಳಾಸ ಸಿಗದೆ ವಾಪಾಸ್ ಕೊರಿಯರ್ ಏಜೆನ್ಸಿಗೆ ಬಾಕ್ಸ್​ ಅನ್ನು ತೆಗೆದುಕೊಂಡು ಹೊಗುತಿದ್ದರು. ಆ ಬಳಿಕ ಪೆಡ್ಲರ್​ಗಳು ಏಜೆನ್ಸಿಗೆ ಬಂದು ಕೊರಿಯರ್ ತೆಗೆದುಕೊಳ್ಳುತ್ತಿದ್ದರು. ಪೆಡ್ಲರ್ಸ್​​ಗಳು ಲೀಗಲ್ ಆಗಿಯೇ ಬೆಂಗಳೂರಿಗೆ ಡ್ರಗ್ ತರಿಸುತ್ತಿದ್ದರು.

ಸಿಸಿಬಿ ಪೊಲೀಸರು ಸೆಪ್ಟೆಂಬರ್ 9ರಂದು ಚಾಮರಾಜಪೇಟೆ ವಿದೇಶಿ ಅಂಚೆ ಕಚೇರಿ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ‌ 606 ಮಾದಕ ವಸ್ತು ಇರುವ ಪಾರ್ಸಲ್ ಪ್ಯಾಕೇಟ್​​ಗಳು ಪತ್ತೆಯಾಗಿದ್ದವು. ಥೈಲ್ಯಾಂಡ್, ಯುಎಸ್​, ಯುಕೆಯಿಂದ ಡ್ರಗ್ಸ್ ಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು 12 ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆಲ ಪೆಡ್ಲರ್ಸ್​ಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಅಂಚೆ ಇಲಾಖೆ ಮೂಲಕ ಬೆಂಗಳೂರಿಗೆ ಬರ್ತಾಯಿದೆ ವಿದೇಶಿ ಡ್ರಗ್ಸ್​: 21 ಕೋಟಿ ರೂ ಮೌಲ್ಯದ ಡ್ರಗ್ಸ್ ವಶಕ್ಕೆ 

ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಬಸವನಗೌಡನ ಬಂಧಿತ ಆರೋಪಿ. 218ಗ್ರಾಂ ಗಾಂಜಾ, ಬೈಕ್ ಜಪ್ತಿ ಮಾಡಲಾಗಿದೆ. ಅಬಕಾರಿ ಇನ್ಸ್​ಪೆಕ್ಟರ್ ವಿಠ್ಠಲ ಪೀರಣ್ಣನವರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಅಬಕಾರಿ ಪೊಲೀಸರು ಎನ್​ಡಿಪಿಎಸ್​​ ಕಾಯ್ದೆಯಡಿ ಕೇಸ್ ದಾಖಲಿಸಿದ್ದಾರೆ.

ಹಳೇ ಡ್ರಗ್ ಪೆಡ್ಲರ್​ಗಳ ತಪಾಸಣೆ: ದಯಾನಂದ

ಹೊಸ ವರ್ಷ‌ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಅಹಿತಕರ ಘಟನೆ ಆಗದಂತೆ ಪೊಲೀಸರು ಸಿದ್ದತೆ ನಡೆಸಿದ್ದಾರೆ ಎಂದು ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದರು. ನಗರದಲ್ಲಿ ಅಹಿತಕರ ಘಟನೆ ಆಗದಂತೆ ಕಟ್ಟೆಚ್ಚರ ವಹಿಸಲಾಗಿದೆ. ಸಿಸಿಬಿ ಸೇರಿದಂತೆ ಎಲ್ಲಾ ವಿಭಾಗದವರು ಡ್ರಗ್ಸ್ ವಿರುದ್ದ ಕಾರ್ಯಾಚರಣೆ ನಡೆಸಿದ್ದಾರೆ. ಹಳೇ ಡ್ರಗ್ ಪೆಡ್ಲರ್​ಗಳು, ರೌಡಿ ಹಿನ್ನೆಲೆಯುಳ್ಳವರ ತಪಾಸಣೆ ನಡೆಯುತ್ತಿದೆ ಎಂದರು.

ಹೊಸ ವರ್ಷ ಆಯೋಜಕರನ್ನು ಕರೆಸಿ ಸಲಹೆ ಸೂಚನೆ ನೀಡಲಾಗುತ್ತಿದೆ. ಬೇರೆ ಬೇರೆ ಇಲಾಖೆ ಜೊತೆಯೂ ಹೊಸ ವರ್ಷ ಆಚರಣೆ ಬಗ್ಗೆ ಚರ್ಚೆ ಆಗುತ್ತಿದೆ. ಎಲ್ಲೆಲ್ಲಿ ಲೈಟಿಂಗ್, ಬೇರೆ ವ್ಯವಸ್ಥೆ ಆಗಬೇಕು ಅಂತ ಚರ್ಚೆ ಆಗುತ್ತಿದೆ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:58 am, Sun, 8 December 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್