AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಡ್ರಗ್ಸ್ ಬೇಟೆ: 5.67 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ, ಕೊಕೇನ್ ಜಪ್ತಿ, ಉಗಾಂಡಾ ಮಹಿಳೆ ಸೇರಿ ಮೂವರ ಬಂಧನ

ಬೆಂಗಳೂರಿನಲ್ಲಿ ಮಾದಕ ದ್ರವ್ಯ ನಿಗ್ರಹ ದಳ ಮತ್ತು ಕಸ್ಟಮ್ಸ್ ಅಧಿಕಾರಿಗಳು ಪ್ರತ್ಯೇಕ ಕಾರ್ಯಾಚರಣೆಗಳನ್ನು ನಡೆಸಿ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋ ಗಾಂಜಾ ಮತ್ತು ಕೊಕೇನ್ ವಶಪಡಿಸಿಕೊಂಡಿದ್ದಾರೆ. ಹೆಬ್ಬಾಳ, ಕೆಂಪೇಗೌಡ ಅಂತರರಾಜ್ಯ ವಿಮಾನ ನಿಲ್ದಾಣ ಹಾಗೂ ಚಿಕ್ಕಬಾಣಾವರದಲ್ಲಿ ನಡೆದ ಈ ಕಾರ್ಯಾಚರಣೆಗಳಲ್ಲಿ ವಿದೇಶಿ ಮಹಿಳೆ ಸೇರಿ ಪ್ರಮುಖ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ.

ಬೆಂಗಳೂರಲ್ಲಿ ಡ್ರಗ್ಸ್ ಬೇಟೆ: 5.67 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ, ಕೊಕೇನ್ ಜಪ್ತಿ, ಉಗಾಂಡಾ ಮಹಿಳೆ ಸೇರಿ ಮೂವರ ಬಂಧನ
ಉಗಾಂಡಾ ಮೂಲದ ಮಹಿಳಾ ಡ್ರಗ್ ಪೆಡ್ಲರ್ ಜನತ್ ಮತ್ತು ಡ್ರಗ್ಸ್ ರಿಸೀವರ್ ವಾಹಬ್ ಎಲ್ವಿಸ್ ಯುನಿಸ್Image Credit source: tv9
ಶಿವಪ್ರಸಾದ್​ ಬಿ.
| Edited By: |

Updated on:Jun 16, 2026 | 12:21 PM

Share

ಬೆಂಗಳೂರು, ಜೂನ್ 16: ಬೆಂಗಳೂರಿನಲ್ಲಿ (Bengaluru) ಮಾದಕ ದ್ರವ್ಯ ಜಾಲದ ವಿರುದ್ಧ ಪೊಲೀಸರು ಹಾಗೂ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 5.67 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹೈಡ್ರೋ ಗಾಂಜಾ ಮತ್ತು ಕೊಕೇನ್ ಜಪ್ತಿ ಮಾಡಿದ್ದಾರೆ. ಅಂತರರಾಷ್ಟ್ರೀಯ ಮತ್ತು ಅಂತರರಾಜ್ಯ ಡ್ರಗ್ಸ್ ಡೀಲಿಂಗ್‌ನಲ್ಲಿ ತೊಡಗಿದ್ದ ಉಗಾಂಡಾ ಮೂಲದ ಮಹಿಳಾ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಕೋಟ್ಯಂತರ ಮೌಲ್ಯದ ಮಾದಕ ದ್ರವ್ಯ ಜಪ್ತಿ.
  • ಉಗಾಂಡಾ ಮಹಿಳೆ ಸೇರಿ ಮೂವರು ಪೆಡ್ಲರ್‌ಗಳ ಸೆರೆ.
  • ಬ್ಯಾಂಕಾಕ್ ಮತ್ತು ನಾಸಿಕ್‌ನಿಂದ ಸರಬರಾಜಾಗುತ್ತಿದ್ದ ಡ್ರಗ್ಸ್.

ಹೆಬ್ಬಾಳದಲ್ಲಿ 2.20 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಸೀಜ್

ನಗರದ ಹೆಬ್ಬಾಳ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಹೈಡ್ರೋ ಗಾಂಜಾ ಡೀಲಿಂಗ್‌ನಲ್ಲಿ ನಿರತನಾಗಿದ್ದ ಹಳೆ ಆರೋಪಿ ಇಮ್ರಾನ್ ಪಾಷಾ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತನಿಂದ 2.20 ಕೋಟಿ ರೂಪಾಯಿ ಮೌಲ್ಯದ 3 ಕೆಜಿ 180 ಗ್ರಾಂ ತೂಕದ ಹೈಡ್ರೋ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಆರೋಪಿ ಇಮ್ರಾನ್ ಈ ಮಾದಕ ವಸ್ತುವನ್ನು ಮಹಾರಾಷ್ಟ್ರದ ನಾಸಿಕ್‌ನಿಂದ ಬೆಂಗಳೂರಿಗೆ ತರುತ್ತಿದ್ದ ಎನ್ನಲಾಗಿದ್ದು, ಈತನ ಮೇಲೆ ಈಗಾಗಲೇ ನಗರದ ಬೇರೆ ಬೇರೆ ಪೊಲೀಸ್ ಸ್ಟೇಷನ್‌ಗಳಲ್ಲಿ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 2.77 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಥಾಯ್ಲೆಂಡ್‌ನ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕನೊಬ್ಬನ ಲಗೇಜ್ ಬ್ಯಾಗ್‌ಗಳನ್ನು ತಪಾಸಣೆ ನಡೆಸಿದಾಗ 2.77 ಕೋಟಿ ರೂಪಾಯಿ ಮೌಲ್ಯದ 7.92 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಅಧಿಕಾರಿಗಳು ಗಾಂಜಾವನ್ನು ಜಪ್ತಿ ಮಾಡಿ, ಪ್ರಯಾಣಿಕನನ್ನು ವಶಕ್ಕೆ ಪಡೆದು ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಸಿಸಿಬಿ ಬಲೆಯಲ್ಲಿ ಉಗಾಂಡಾ ಮೂಲದ ಮಹಿಳಾ ಪೆಡ್ಲರ್

ಮತ್ತೊಂದು ಪ್ರಮುಖ ಕಾರ್ಯಾಚರಣೆಯಲ್ಲಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಚಿಕ್ಕಬಾಣಾವರದಲ್ಲಿ ದಾಳಿ ನಡೆಸಿ 70.50 ಲಕ್ಷ ರೂಪಾಯಿ ಮೌಲ್ಯದ 130 ಗ್ರಾಂ ಕೊಕೇನ್ ಜಪ್ತಿ ಮಾಡಿದ್ದಾರೆ. ಉಗಾಂಡಾ ಮೂಲದ ಮಹಿಳಾ ಡ್ರಗ್ ಪೆಡ್ಲರ್ ಜನತ್ ಮತ್ತು ಡ್ರಗ್ಸ್ ರಿಸೀವರ್ ವಾಹಬ್ ಎಲ್ವಿಸ್ ಯುನಿಸ್ ಎಂಬಿಬ್ಬರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು ಏರ್​ಪೋರ್ಟ್​ನಲ್ಲಿ ಕಸ್ಟಮ್ಸ್ ಭರ್ಜರಿ ಬೇಟೆ: 13.14 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ, 6 ಮಂದಿಯ ಬಂಧನ

ಆರೋಪಿ ವಾಹಬ್ ಯಶವಂತಪುರ ಮತ್ತು ಗೊರಗುಂಟೆಪಾಳ್ಯ ಸುತ್ತಮುತ್ತ ಡ್ರಗ್ಸ್ ಡೀಲಿಂಗ್ ಮಾಡುತ್ತಿದ್ದ. ಬಂಧಿತ ಮಹಿಳೆ ಜನತ್ ಬಿಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದು ಪೆಡ್ಲಿಂಗ್ ದಂಧೆ ಆರಂಭಿಸಿದ್ದಳು. ಈಕೆ ಈ ಹಿಂದೆ ದೆಹಲಿಯಲ್ಲೂ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದು 5 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಳು ಎಂಬುದು ಬೆಳಕಿಗೆ ಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:13 pm, Tue, 16 June 26

Follow Us
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್