AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬುಲೆಟ್​​​ಗೆ ಗುದ್ದಿ ಅರ್ಧ ಕಿಮೀ ಎಳೆದೊಯ್ದ ಕಾರು, ರಸ್ತೆಯುದ್ದಕ್ಕೂ ಬೆಂಕಿಯ ಕಿಡಿ

ಬೆಂಗಳೂರಿನ ಸುಮ್ಮನಹಳ್ಳಿ ಫ್ಲೈಓವರ್‌ನಲ್ಲಿ ನಡೆದ ಅಘಾತಕಾರಿ ಘಟನೆ ಇದು. ಡಿಸೆಂಬರ್ 24ರಂದು ವೇಗವಾಗಿ ಬಂದ ಎಸ್‌ಯುವಿ ಕಾರೊಂದು ಬುಲೆಟ್ ಬೈಕ್ ಅನ್ನು ಸುಮಾರು 500 ಮೀಟರ್‌ಗಳವರೆಗೆ ಎಳೆದುಕೊಂಡು ಹೋಗಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ. ಸಾರ್ವಜನಿಕರು ಚಾಲಕ ಶ್ರೀನಿವಾಸ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ತನಿಖೆಯಲ್ಲಿ ಚಾಲಕ ಮದ್ಯಪಾನ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ಬೆಂಗಳೂರು: ಬುಲೆಟ್​​​ಗೆ ಗುದ್ದಿ ಅರ್ಧ ಕಿಮೀ  ಎಳೆದೊಯ್ದ ಕಾರು, ರಸ್ತೆಯುದ್ದಕ್ಕೂ ಬೆಂಕಿಯ ಕಿಡಿ
ವಿಡಿಯೋ ವೈರಲ್
ಅಕ್ಷಯ್​ ಪಲ್ಲಮಜಲು​​
|

Updated on: Dec 26, 2025 | 3:30 PM

Share

ಬೆಂಗಳೂರು, ಡಿ.26: ಬೆಂಗಳೂರಿನಲ್ಲಿ (Bengaluru) ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ. ಬುಧವಾರ (ಡಿ.24) ರಾತ್ರಿ ಬೆಂಗಳೂರಿನ ಸುಮ್ಮನಹಳ್ಳಿ ಫ್ಲೈಓವರ್‌ನಲ್ಲಿ ಒಂದು ಎಸ್‌ಯುವಿ ಕಾರೊಂದು ರಸ್ತೆಯಲ್ಲಿ ಅಡ್ಡಾದಿಡ್ಡಿ ಹೋಗಿದೆ. ಕಾರಿನ ಮುಂದೆ ಒಂದು ಬುಲೆಟ್​​​ ಬೈಕ್​​ ಸಿಲುಕಿಕೊಂಡು ಅದನ್ನು ರಸ್ತೆ ಉದ್ದಕ್ಕೂ ಎಳೆದುಕೊಂಡು ಹೋಗಿದೆ. ಇದನ್ನು ನೋಡಿ ಇತರ ಸವಾರರು ಅಚ್ಚರಿಗೊಂಡಿದ್ದಾರೆ. ಇದೀಗ ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಕಾರಿನ ಪಕ್ಕದಲ್ಲಿದ್ದ ಮತ್ತೊಂದು ಕಾರಿನರು ಎಷ್ಟೇ ಎಚ್ಚರಿಕೆ ನೀಡಿದ್ರು ಅದನ್ನು ಕೇಳಿಕೊಳ್ಳದೇ ಸುಮಾರು 500 ಮೀಟರ್‌ಗಳ ವರೆಗೆ ಬುಲೆಟ್​​​​ ಬೈಕ್​​ನ್ನು ಎಳೆದುಕೊಂಡು ಹೋಗಿದ್ದಾರೆ. ಇದರಿಂದ ಕಾರಿನ ಕೆಳಗಿನಿಂದ ಬೆಂಕಿ ಕಿಡಿಗಳು ಬಂದಿದೆ. ಈ ಘಟಮನೆಯಿಂದ ಜನನಿಬಿಡ ಪ್ರದೇಶದಲ್ಲಿ ಭೀತಿ ಉಂಟು ಮಾಡಿದೆ.

ಕೊನೆಗೆ ನಾಯಂಡಹಳ್ಳಿ ಜಂಕ್ಷನ್ ಬಳಿ ಕೋಪಗೊಂಡ ಇತರ ಪ್ರಯಾಣಿಕರು ಎಸ್‌ಯುವಿ ಕಾರು ಹಾಗೂ ಡ್ರೈವರ್​​​ನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ಈ ಕೃತ್ಯವನ್ನು ಮಾಡಿದ ವ್ಯಕ್ತಿಯನ್ನು ತುಮಕೂರು ಜಿಲ್ಲೆಯ ಕುಣಿಗಲ್‌ನ ಶ್ರೀನಿವಾಸ್ ಕೆವಿ ಎಂದು ಗುರುತಿಸಲಾಗಿದೆ. ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿದಾಗ, ಈ ಕಾರು ಬೈಕ್​​​ ಸವಾರನಿಗೆ ಡಿಕ್ಕಿ ಹೊಡೆದು ರಸ್ತೆ ಉದ್ದಕ್ಕೂ ಬೈಕ್​​ನ್ನು ಎಳೆದುಕೊಂಡು ಬಂದಿದ್ದಾರೆ ಎಂದು ಹೇಳಲಾಗಿದೆ. ದೂರಿನ ಪ್ರಕಾರ, ಶ್ರೀನಿವಾಸ್ ಅವರು ಬೈಕ್​​ ಓಡಿಸುತ್ತಿದ್ದ ರೋಹಿತ್ ಎಸ್ ಅವರ ಬುಲೆಟ್​​​ಗೆ ಹಿಂಭಾಗದಿಂದ ಡಿಕ್ಕಿ ಹೊಡೆದು ರಸ್ತೆ ಉದ್ದಕ್ಕೂ ಎಳೆದುಕೊಂಡು ಬಂದಿದ್ದಾರೆ.

ಇದನ್ನೂ ಓದಿ: ಹಬ್ಬದ ದಿನ ಬೆಂಗಳೂರಿಗೆ ಬರುವಾಗ ಖಾಲಿ ಖಾಲಿ, ಆದರೆ ಹೊರಗೆ ಹೋಗುವಾಗ ಹೇಗಿರುತ್ತದೆ ನೋಡಿ?

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಈ ಬಗ್ಗೆ ಬೈಕ್​​ ಸವಾರ ದೂರಿನಲ್ಲಿ ಹೀಗೆ ಹೇಳಿದ್ದಾರೆ. “ನನ್ನ ಬೈಕ್​​​ಗೆ ಡಿಕ್ಕಿ ಹೊಡೆದು ನನ್ನನ್ನು ಕೆಳಗೆ ಹಾಕಿ, ಬುಲೆಟ್​​ನ್ನು ರಸ್ತೆಯಲ್ಲಿ ಎಳೆದುಕೊಂಡು ಬಂದಿದ್ದಾರೆ” ಎಂದು ಹೇಳಿದ್ದಾರೆ. ಈ ಅಪಘಾತದಿಂದ ರೋಹಿತ್​​ ಅವರಿಗೆ ಯಾವುದೇ ತೊಂದರೆಗಳು ಆಗಿಲ್ಲ. ಬೈಕ್​​​​​​​​ಗೆ ದೊಡ್ಡ ಮಟ್ಟದ ಡ್ಯಾಮೆಜ್​​ ಆಗಿದೆ ಎಂದು ಹೇಳಲಾಗಿದೆ. ಇದೀಗ ಪೊಲೀಸ್​​ ತನಿಖೆಯಲ್ಲಿ ಶ್ರೀನಿವಾಸ್ ಅವರು ಮದ್ಯಪಾನ ಮಾಡಿದ್ದಾಗಿ ಒಪ್ಪಿಕೊಂಡಿದ್ದು, ಡಿಕ್ಕಿಯ ನಂತರ ಭಯಭೀತನಾಗಿದ್ದೆ, ತನ್ನ ಕಾರಿನ ಮುಂದೆ ಬೈಕ್​​ ಸಿಲುಕಿಕೊಂಡಿದೆ ಎಂಬ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ. ಸಾರ್ವಜನಿಕರು ಶ್ರೀನಿವಾಸ್​​​ ಅವರ ಈ ಹುಚ್ಚುತನಕ್ಕೆ ಕಾರನ್ನು ಪುಡಿಪುಡಿ ಮಾಡಿ, ಶ್ರೀನಿವಾಸ್​​​ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?
ಪುಟ್ಟ ಮಗಳ ಜೀವ ಉಳಿಸಿ ಪ್ರಾಣಬಿಟ್ಟ ಫುಟ್ಬಾಲ್ ಆಟಗಾರನ ಪತ್ನಿ
ಪುಟ್ಟ ಮಗಳ ಜೀವ ಉಳಿಸಿ ಪ್ರಾಣಬಿಟ್ಟ ಫುಟ್ಬಾಲ್ ಆಟಗಾರನ ಪತ್ನಿ
ಮೊಹರಂ ಮೆರವಣಿಗೆಯಲ್ಲಿ ವಿಷದ ಮಾತ್ರೆ ಹಂಚುತ್ತಿದ್ದವ ಮುಂಬೈನಲ್ಲಿ ಅರೆಸ್ಟ್
ಮೊಹರಂ ಮೆರವಣಿಗೆಯಲ್ಲಿ ವಿಷದ ಮಾತ್ರೆ ಹಂಚುತ್ತಿದ್ದವ ಮುಂಬೈನಲ್ಲಿ ಅರೆಸ್ಟ್
ಜೂನ್ 29 ರಿಂದ ಜುಲೈ 05ರ ವರೆಗಿನ ವಾರದ ದ್ವಾದಶ ರಾಶಿಗಳ ಫಲಾಫಲ
ಜೂನ್ 29 ರಿಂದ ಜುಲೈ 05ರ ವರೆಗಿನ ವಾರದ ದ್ವಾದಶ ರಾಶಿಗಳ ಫಲಾಫಲ
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ