AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬುಲೆಟ್​​​ಗೆ ಗುದ್ದಿ ಅರ್ಧ ಕಿಮೀ ಎಳೆದೊಯ್ದ ಕಾರು, ರಸ್ತೆಯುದ್ದಕ್ಕೂ ಬೆಂಕಿಯ ಕಿಡಿ

ಬೆಂಗಳೂರಿನ ಸುಮ್ಮನಹಳ್ಳಿ ಫ್ಲೈಓವರ್‌ನಲ್ಲಿ ನಡೆದ ಅಘಾತಕಾರಿ ಘಟನೆ ಇದು. ಡಿಸೆಂಬರ್ 24ರಂದು ವೇಗವಾಗಿ ಬಂದ ಎಸ್‌ಯುವಿ ಕಾರೊಂದು ಬುಲೆಟ್ ಬೈಕ್ ಅನ್ನು ಸುಮಾರು 500 ಮೀಟರ್‌ಗಳವರೆಗೆ ಎಳೆದುಕೊಂಡು ಹೋಗಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ. ಸಾರ್ವಜನಿಕರು ಚಾಲಕ ಶ್ರೀನಿವಾಸ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ತನಿಖೆಯಲ್ಲಿ ಚಾಲಕ ಮದ್ಯಪಾನ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ಬೆಂಗಳೂರು: ಬುಲೆಟ್​​​ಗೆ ಗುದ್ದಿ ಅರ್ಧ ಕಿಮೀ  ಎಳೆದೊಯ್ದ ಕಾರು, ರಸ್ತೆಯುದ್ದಕ್ಕೂ ಬೆಂಕಿಯ ಕಿಡಿ
ವಿಡಿಯೋ ವೈರಲ್
ಅಕ್ಷಯ್​ ಪಲ್ಲಮಜಲು​​
|

Updated on: Dec 26, 2025 | 3:30 PM

Share

ಬೆಂಗಳೂರು, ಡಿ.26: ಬೆಂಗಳೂರಿನಲ್ಲಿ (Bengaluru) ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ. ಬುಧವಾರ (ಡಿ.24) ರಾತ್ರಿ ಬೆಂಗಳೂರಿನ ಸುಮ್ಮನಹಳ್ಳಿ ಫ್ಲೈಓವರ್‌ನಲ್ಲಿ ಒಂದು ಎಸ್‌ಯುವಿ ಕಾರೊಂದು ರಸ್ತೆಯಲ್ಲಿ ಅಡ್ಡಾದಿಡ್ಡಿ ಹೋಗಿದೆ. ಕಾರಿನ ಮುಂದೆ ಒಂದು ಬುಲೆಟ್​​​ ಬೈಕ್​​ ಸಿಲುಕಿಕೊಂಡು ಅದನ್ನು ರಸ್ತೆ ಉದ್ದಕ್ಕೂ ಎಳೆದುಕೊಂಡು ಹೋಗಿದೆ. ಇದನ್ನು ನೋಡಿ ಇತರ ಸವಾರರು ಅಚ್ಚರಿಗೊಂಡಿದ್ದಾರೆ. ಇದೀಗ ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಕಾರಿನ ಪಕ್ಕದಲ್ಲಿದ್ದ ಮತ್ತೊಂದು ಕಾರಿನರು ಎಷ್ಟೇ ಎಚ್ಚರಿಕೆ ನೀಡಿದ್ರು ಅದನ್ನು ಕೇಳಿಕೊಳ್ಳದೇ ಸುಮಾರು 500 ಮೀಟರ್‌ಗಳ ವರೆಗೆ ಬುಲೆಟ್​​​​ ಬೈಕ್​​ನ್ನು ಎಳೆದುಕೊಂಡು ಹೋಗಿದ್ದಾರೆ. ಇದರಿಂದ ಕಾರಿನ ಕೆಳಗಿನಿಂದ ಬೆಂಕಿ ಕಿಡಿಗಳು ಬಂದಿದೆ. ಈ ಘಟಮನೆಯಿಂದ ಜನನಿಬಿಡ ಪ್ರದೇಶದಲ್ಲಿ ಭೀತಿ ಉಂಟು ಮಾಡಿದೆ.

ಕೊನೆಗೆ ನಾಯಂಡಹಳ್ಳಿ ಜಂಕ್ಷನ್ ಬಳಿ ಕೋಪಗೊಂಡ ಇತರ ಪ್ರಯಾಣಿಕರು ಎಸ್‌ಯುವಿ ಕಾರು ಹಾಗೂ ಡ್ರೈವರ್​​​ನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ಈ ಕೃತ್ಯವನ್ನು ಮಾಡಿದ ವ್ಯಕ್ತಿಯನ್ನು ತುಮಕೂರು ಜಿಲ್ಲೆಯ ಕುಣಿಗಲ್‌ನ ಶ್ರೀನಿವಾಸ್ ಕೆವಿ ಎಂದು ಗುರುತಿಸಲಾಗಿದೆ. ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿದಾಗ, ಈ ಕಾರು ಬೈಕ್​​​ ಸವಾರನಿಗೆ ಡಿಕ್ಕಿ ಹೊಡೆದು ರಸ್ತೆ ಉದ್ದಕ್ಕೂ ಬೈಕ್​​ನ್ನು ಎಳೆದುಕೊಂಡು ಬಂದಿದ್ದಾರೆ ಎಂದು ಹೇಳಲಾಗಿದೆ. ದೂರಿನ ಪ್ರಕಾರ, ಶ್ರೀನಿವಾಸ್ ಅವರು ಬೈಕ್​​ ಓಡಿಸುತ್ತಿದ್ದ ರೋಹಿತ್ ಎಸ್ ಅವರ ಬುಲೆಟ್​​​ಗೆ ಹಿಂಭಾಗದಿಂದ ಡಿಕ್ಕಿ ಹೊಡೆದು ರಸ್ತೆ ಉದ್ದಕ್ಕೂ ಎಳೆದುಕೊಂಡು ಬಂದಿದ್ದಾರೆ.

ಇದನ್ನೂ ಓದಿ: ಹಬ್ಬದ ದಿನ ಬೆಂಗಳೂರಿಗೆ ಬರುವಾಗ ಖಾಲಿ ಖಾಲಿ, ಆದರೆ ಹೊರಗೆ ಹೋಗುವಾಗ ಹೇಗಿರುತ್ತದೆ ನೋಡಿ?

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಈ ಬಗ್ಗೆ ಬೈಕ್​​ ಸವಾರ ದೂರಿನಲ್ಲಿ ಹೀಗೆ ಹೇಳಿದ್ದಾರೆ. “ನನ್ನ ಬೈಕ್​​​ಗೆ ಡಿಕ್ಕಿ ಹೊಡೆದು ನನ್ನನ್ನು ಕೆಳಗೆ ಹಾಕಿ, ಬುಲೆಟ್​​ನ್ನು ರಸ್ತೆಯಲ್ಲಿ ಎಳೆದುಕೊಂಡು ಬಂದಿದ್ದಾರೆ” ಎಂದು ಹೇಳಿದ್ದಾರೆ. ಈ ಅಪಘಾತದಿಂದ ರೋಹಿತ್​​ ಅವರಿಗೆ ಯಾವುದೇ ತೊಂದರೆಗಳು ಆಗಿಲ್ಲ. ಬೈಕ್​​​​​​​​ಗೆ ದೊಡ್ಡ ಮಟ್ಟದ ಡ್ಯಾಮೆಜ್​​ ಆಗಿದೆ ಎಂದು ಹೇಳಲಾಗಿದೆ. ಇದೀಗ ಪೊಲೀಸ್​​ ತನಿಖೆಯಲ್ಲಿ ಶ್ರೀನಿವಾಸ್ ಅವರು ಮದ್ಯಪಾನ ಮಾಡಿದ್ದಾಗಿ ಒಪ್ಪಿಕೊಂಡಿದ್ದು, ಡಿಕ್ಕಿಯ ನಂತರ ಭಯಭೀತನಾಗಿದ್ದೆ, ತನ್ನ ಕಾರಿನ ಮುಂದೆ ಬೈಕ್​​ ಸಿಲುಕಿಕೊಂಡಿದೆ ಎಂಬ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ. ಸಾರ್ವಜನಿಕರು ಶ್ರೀನಿವಾಸ್​​​ ಅವರ ಈ ಹುಚ್ಚುತನಕ್ಕೆ ಕಾರನ್ನು ಪುಡಿಪುಡಿ ಮಾಡಿ, ಶ್ರೀನಿವಾಸ್​​​ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ