AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಕೆಎಸ್​ಆರ್ ರೈಲು ನಿಲ್ದಾಣದಲ್ಲಿ ಮಹಿಳೆಗೆ ಕಿರುಕುಳ ನೀಡಿದ ಕುಡುಕ ಟಿಸಿ ಅರೆಸ್ಟ್

ಕೆಎಸ್​ಆರ್ ರೈಲು ನಿಲ್ದಾಣದಲ್ಲಿ (KSR Railway Station) ಮಹಿಳಾ ಪ್ರಯಾಣಿಕರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಭಾರತೀಯ ರೈಲ್ವೆಯ ಉಪ ಮುಖ್ಯ ಟಿಕೆಟ್ ಪರಿವೀಕ್ಷಕರೊಬ್ಬರನ್ನು (DCTI) ಬಂಧಿಸಲಾಗಿದೆ.

Bengaluru: ಕೆಎಸ್​ಆರ್ ರೈಲು ನಿಲ್ದಾಣದಲ್ಲಿ ಮಹಿಳೆಗೆ ಕಿರುಕುಳ ನೀಡಿದ ಕುಡುಕ ಟಿಸಿ ಅರೆಸ್ಟ್
ಆರೋಪಿ ಸಂತೋಷ್ ಕುಮಾರ್ ವಿ
ಗಣಪತಿ ಶರ್ಮಾ
|

Updated on: Mar 21, 2023 | 3:35 PM

Share

ಬೆಂಗಳೂರು: ನಗರದ ಕೆಎಸ್​ಆರ್ ರೈಲು ನಿಲ್ದಾಣದಲ್ಲಿ (KSR Railway Station) ಮಹಿಳಾ ಪ್ರಯಾಣಿಕರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಭಾರತೀಯ ರೈಲ್ವೆಯ ಉಪ ಮುಖ್ಯ ಟಿಕೆಟ್ ಪರಿವೀಕ್ಷಕರೊಬ್ಬರನ್ನು (DCTI) ಬಂಧಿಸಲಾಗಿದೆ. ಆರೋಪಿ ಸಂತೋಷ್ ಕುಮಾರ್ ವಿ ಅವರನ್ನು ಈ ಹಿಂದೆಯೇ ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಮಾರ್ಚ್ 14ರಂದು ಸಂತೋಷ್ ಮಹಿಳೆಗೆ ಕಿರುಕುಳ ನೀಡಿದ್ದರು ಎಂದು ಕರ್ನಾಟಕ ರೈಲ್ವೆ ಪೊಲೀಸರು ತಿಳಿಸಿದ್ದಾರೆ. ಸಂತೋಷ್ ಮಹಿಳೆಗೆ ಕಿರುಕುಳ ನೀಡುತ್ತಿರುವ ದೃಶ್ಯವನ್ನು ಮತ್ತೊಬ್ಬ ಪ್ರಯಾಣಿಕ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಮಹಿಳೆಯು ಡಿಸಿಟಿಐ ಜತೆ ನೊಂದು ಮಾತನಾಡುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ನೀವ್ಯಾಕೆ ನನ್ನನ್ನು ತಳ್ಳುತ್ತಿದ್ದೀರಿ, ನಿಧಾನವಾಗಿ ಮಾತನಾಡಿ. ಟಿಕೆಟ್ ಕಾಯ್ದಿರಿಸಿದ ಕಾರಣ ನಾನಿಲ್ಲಿಗೆ ಬಂದಿದ್ದೇನೆ ಎಂದು ಮಹಿಳೆ ಹೇಳುತ್ತಿರುವ ದೃಶ್ಯ ವಿಡಿಯೋದಲ್ಲಿದೆ.

ಟಿಕೇಟ್ ತೋರಿಸು ಅಂತ ಆವಾಗಿನಿಂದಲೂ ಕೇಳುತ್ತಾ ಇದ್ದೇನೆ. ಟಿಕೆಟ್ ಚೆಕ್ ಮಾಡುವುದು ನನ್ನ ಕೆಲಸ. ತೋರಿಸಿ ಹೋಗು ಎಂದು ನಿನಗೇ ಹೇಳುತ್ತಿದ್ದೇನೆ” ಎಂದು ಆರೋಪಿ ಹೇಳುತ್ತಿರುವುದೂ ವಿಡಿಯೋದಲ್ಲಿ ಕಂಡುಬಂದಿದೆ.

ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಮಹಿಳೆ ಪಶ್ಚಿಮ ಬಂಗಾಳದವರಾಗಿದ್ದು ಉದ್ಯೋಗ ಅರಸುವುದಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಪಶ್ಚಿಮ ಬಂಗಾಳಕ್ಕೆ ತೆರಳುವುದಕ್ಕಾಗಿ ಎಸ್​​ಎಂವಿಟಿ ಬೆಂಗಳೂರು ಹಮ್​ಸಫರ್ ಎಕ್ಸ್​​ಪ್ರೆಸ್​​ ರೈಲಿಗೆ ತೆರಳಿದ್ದಾಗ ಘಟನೆ ನಡೆದಿದೆ.

ಇದನ್ನೂ ಓದಿ: ಕಲಬುರಗಿ: ರೈತ ಮಹಿಳೆಯ ಬರ್ಬರ ಕೊಲೆ; ಅತ್ಯಾಚಾರ ಮಾಡಿ, ಹತ್ಯೆ ಮಾಡಿರುವ ಶಂಕೆ

ಮಹಿಳೆಯು ಬ್ಯಾಗ್​ಗಳೊಂದಿಗೆ ರೈಲು ನಿಲ್ದಾಣಕ್ಕೆ ಬಂದಾಗ ಆರೋಪಿಯು ಟಿಕೆಟ್ ತೋರಿಸುವಂತೆ ಕೇಳಿದ್ದರು. ಆಗ ಮಹಿಳೆಯು ತುಸು ಹೊತ್ತಿನಲ್ಲಿ ತೋರಿಸುತ್ತೇನೆ ಎಂದು ಹೇಳಿದ್ದಾರೆ. ಮದ್ಯ ಕುಡಿದ ಅಮಲಿನಲ್ಲಿದ್ದ ಆರೋಪಿಯು ಆಕೆಗೆ ಕಿರುಕುಳ ನೀಡಿದ್ದಲ್ಲದೆ ತಳ್ಳಿದ್ದಾರೆ. ಪೆನ್​ನಿಂದ ಆಕೆಯ ಮುಖದ ಮೇಲೆ ಮಾರ್ಕ್ ಮಾಡಲು ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಲ್ಲದೇ ಆರೋಪಿಯು ಮಹಿಳೆಯನ್ನು ನಿಂದಿಸಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಸಂತ್ರಸ್ತೆ ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದಾಗ, ಯಾರೂ ನನ್ನನ್ನು ಏನೂ ಮಾಡಲಾಗದು. ಹೋಗು ಇಲ್ಲಿಂದ ಎಂದು ಧಮಕಿ ಹಾಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಮಹಿಳೆ ನೀಡಿದ ದೂರು ಆಧರಿಸಿ ಕರ್ನಾಟಕ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿದ್ದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!