AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಡೈರಿ ಸರ್ಕಲ್ ರಸ್ತೆಯಲ್ಲಿ ಸ್ವಲ್ಪ ಯಾಮಾರಿದ್ರೂ ಅಪಘಾತ, ಕಾರಣ ಇಲ್ಲಿದೆ

ಬೆಂಗಳೂರಿನ ಡೈರಿ ಸರ್ಕಲ್​ನಲ್ಲಿ ರಸ್ತೆ ಅಗೆದು ಜಲಮಂಡಳಿ ಕಾಮಗಾರಿ ನಡೆಸುತ್ತಿದೆ. ನಡು ರಸ್ತೆ ಅಗೆದು ಕಾಮಗಾರಿ ಹಾಗೂ ವಿಳಂಬ ನೀತಿ, ಹಾಳಾದ ರಸ್ತೆಯಿಂದಾಗಿ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಮಳೆ ಬಂದರೆ ಗುಂಡಿ ಯಾವುದು ರಸ್ತೆ ಯಾವುದು ಎಂದು ಗೊತ್ತಾಗದೇ ಜೀವ ಭಯದಲ್ಲೆ ವಾಹನ ಚಲಾಯಸುವಂತಾಗಿದೆ.

ಬೆಂಗಳೂರು: ಡೈರಿ ಸರ್ಕಲ್ ರಸ್ತೆಯಲ್ಲಿ ಸ್ವಲ್ಪ ಯಾಮಾರಿದ್ರೂ ಅಪಘಾತ, ಕಾರಣ ಇಲ್ಲಿದೆ
ಡೈರಿ ಸರ್ಕಲ್ ರಸ್ತೆಯಲ್ಲಿ ಸ್ವಲ್ಪ ಯಾಮಾರಿದ್ರೂ ಅಪಘಾತ, ಕಾರಣ ಇಲ್ಲಿದೆ
Vinayak Hanamant Gurav
| Edited By: |

Updated on: Sep 09, 2024 | 8:15 AM

Share

ಬೆಂಗಳೂರು, ಸೆಪ್ಟೆಂಬರ್ 9: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗುಂಡಿ ಗಂಡಾಂತರ ತಪ್ಪುತ್ತಿಲ್ಲ. ಡೈರಿ ಸರ್ಕಲ್ ರಸ್ತೆಯಲ್ಲಿ ಸ್ವಲ್ಪ ಯಾಮಾರಿದರೂ ಅಪಘಾತಗಳಾಗುತ್ತಿವೆ. ಕೋರಮಂಗಲ ಕಡೆಯಿಂದ ಡೈರಿ ಸರ್ಕಲ್‌ಗೆ ಬರುವ ರಸ್ತೆಯಲ್ಲಿ ಜಲಮಂಡಳಿ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿಯಿಂದ ಶೇ 70ರಷ್ಟು ರಸ್ತೆ ಬಂದ್ ಆಗಿದ್ದು, ಇನ್ನುಳಿದ ಶೇ 30ರಷ್ಟು ರಸ್ತೆಯಲ್ಲಿ ಜನರು ಓಡಾಡುತ್ತಿದ್ದಾರೆ. ಇರುವ ಶೇ 30 ರಷ್ಟು ರಸ್ತೆಯಲ್ಲಿ ಕೂಡ ಯಾವುದು ಚರಂಡಿ ಯಾವುದು ರಸ್ತೆ ಎಂಬ ಅನುಮಾನ ಬರುವ ಹಾಗಿದ್ದು, ಸಾರ್ವಜನಿಕರ ಓಡಾಟಕ್ಕೆ ತೊಂದರೆ ಆಗುತ್ತಿದೆ.

ರಸ್ತೆಯುದ್ದಕ್ಕೂ ಮುರಿದು ಬಿದ್ದ ಸ್ಲಾಬ್​ಗಳ ಮೇಲೆ ವಾಹನ ಸವಾರರ ಓಡಾಟದಿಂದಾಗಿ ಪ್ರತಿದಿನ ಒಂದಿಲ್ಲೊಂದು ಅಪಘಾತಗಳು ಸಂಭವಿಸುತ್ತಿವೆ. ಬಂದರೆ ನೀರು ನಿಂತು ತೊಂದರೆ ಆಗುತ್ತದೆ. ಅತ್ತ ಫುಟ್ ಪಾತ್ ಕೂಡ ಕೆಟ್ಟು ಹೋಗಿದೆ. ಮಾತೆತ್ತಿದರೆ ಸರ್ಕಾರ ಬ್ರ್ಯಾಂಡ್ ಬೆಂಗಳೂರು ಎಂದು ಹೇಳುತ್ತದೆ, ಇಲ್ಲಿ ನಿತ್ಯ ಭಯದಲ್ಲೇ ಸಂಚಾರ ಮಾಡುವಂತಾಗಿದೆ ಎಂದು ವಾಹನ ಸವಾರರು, ಸಾರ್ವಜನಿಕರು ಆಗ್ರಹಿಸಿದ್ದಾರೆ. ಆದಷ್ಟು ಬೇಗನೆ ಕಾಮಗಾರಿ ಮುಗಿಸಿ ಸಾರ್ವಜನಿಕರ ಓಡಾಟಕ್ಕೆ ಅನಕೂಲ ಮಾಡು ಕೊಡುವಂತೆ ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬೆಮಲ್​ನಲ್ಲಿ ಸಿದ್ಧವಾಗ್ತಿದೆ ನಮ್ಮ ಮೆಟ್ರೋ ಚಾಲಕರಹಿತ ರೈಲು!

ಒಟ್ಟಿನಲ್ಲಿ ಒಂದೆಡೆ ಜಲಮಂಡಳಿ ಕಾಮಗಾರಿ ಮತ್ತೊಂದೆಡೆಗೆ ಪಾಲಿಕೆ ನಿರ್ಲಕ್ಷದಿಂದ ಸಾರ್ವಜನಿಕರು ಪರದಾಡುವಂತಾಗಿದ್ದು, ಇನ್ನಾದರೂ ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಕಾಮಗಾರಿ ಮುಗಿಸಿ, ಅತ್ತ ಕಿತ್ತು ಹೋದ ಸ್ಲ್ಯಾಬ್ ಅಳವಡಿಸೋ ಮೂಲಕ ಸಾರ್ವಜನಿಕರ ಓಡಾಟಕ್ಕೆ ಅನಕೂಲ ಮಾಡಿಕೊಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ