AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಡೈರಿ ಸರ್ಕಲ್ ರಸ್ತೆಯಲ್ಲಿ ಸ್ವಲ್ಪ ಯಾಮಾರಿದ್ರೂ ಅಪಘಾತ, ಕಾರಣ ಇಲ್ಲಿದೆ

ಬೆಂಗಳೂರಿನ ಡೈರಿ ಸರ್ಕಲ್​ನಲ್ಲಿ ರಸ್ತೆ ಅಗೆದು ಜಲಮಂಡಳಿ ಕಾಮಗಾರಿ ನಡೆಸುತ್ತಿದೆ. ನಡು ರಸ್ತೆ ಅಗೆದು ಕಾಮಗಾರಿ ಹಾಗೂ ವಿಳಂಬ ನೀತಿ, ಹಾಳಾದ ರಸ್ತೆಯಿಂದಾಗಿ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಮಳೆ ಬಂದರೆ ಗುಂಡಿ ಯಾವುದು ರಸ್ತೆ ಯಾವುದು ಎಂದು ಗೊತ್ತಾಗದೇ ಜೀವ ಭಯದಲ್ಲೆ ವಾಹನ ಚಲಾಯಸುವಂತಾಗಿದೆ.

ಬೆಂಗಳೂರು: ಡೈರಿ ಸರ್ಕಲ್ ರಸ್ತೆಯಲ್ಲಿ ಸ್ವಲ್ಪ ಯಾಮಾರಿದ್ರೂ ಅಪಘಾತ, ಕಾರಣ ಇಲ್ಲಿದೆ
ಡೈರಿ ಸರ್ಕಲ್ ರಸ್ತೆಯಲ್ಲಿ ಸ್ವಲ್ಪ ಯಾಮಾರಿದ್ರೂ ಅಪಘಾತ, ಕಾರಣ ಇಲ್ಲಿದೆ
Vinayak Hanamant Gurav
Vinayak Hanamant Gurav| Edited By: |

Updated on: Sep 09, 2024 | 8:15 AM

Share

ಬೆಂಗಳೂರು, ಸೆಪ್ಟೆಂಬರ್ 9: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗುಂಡಿ ಗಂಡಾಂತರ ತಪ್ಪುತ್ತಿಲ್ಲ. ಡೈರಿ ಸರ್ಕಲ್ ರಸ್ತೆಯಲ್ಲಿ ಸ್ವಲ್ಪ ಯಾಮಾರಿದರೂ ಅಪಘಾತಗಳಾಗುತ್ತಿವೆ. ಕೋರಮಂಗಲ ಕಡೆಯಿಂದ ಡೈರಿ ಸರ್ಕಲ್‌ಗೆ ಬರುವ ರಸ್ತೆಯಲ್ಲಿ ಜಲಮಂಡಳಿ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿಯಿಂದ ಶೇ 70ರಷ್ಟು ರಸ್ತೆ ಬಂದ್ ಆಗಿದ್ದು, ಇನ್ನುಳಿದ ಶೇ 30ರಷ್ಟು ರಸ್ತೆಯಲ್ಲಿ ಜನರು ಓಡಾಡುತ್ತಿದ್ದಾರೆ. ಇರುವ ಶೇ 30 ರಷ್ಟು ರಸ್ತೆಯಲ್ಲಿ ಕೂಡ ಯಾವುದು ಚರಂಡಿ ಯಾವುದು ರಸ್ತೆ ಎಂಬ ಅನುಮಾನ ಬರುವ ಹಾಗಿದ್ದು, ಸಾರ್ವಜನಿಕರ ಓಡಾಟಕ್ಕೆ ತೊಂದರೆ ಆಗುತ್ತಿದೆ.

ರಸ್ತೆಯುದ್ದಕ್ಕೂ ಮುರಿದು ಬಿದ್ದ ಸ್ಲಾಬ್​ಗಳ ಮೇಲೆ ವಾಹನ ಸವಾರರ ಓಡಾಟದಿಂದಾಗಿ ಪ್ರತಿದಿನ ಒಂದಿಲ್ಲೊಂದು ಅಪಘಾತಗಳು ಸಂಭವಿಸುತ್ತಿವೆ. ಬಂದರೆ ನೀರು ನಿಂತು ತೊಂದರೆ ಆಗುತ್ತದೆ. ಅತ್ತ ಫುಟ್ ಪಾತ್ ಕೂಡ ಕೆಟ್ಟು ಹೋಗಿದೆ. ಮಾತೆತ್ತಿದರೆ ಸರ್ಕಾರ ಬ್ರ್ಯಾಂಡ್ ಬೆಂಗಳೂರು ಎಂದು ಹೇಳುತ್ತದೆ, ಇಲ್ಲಿ ನಿತ್ಯ ಭಯದಲ್ಲೇ ಸಂಚಾರ ಮಾಡುವಂತಾಗಿದೆ ಎಂದು ವಾಹನ ಸವಾರರು, ಸಾರ್ವಜನಿಕರು ಆಗ್ರಹಿಸಿದ್ದಾರೆ. ಆದಷ್ಟು ಬೇಗನೆ ಕಾಮಗಾರಿ ಮುಗಿಸಿ ಸಾರ್ವಜನಿಕರ ಓಡಾಟಕ್ಕೆ ಅನಕೂಲ ಮಾಡು ಕೊಡುವಂತೆ ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬೆಮಲ್​ನಲ್ಲಿ ಸಿದ್ಧವಾಗ್ತಿದೆ ನಮ್ಮ ಮೆಟ್ರೋ ಚಾಲಕರಹಿತ ರೈಲು!

ಒಟ್ಟಿನಲ್ಲಿ ಒಂದೆಡೆ ಜಲಮಂಡಳಿ ಕಾಮಗಾರಿ ಮತ್ತೊಂದೆಡೆಗೆ ಪಾಲಿಕೆ ನಿರ್ಲಕ್ಷದಿಂದ ಸಾರ್ವಜನಿಕರು ಪರದಾಡುವಂತಾಗಿದ್ದು, ಇನ್ನಾದರೂ ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಕಾಮಗಾರಿ ಮುಗಿಸಿ, ಅತ್ತ ಕಿತ್ತು ಹೋದ ಸ್ಲ್ಯಾಬ್ ಅಳವಡಿಸೋ ಮೂಲಕ ಸಾರ್ವಜನಿಕರ ಓಡಾಟಕ್ಕೆ ಅನಕೂಲ ಮಾಡಿಕೊಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ