AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮಗಾರಿ ಹಿನ್ನೆಲೆ ನಾಳೆ ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

ನಾಳೆ (ಫೆ. 26) ಬೆಂಗಳೂರಿನ 1, 2 ಮತ್ತು 3ನೇ ಹಂತದಿಂದ ಸರಬರಾಜು ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಕಾಮಗಾರಿ ಹಿನ್ನೆಲೆ ನಾಳೆ ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ
ಪ್ರಾತಿನಿಧಿಕ ಚಿತ್ರImage Credit source: india.com
ಗಂಗಾಧರ​ ಬ. ಸಾಬೋಜಿ
|

Updated on: Feb 25, 2023 | 3:00 PM

Share

ಬೆಂಗಳೂರು: ನಾಳೆ (ಫೆ. 26) ಬೆಂಗಳೂರಿನ 1, 2 ಮತ್ತು 3ನೇ ಹಂತದಿಂದ ಸರಬರಾಜು ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ (kaveri water supply) ವ್ಯತ್ಯಯ ಉಂಟಾಗಲಿದೆ. ಪಂಪಿಂಗ್ ಸ್ಟೇಷನ್​ಗಳ ತುರ್ತು ದುರಸ್ಥಿ ಹಾಗೂ ಕೆಪಿಟಿಸಿಎಲ್ ವತಿಯಿಂದ ವಿದ್ಯುತ್ ಸ್ಥಾವರಗಳ ತುರ್ತು ನಿರ್ವಹಣೆ ಕಾರ್ಯ ಹಿನ್ನೆಲೆ ನಾಳೆ (ಫೆ. 26) ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರಿಗೆ ಕಾವೇರಿ ನೀರು ಪೂರೈಕೆ ಬಂದ್ ಆಗಲಿದೆ. ಬೆಂಗಳೂರಿನ ಅರ್ಧ ಭಾಗದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಬೆಂಗಳೂರು ಜನತೆ ಸಹಕರಿಸಬೇಕೆಂದು ಜಲಮಂಡಳಿ ಮನವಿ ಮಾಡಿದೆ.

ಮೆಟ್ರೋ ಮಾರ್ಗಕ್ಕಾಗಿ ಭೂಗತ ಸುರಂಗ ಕಾಮಗಾರಿ ನಡೆಯುತ್ತಿರುವ ಬ್ರಿಗೇಡ್​​ ರಸ್ತೆಯಲ್ಲಿ ಕಳೆದ ತಿಂಗಳು ಬೃಹತ್​ ಹೊಂಡ ಕಾಣಿಸಿಕೊಂಡಿತ್ತು. ಬಳಿಕ ಬಿಡಬ್ಲ್ಯುಎಸ್​​ಎಸ್​ಬಿ ಈ ಕಾಮಗಾರಿ ಕೈಗೆತ್ತಿಕೊಂಡಿದೆ. ಇಲ್ಲಿನ ಗುಂಡಿ ತಪ್ಪಿಸಲು ಹೋದ ಬೈಕ್​ ಸವಾರ ಬಿದ್ದು ಗಾಯ ಮಾಡಿಕೊಂಡಿರುವುದು ಕೂಡ ವರದಿಯಾಗಿತ್ತು.

ಇದನ್ನೂ ಓದಿ: BBMP: ಮಾರ್ಚ್​​ 1ರಿಂದ ಬಿಬಿಎಂಪಿ ನೌಕರರ ಪ್ರತಿಭಟನೆ: 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹ

ಎಲ್ಲೆಲ್ಲಿ ನಾಳೆ ಕಾವೇರಿ ನೀರು ಬರಲ್ಲ?

ನೇತಾಜಿ ನಗರ, ಕೆಪಿ ಅಗ್ರಹಾರ, ಟಿಪ್ಪುನಗರ, ಚಾಮರಾಜಪೇಟೆ, ಆದರ್ಶ ನಗರ, ಪಾದಾರಾಯನಪುರ, ಬಿನ್ನಿ ಲೇಔಟ್, ವಿದ್ಯಾಪೀಠ, ವಿವೇಕಾನಂದ ನಗರ, ಎನ್ ಆರ್ ಕಾಲೋನಿ, ಬನಶಂಕರಿ ಮೊದಲ ಹಂತ, ಶ್ರೀನಗರ, ಕತ್ರಿಗುಪ್ಪೆ, ತ್ಯಾಗರಾಜನಗರ, ಬಸವನಗುಡಿ, ಅಶೋಕ ನಗರ, ಶಾಂತಲಾನಗರ, ಇಸ್ರೋ ಲೇಔಟ್, ನೀಲಸಂದ್ರ, ಜಿ ರೋಡ್, ಬ್ರಿಗೇಡ್ ರೋಡ್, ಕೋರಮಂಗಲ, ಶಾಂತಿನಗರ, ನೇತಾಜಿ ನಗರ, ಕೆಪಿ ಅಗ್ರಹಾರ, ಬಿನ್ನಿ ಲೇಔಟ್, ರಾಘವೇಂದ್ರ ಕಾಲೋನಿ, ಅಂಜನಪ್ಪ ಗಾರ್ಡನ್, ವಿದ್ಯಾಪೀಠ, ಶ್ರೀನಿವಾಸ ನಗರ, ಬ್ಯಾಂಕ್ ಕಾಲೋನಿ, ಐಟಿಐ ಲೇಔಟ್.

ಇದನ್ನೂ ಓದಿ: ಕಲಾಸಿಪಾಳ್ಯ ಬಸ್​ ನಿಲ್ದಾಣ ಕೊನೆಗೂ ಉದ್ಘಾಟನೆ, ಇಲ್ಲಿಂದ ಯಾವೆಲ್ಲ ಬಸ್​ ಸಂಚರಿಸಲಿವೆ?ಇಲ್ಲಿದೆ ಮಾಹಿತಿ

ವಿವೇಕಾನಂದ ನಗರ, ಕತ್ರಿಗುಪ್ಪೆ, ತ್ಯಾಗರಾಜ ನಗರ, ಶಾಸ್ತ್ರೀ ನಗರ, ಎನ್.ಆರ್ ಕಾಲೋನಿ, ಇಸ್ರೋ ಲೇಔಟ್, ಶ್ರೀನಗರ, ಕುಮಾರಸ್ವಾಮಿ ಲೇಔಟ್ ಕೆಲವು ಭಾಗಗಳು, ಶಾಂತಲಾ ನಗರ, ಶಾಂತಿನಗರ, ಆನೆಪಾಳ್ಯ, ಆಸ್ಟಿನ್ ಟೌನ್, ಈಜಿಪುರ, ವಿವೇಕನಗರ, ಅಶೋಕ ನಗರ, ರಿಚ್ಮಂಡ್ ಟೌನ್, ವಿಕ್ಟೋರಿಯಾ ಲೇಔಟ್, ದೊಮಲೂರು, ಕಮಾಂಡ್ ಹಾಸ್ಪಿಟಲ್, ಹಾಲ್ II ಸ್ಟೇಜ್, ಅಮರಜ್ಯೋತಿ ಲೇಔಟ್, ಕೋಡಿಹಳ್ಳಿ, ಆಡುಗೊಡಿ, ಜಯನಗರ, ಗಾಂಧಿಬಜಾರ್, ಜಯಮಹಲ್, ಇಂದಿರಾನಗರ, ಜೋಗುಪಾಳ್ಯ ಸೇರಿದಂತೆ ಹಲವು ಕಡೆ ನೀರಿನ ಪೂರೈಕೆಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ