AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಆರ್ಥಿಕತೆ ಶೀಘ್ರದಲ್ಲೇ 420 ಶತಕೋಟಿ ಡಾಲರ್‌ಗೆ!

ಬೆಂಗಳೂರು ಮಹಾನಗರ ಪ್ರದೇಶದ ಆರ್ಥಿಕತೆಯನ್ನು 2037ರ ವೇಳೆಗೆ 420 ಶತಕೋಟಿ ಡಾಲರ್‌ಗೆ ಹೆಚ್ಚಿಸಲು ಮತ್ತು 30 ಲಕ್ಷ ಹೊಸ ಉದ್ಯೋಗ ಸೃಷ್ಟಿಸಲು ಕರ್ನಾಟಕ ಸರ್ಕಾರ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದೆ. ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಿಸಲು 287 ಕಿಲೋಮೀಟರ್ ವರ್ತುಲ ರೈಲು ಜಾಲ ಹಾಗೂ ಮೆಟ್ರೋ ವಿಸ್ತರಣೆ ಸೇರಿದಂತೆ ಹಲವು ಬೃಹತ್ ಮೂಲಸೌಕರ್ಯ ಯೋಜನೆಗಳ ಕುರಿತು ಚರ್ಚಿಸಲಾಗಿದೆ.

ಬೆಂಗಳೂರು ಆರ್ಥಿಕತೆ ಶೀಘ್ರದಲ್ಲೇ 420 ಶತಕೋಟಿ ಡಾಲರ್‌ಗೆ!
ಸಾಂದರ್ಭಿಕ ಚಿತ್ರImage Credit source: gettyimages.com
ಭಾವನಾ ಹೆಗಡೆ
|

Updated on: Jun 18, 2026 | 10:49 AM

Share

ಬೆಂಗಳೂರು, ಜೂನ್ 18: ನಗರದ ಆರ್ಥಿಕತೆಯನ್ನು ಅಭಿವೃದ್ಧಿ ಮಾರ್ಗಸೂಚಿ (ರೋಡ್‌ಮ್ಯಾಪ್) ಮೂಲಕ 2037ರ ವೇಳೆಗೆ 390 ರಿಂದ 420 ಶತಕೋಟಿ ಡಾಲರ್‌ಗೆ ಹೆಚ್ಚಿಸಲು ಮತ್ತು ಹೆಚ್ಚುವರಿಯಾಗಿ 25 ರಿಂದ 30 ಲಕ್ಷ ಉದ್ಯೋಗಗಳನ್ನು (Jobs) ಸೃಷ್ಟಿಸಲು ಅವಕಾಶವಿದೆ ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ.

ಮುಖ್ಯಾಂಶಗಳು

  • 2037ರ ವೇಳೆಗೆ ಬೆಂಗಳೂರು ಆರ್ಥಿಕತೆ 420 ಶತಕೋಟಿ ಡಾಲರ್‌ಗೆ ಏರಿಕೆಯಾಗಲಿದೆ.
  • ಮುಂದಿನ ದಿನಗಳಲ್ಲಿ ಬಿಎಂಆರ್ ವಲಯದಲ್ಲಿ 30 ಲಕ್ಷ ಉದ್ಯೋಗ ಸೃಷ್ಟಿಯಾಗಲಿವೆ.
  • ಸಂಚಾರ ದಟ್ಟಣೆ ನಿಯಂತ್ರಣಕ್ಕೆ 287 ಕಿಮೀ ವರ್ತುಲ ರೈಲು ಬರಲಿದೆ.

ಪ್ರಸ್ತುತ ಬಿಎಂಆರ್‌ನ ಆರ್ಥಿಕ ಮೌಲ್ಯ 149 ಶತಕೋಟಿ ಡಾಲರ್ ಆಗಿದ್ದು, ಇದು ಕರ್ನಾಟಕದ ಒಟ್ಟು ರಾಜ್ಯ ದೇಶೀಯ ಉತ್ಪನ್ನಕ್ಕೆ (GSDP) ಶೇ 43ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತಿದೆ. ಬೆಂಗಳೂರು ಮಹಾನಗರ ಪ್ರದೇಶದ ತಲಾವಾರು ಜಿಡಿಪಿ ಸುಮಾರು 9,700 ಡಾಲರ್ ಅಂದರೆ ಅಂದಾಜು 9.15 ಲಕ್ಷ ರೂ. ಆಗಿದ್ದು, ಇದು ಕರ್ನಾಟಕದ ಸರಾಸರಿಗಿಂತ (5,000 ಡಾಲರ್) 1.9 ಪಟ್ಟು ಮತ್ತು ಭಾರತದ ರಾಷ್ಟ್ರೀಯ ಸರಾಸರಿಗಿಂತ (2,500 ಡಾಲರ್) ನಾಲ್ಕು ಪಟ್ಟು ಹೆಚ್ಚಾಗಿದೆ.

ಐಎಸ್‌ಇಜಿ (ISEG) ಫೌಂಡೇಶನ್ ಸಿದ್ಧಪಡಿಸಿರುವ ಆರ್ಥಿಕ ಮಹಾಯೋಜನೆ

ಬೆಂಗಳೂರಿನ ಕೇಂದ್ರ ಭಾಗದ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ನಗರದ ಒಳಗಡೆ ಮತ್ತು ಹೊರವಲಯದಲ್ಲಿ ಕೈಗಾರಿಕೆ, ಐಟಿ/ಬಿಟಿ, ಸಂಶೋಧನೆ ಮತ್ತು ಲಾಜಿಸ್ಟಿಕ್ಸ್ ಒಳಗೊಂಡ ಹೊಸ ‘ಬೆಳವಣಿಗೆ ಕೇಂದ್ರಗಳನ್ನು’ (Growth Centres) ಸ್ಥಾಪಿಸಲು ಯೋಜಿಸಲಾಗಿದೆ.

ಸಂಚಾರ ದಟ್ಟಣೆ ನಿಯಂತ್ರಿಸಲು 287 ಕಿಲೋಮೀಟರ್ ಉದ್ದದ ವರ್ತುಲ ರೈಲು ಜಾಲ (Circular Rail Network), 400-500 ಕಿಲೋಮೀಟರ್ ಹೆಚ್ಚುವರಿ ಮೆಟ್ರೋ ಜಾಲ, 4 ಹೊಸ ಪ್ರಾದೇಶಿಕ ಕ್ಷಿಪ್ರ ಸಾರಿಗೆ (RRTS) ಕಾರಿಡಾರ್‌ಗಳು ಮತ್ತು ಉಪನಗರ ರೈಲು ಜಾಲದ ವಿಸ್ತರಣೆಯನ್ನು ಈ ಯೋಜನೆ ಒಳಗೊಂಡಿದೆ. ಈ ಅಂತಿಮ ಮಾಸ್ಟರ್ ಪ್ಲಾನ್ ವರದಿಯನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸಲಾಗುವುದು ಎಂದು ಹೇಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us